ಯಾದಗಿರಿ | ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ; ಒಂದೇ ದಿನದಲ್ಲಿ ಅಧಿಕಾರಿಗಳ ಭೇಟಿ

Date:

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಗಣಪೂರ ಗ್ರಾಮದಲ್ಲಿ ಮೂಲ ಸೌಕರ್ಯದಿಂದ ವಂಚಿತವಾಗಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಸಿಆರ್‌ಪಿ, ಬಿಇಒ, ಬಿಆರ್‌ಪಿ, ಟಿಇಒ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪಸಪುಲ್ ಗ್ರಾಮ ಪಂಚಾಯಿತಿ ಪಿಡಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂಲಸೌಕರ್ಯದಿಂದ ವಂಚಿತವಾಗಿರುವ ಶಾಲೆ ಕುರಿತು ಸಾಮಾಜಿಕ ಕಾರ್ಯಕರ್ತ ಉಮೇಶ್‌ ಮುದ್ನಾಳ್‌ ಅವರ ಪತ್ರಿಕೆ ಹೇಳಿಕೆ ಮೇರೆಗೆ ಈ ದಿನ.ಕಾಮ್‌ ಜುಲೈ 27ರಂದು ʼಯಾದಗಿರಿ | ಐದು ದಿನಗಳಲ್ಲಿ ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ; ಉಮೇಶ ಮುದ್ನಾಳ ಎಚ್ಚರಿಕೆʼ ಎಂಬ ತಲೆಬರಹದಲ್ಲಿ ಸುದ್ದಿ ಪ್ರಕಟ ಮಾಡಿತ್ತು. ಇದನ್ನು ಗಮನಿಸಿದ ಸಂಬಂಧಪಟ್ಟ ಅಧಿಕಾರಿಗಳು ಒಂದೇ ದಿನದಲ್ಲಿ ಶಾಲೆಯತ್ತ ಧಾವಿಸಿದ್ದು, ಪರಿಶೀಲಿಸಿದ್ದಾರೆ.

ಗುರುಮಠಕಲ್ ಮತಕ್ಷೇತ್ರದ ಗಣಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 4 ಕೊಣೆ, 1 ಅಡುಗೆ ಕೋಣೆ ಮುಟ್ಟಿದರೆ ಕುಸಿದು ಬೀಳುವ ಸ್ಥಿತಿಯಲ್ಲಿರುವುದನ್ನು ಗಮನಿಸಿ ಗ್ರಾಮಸ್ಥರೊಂದಿಗೆ ವಿದ್ಯಾರ್ಥಿಗಳ ಪೊಷಕರು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಖುದ್ದು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಕಂಡು ಮಕ್ಕಳು ಮತ್ತು ಪೊಷಕರ ಜೊತೆ ಚರ್ಚಿಸಿ ಹೋರಾಟ ರೂಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಶಾಲೆಗೆ ಅಧಿಕಾರಿಗಳ ಭೇಟಿ
ಗಣಪೂರ ಶಾಲೆಗೆ ಅಧಿಕಾರಿಗಳ ಭೇಟಿ

ಈ ಕುರಿತು “ಗಣಫೂರ ಗ್ರಾಮದ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಭೂತ ಬಂಗಲೆಯಂತಿದೆ. ಶಾಲೆಯ ಸಮಸ್ಯೆಗಳನ್ನು ಐದು ದಿನಗಳಲ್ಲಿ ಪರಿಹರಿಸದಿದ್ದರೆ, ವಿಜಯಪುರ-ಹೈದರಾಬಾದ್‌ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತೇವೆ” ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ್ ಕೆ ಮುದ್ನಾಳ ಎಚ್ಚರಿಕೆ ನೀಡಿದ್ದರು.

ಸಾಮಾಜಿಕ ಕಾರ್ಯಕರ್ತ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸುದ್ದಿ ಪ್ರಕಟಗೊಂಡ ಬೆನ್ನಲ್ಲೇ ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶಾಲೆಗೆ ಓಡೋಡಿ ಬಂದು ಸಮಸ್ಯೆಗಳನ್ನು ಪರಿಶೀಲನೆ ನಡೆಸಿದ್ದಾರೆ. ನಾಲ್ಕು ತರಗತಿ ಕೋಣೆಗಳು, ಶೌಚಾಲಯ, ಅಡುಗೆ ಕೋಣೆ ಮತ್ತು ಶಾಲೆಯ ಹಿಂಭಾಗದಲ್ಲಿರುವ ಬೃಹತ್ ಮಲಿನ ನೀರಿನ ತಗ್ಗು ಗುಂಡಿಗಳನ್ನು ಸುಮಾರು 3 ತಾಸುಗಳ ಕಾಲ ಪರಿಶೀಲಿಸಿ ವಾಸ್ತವ ಅರಿತುಕೊಂಡು ಪೊಷಕರ, ಗ್ರಾಮ ಪಂಚಾಯಿತಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದರು” ಎಂದು ತಿಳಿಸಿದರು.

