ಯಾದಗಿರಿ | ಸಂತ್ರಸ್ತರ ದೂರು ನಿರಾಕರಿಸಿದ ಪಿಎಸ್‌ಐ; ಕ್ರಮಕ್ಕೆ ಆಗ್ರಹ

Date:

ಮಹಿಳೆಯರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದು, ಜೀವ ಬೆದರಿಕೆ ಹಾಕಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಯಾದಗಿರಿ ಜಿಲ್ಲಾ ವಡಗೇರಾ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ದೂರು ಸ್ವೀಕರಿಸದೇ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ ಕಳಿಸಿರುವ ಪಿಎಸ್ಐ ಮೇಲೆ ಕ್ರಮ ಕೈಗೊಂಡು, ವರ್ಗಾವಣೆ ಮಾಡಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ನಡೆಸಿದರು.

ಮಹಾದೇವಮ್ಮ W/O ಸಿದ್ದಲಿಂಗಪ್ಪ ನಟೇಕಾರ, ಕ್ಯಾತನಾಳ ಗ್ರಾಮದ ದಲಿತ ಸಮುದಾಯದ ಬಡ ನಿವಾಸಿಗಳಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಬದುಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಯಾತನಾಳ ಗ್ರಾಮದ ಬಂಡಪ್ಪಗೌಡ, ಆದೆಪ್ಪಗೌಡ ಕುರುಬ ಸಮುದಾಯದ ಇಬ್ಬರೂ ಸ ನಂ 1822ರ ಜಮೀನಿಗೆ ಹೊಂದಿಕೊಂಡಂತೆ ಇರುವ ಡೊಣವನ್ನು ಈಗಾಗಲೇ ಆಕ್ರಮಿಸಿಕೊಂಡಿದ್ದು, ಹೊಲದ ಒಡ್ಡು ಕೆಡಿಸುವುದು, ಜಮೀನಿನಲ್ಲಿ ನೀರು ಬಿಡುವುದು ಮಾಡುತ್ತಾರೆ. ಈ ರೀತಿ ಹಲವು ಬಾರಿ ಮಾಡಿದ್ದಾರೆ” ಎಂದು ಆರೋಪಿಸಿದರು.

“ಅವರು ಮಾಡುವ ದಬ್ಬಾಳಿಕೆಗಳನ್ನು ಕೇಳಲು ಹೋದರೆ ಇದನ್ನು ಕೇಳಲು ಹೋದರೆ, ಅವಾಚ್ಯ ಶಬ್ದಗಳಿಂದ ಬೈದು ನಿಂದಿಸುತ್ತಾರೆ. ಜುಲೈ 4ರಂದು ಇದೇ ವಿಚಾರವಾಗಿ ಕೇಳಿದ್ದಕ್ಕೆ ಬಸವಿ, ಸೂಳೆ ಎಂದು ಬೈದಿದ್ದು, ಜಾತಿ ನಿಂದನೆ ಮಾಡಿದ್ದಾರೆ. ಮಹಿಳೆ, ಹಿರಿಯಳು ಎನ್ನದೇ ಬಾಯಿಗೆ ಬಂದಂತೆ ಬೈದು ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಹಾಕಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು

“ಸಂತ್ರಸ್ತೆ ಮಹಾದೇವಮ್ಮ ಅವರ ಮಗ-ಸೊಸೆಯೊಂದಿಗೆ ಜುಲೈ 4ರಂದು ವಡಗೇರಾ ಠಾಣೆಗೆ ದೂರು ನೀಡಲು ಹೋದರೆ ಪಿಎಸ್‌ಐ ದೂರು ಸ್ವೀಕರಿಸದೆ, ʼನಿಮಗೆ ಮಾಡಲು ಕೆಲಸ ಇಲ್ಲವೇ, ನಿಮ್ಮದೇ ತಪ್ಪಿದೆʼ ಎಂದು ಬೆದರಿಸಿ, ಸಂತ್ರಸ್ತರ ದೂರು ತೆಗೆದುಕೊಳ್ಳದೆ ಜಾತಿ ನಿಂದನೆ ಮಾಡಿ, ಅಪಮಾನ ಮಾಡಿ, ಕಳಿಸಿದ್ದಾರೆ. ದಲಿತರಿಗೆ ರಕ್ಷಣೆ ನೀಡುವ ಬದಲಾಗಿ ನಿಂದನೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ವಡಗೇರಾ ಠಾಣಾಗೆ ದೂರು ನೀಡಲು ಹೋದರೆ ಪಿಎಸ್‌ಐ ದೂರು ಸ್ವೀಕರಿಸದೆ ಅವಾಚ್ಯ ಶಬ್ದಗಳಿಂದ ಬೈದು ಕಳಿಸಿರುವ ಪಿಎಸ್‌ಐ ಮೇಲೆ ಕ್ರಮ ಕೈಗೊಂಡು, ವರ್ಗಾವಣೆ ಮಾಡಬೇಕು” ಎಂದು ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

“ಒಂದು ವಾರದೊಳಗೆ ಕ್ರಮ ಕೈಗೊಳ್ಳದೆ ಹೋದರೆ ಕುಟುಂಬದವರೊಂದಿಗೆ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಮಾಡಲಾಗುವುದು” ಎಂದು ಅಂಬೇಡ್ಕರ್ ಸ್ವಾಭಿಮಾನ ಸೇನೆ ಜಿಲ್ಲಾ ಅಧ್ಯಕ್ಷ ಕಾಶಿನಾಥ್ ನಟೇಕಾರ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ₹7 ಕೋಟಿ ವೆಚ್ಚದ ʼಕ್ಲಾಕ್‌ ಟವರ್ʼ ಕಾಮಗಾರಿ ಸ್ಥಗಿತ

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ರಾಹುಲ್ ಕೊಲ್ಲೂರು, ಜಿಲ್ಲಾ ಸದಸ್ಯ ಮಲ್ಲಪ್ಪ ಕುರಕುಂದಿ, ವಡಗೇರಿ ತಾಲೂಕ ಅಧ್ಯಕ್ಷ ಸಾಬಣ್ಣ ಹಂಚಿನಾಳ, ಜಿಲ್ಲಾ ಕಾರ್ಯದರ್ಶಿ ಮೌನೇಶ್ ಯಡ್ಡಳ್ಳಿ, ಜಿಲ್ಲಾ ಸದಸ್ಯ ಭೀಮರಾಯ ಕ್ಯಾತ್ನಾಳ್  ಸೇರಿದಂತೆ  ಇತರರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...