ಯಾದಗಿರಿ | ಹೋರಾಟಗಾರರ ಮೇಲಿನ ಸುಳ್ಳು ಅಟ್ರಾಸಿಟಿ ಪ್ರಕರಣ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

Date:

ಕರ್ನಾಟಕ ಪ್ರಾಂತ ರೈತ ಸಂಘದ ಹಿರಿಯ ಮುಖಂಡರಾದ ಚನ್ನಪ್ಪ ಆನೆಗುಂದಿ, ಯಲ್ಲಪ್ಪ ನಾಯ್ಕೋಡಿ ಹಾಗೂ ಯಂಕಮ್ಮ ಅವರ ಮೇಲೆ ದಾಖಲಿಸಿರುವ ಸುಳ್ಳು ಅಟ್ರಾಸಿಟಿ ಪ್ರಕರಣ ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿ ಜಿಲ್ಲಾ ಸಾಮೂಹಿಕ ಸಂಘಟನೆಗಳ ವೇದಿಕೆ ವತಿಯಿಂದ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಹಳೆ ಜಿಲ್ಲಾ ಪಂಚಾಯತ್ ಕಚೇರಿಯಿಂದ ಡಿಸಿಆರ್‌ಇ ಪೊಲೀಸ್ ಠಾಣೆವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಯಾದಗಿರ ಪೊಲೀಸ್ ಸರ್ಕಲ್ ಇನ್ಸ್‌ಪೇಕ್ಟರ್ ಡಿಸಿಆರ್‌ಇ ಅವರ ಮುಖಾಂತರ ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಮಾತನಾಡಿ, ʼರೈತ ಮುಖಂಡ ಚನ್ನಪ್ಪ ಆನೇಗುಂದಿ, ಯಲ್ಲಪ್ಪ ನಾಯ್ಕೋಡಿ ಮತ್ತು ಯಂಕಮ್ಮ ಮೇಲೆ ದೌರ್ಜನ್ಯ ನಡೆಸಿ, ಕೊಲೆ ಬೆದರಿಕೆ ಹಾಕಿದಕ್ಕೆ ದೂರು ದಾಖಲಿಸಿದ ಹಿನ್ನೆಲೆ ಹೋರಾಟಗಾರರ ಮೇಲೆ ಸುಳ್ಳು ಅಟ್ರಾಸಿಟಿ ಪ್ರತಿದೂರು ದಾಖಲಿಸಿದ್ದು ಖಂಡನೀಯ. ಸುಳ್ಳು ಅಟ್ರಾಸಿಟಿ ದಾಖಲಿಸಿದ ನಾಗಪ್ಪ ಕಾಶಿರಾಜ ಮತ್ತು ದೇವರಾಜ ಸುಭಾಸ ಅವರನ್ನು ಬಂಧಿಸಬೇಕು. ಗೋಗಿ ಠಾಣೆಯ ಪಿಎಸ್‌ಐ ದೇವೀಂದ್ರ ರೆಡ್ಡಿ ಅವರು ಸತ್ಯತೆಯನ್ನು ಪರಿಶೀಲನೆ ಮಾಡದೇ ಕೇಸ್ ದಾಲಿಸಿದ್ದು ತೀವ್ರವಾಗಿ ಖಂಡಿಸುತ್ತೇವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 31 at 8.12.01 PM

‘ಮುಖಂಡರಾದ ಚನ್ನಪ್ಪ ಆನೇಗುಂದಿ ಅವರು ಕಳೆದ ನಾಲ್ಕು ದಶಕಗಳಿಂದ ಶೋಷಿತರ, ಬಡವರ, ರೈತರ, ಕೃಷಿ ಕೂಲಿಕಾರರ, ಮಹಿಳೆಯರ, ವಿದ್ಯಾರ್ಥಿಗಳ, ದಲಿತರ ಸಮಸ್ಯೆಗಳಿಗೆ ಸ್ಪಂದಿಸಿ ಅನೇಕ ಹೋರಾಟಗಳನ್ನು ರೂಪಿಸಿದ್ದಾರೆ. ಯಾವುದೇ ಜಾತಿ ತಾರತಮ್ಯ ಇಲ್ಲದೆ ಚಳವಳಿಯಲ್ಲಿದ್ದಾರೆ. ಹೋರಾಟಗಾರರನ್ನು ಹತ್ತಿಕ್ಕುವ ಷಡ್ಯಂತ್ರ ನಡೆಸದೆ ಕೂಡಲೇ ಪ್ರಕರಣ ಹಿಂಪಡೆದು, ಅವರಿಗೆ ಕೊಲೆ ಬೆದರಿಕೆ ಹಾಕಿರುವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕುʼ ಎಂದು ಆಗ್ರಹಿಸಿದರು.

‘ರೈತಪರ ಹೋರಾಟಗಾರರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಕಾಯ್ದೆ ದುರುಪಯೋಗ ಪಡಿಸಿಕೊಂಡಿರುವ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು. ಸುಳ್ಳು ಅಟ್ರಾಸಿಟಿ ಕೇಸ್ ದಾಖಲೆ ಮಾಡಿರುವ ಗೋಗಿ ಪಿಎಸ್‌ಐ ದೇವಿಂದ್ರರೆಡ್ಡಿ ಮೇಲೆ ಸೂಕ್ತ ಕ್ರಮ ಜರುಗಿಸಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್ ಜಿಲ್ಲೆಯ ಅತಿವೃಷ್ಟಿ ಪರಿಹಾರಕ್ಕೆ ಸಿಎಂ ₹50 ಕೋಟಿ ಅನುದಾನ ನೀಡಿದ್ದಾರೆ : ಸಚಿವ ರಹೀಂ ಖಾನ್

ಸಂಘಟನೆಯ ಪ್ರಮುಖರಾದ ದಾವಲಸಾಬ್ ನದಾಫ್, ಶರಣು ಮಂದರವಾಡ, ಗುಂಡಪ್ಪ ಕಲಬುರ್ಗಿ, ಎಸ್.ಎಂ.ಸಾಗರ್, ಭೀಮರಾಯ ಪೂಜಾರಿ, ಶಾಂತಪ್ಪ ಶಾಲಿಮನಿ, ಶರಣಬಸು ಹೀರೆಮಠ, ಧರ್ಮಣ್ಣ ದೊರೆ, ಅಶೋಕ ಕಲಾಲ್, ರಾಮಯ್ಯ ಆಲ್ದಾಳ್, ನರಸಣ್ಣ ನಾಯ್ಕ, ಯಶ್ವಂತ್ ಟಿ, ವಿರೇಶ ಸಜ್ಜನ್, ಪ್ರದೀಪ ಕುಮಾರ್, ರಂಗಮ್ಮ ಕಟ್ಟಿಮನಿ, ಚಾಂದಪಾಶಾ ತಡಿಬಿಡಿ, ದೇವಿಂದ್ರಪ್ಪ ಗೌಡ ಪೊಲೀಸ್ ಪಾಟೀಲ್, ಫಕೀರಪ್ಪ ಅಹ್ಮದ್, ಮಲ್ಲಣ್ಣ ಹುಬ್ಬಳ್ಳಿ, ಶಾಹಜಾಜಿ ಬೇಗಂ, ಸೌಭಾಗ್ಯ ಮಾಲಗತ್ತಿ, ಮಹಾಲಿಂಗಪ್ಪ ಮಾಲಗತ್ತಿ, ಭೀಮರಾಯ, ಮಲ್ಲಣ್ಣ ವಡಗೇರಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...