ಗಣಪೂರ ಶಾಲೆ

“ಶಾಲೆಯ ಸಮಸ್ಯೆ ಇಡೀ ಗ್ರಾಮದ ಸಮಸ್ಯೆಯಾಗಿದ್ದು, ಇದಕ್ಕೆ ರಾಜಕೀಯ ಬಣ್ಣ ನೀಡದೆ ಎಲ್ಲರೂ ಸಹಕಾರ ನೀಡಬೇಕು. ಕೇವಲ ನಾಮಕಾವಸ್ತೆಗೆ ಭೇಟಿ ಆಗಬಾರದು. ಸಮಸ್ಯೆ ಪರಿಹಾರವಾಗಬೇಕು. ಇಲ್ಲವಾದಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು” ಎಂದು ಎಚ್ಚರಿಸಿದರು.

“ಶೌಚಾಲಯ ನೆಲಸಮಗೊಳಿಸಲು ನಿರ್ಧರಿಸಿ, ಮಲಿನ ನೀರು ನಿಂತ ತಗ್ಗು ಗುಂಡಿಗಳಿಗೆ ಮಣ್ಣು ತುಂಬಿಸಿ ಬ್ಲೀಚಿಂಗ್ ಪೌಡರ್ ಸಿಂಪಡಿಸಲು ಸೂಚಿಸಿದರು. ಶಿಥಿಲಗೊಂಡ ನಾಲ್ಕು ಕೋಣೆಗಳು ಮತ್ತು ಅಡುಗೆ ಕೋಣೆಯನ್ನು ನೆಲಸಮಗೊಳಿಸುವಂತೆ ಲೋಕೋಪಯೋಗಿ ಇಲಾಖೆಗೆ ಅಧಿಕಾರಿಗಳು ಪತ್ರ ಬರೆದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಐದು ದಿನಗಳಲ್ಲಿ ಶಾಲೆ ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆ; ಉಮೇಶ ಮುದ್ನಾಳ ಎಚ್ಚರಿಕೆ

“ನಾಲ್ಕು ಕೋಣೆಗಳಿಗೆ ನಿರ್ಬಂಧ ವಿಧಿಸಿ, ಅಲ್ಲಿ ಪಾಠ ಪ್ರವಚನ ಮಾಡದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು. ಅಡುಗೆ ಕೋಣೆಯನ್ನೂ ನೆಲಸಮ ಮಾಡಲು ನಿರ್ಧರಿಸಲಾಯಿತು. ಬೇರೆ ಸ್ಥಳದಲ್ಲಿ ಅಡುಗೆ ಕೋಣೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಾ ಪಂ ಸಹಾಯಕ ನಿರ್ದೇಶಕರು ಭರವಸೆ ನೀಡಿದ್ದಾರೆ” ಎಂದು ಉಮೇಶ್ ಮುದ್ನಾಳ್ ತಿಳಿಸಿದರು.

ಈ ಸಂದರ್ಭದಲ್ಲಿ ಆಂಜಿನೇಯ ಬೆಳಗೇರಿ, ತಾಯಪ್ಪ ಕಾಳಬೆಳಗುಂದಿ, ಗಣಪೂರ ಗ್ರಾಮದ ಮುಖಂಡರುಗಳಾದ ನರಸಪ್ಪ, ಶಂಕರ, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ, ಗ್ರಾಪಂ ಸದಸ್ಯ ನರಸಿಂಗಪ್ಪ, ಭೀಮರಾಯ, ತಾಯಪ್ಪ ಹೊಸಡಿ, ನಿಂಗಪ್ಪ, ಚೆನ್ನಪ್ಪ, ಭೀಮರಾಯ ಬಂಕಲಗಿ, ಕಾಂತು, ಆಂಜಿನೇಯ, ಮಾದೇವಪ್ಪ, ಮಾದೇವ, ತಾಯಪ್ಪ ನವಾಬುರಜ ಸೇರಿದಂತೆ ಬಹತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...