ಯಾದಗಿರಿ | ಹದಗೆಟ್ಟ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಲೋಕೋಪಯೋಗಿ ಇಲಾಖೆಗೆ ಮನವಿ

Date:

ರಾಜ್ಯ ಹೆದ್ದಾರಿ ಯಾದಗಿರಿಯಿಂದ-ವಿಜಯಪುರಕ್ಕೆ ಹೋಗುವ ರಸ್ತೆ ಹದೆಗಟ್ಟಿದ್ದು, ರಸ್ತೆ ನವೀಕರಣ ಮಾಡುವಂತೆ ಹಾಗೂ ನಗರಸಭೆ ಪಕ್ಕದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವ ರಸ್ತೆ ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಭೀಮ ಘರ್ಜನೆ, ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ಮಾಡುವುದರ ಮೂಲಕ ಕಾರ್ಯಪಾಲಕ ಅಭಿಯಂತರರು ಲೋಕೋಪಯೋಗಿ ವಿಭಾಗ ಯಾದಗಿರಿ ಇವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸಿ ರಾಜ್ಯ ಸಂಚಾಲಕ ನಾಗಣ್ಣ ಕಲ್ಲದೇವನಹಳ್ಳಿ ಮಾತನಾಡಿ, “ರಾಜ್ಯ ಹೆದ್ದಾರಿ ಯಾದಗಿರಿ-ವಿಜಯಪುರಕ್ಕೆ ಹೋಗುವ ರಸ್ತೆ ಹದೆಗಟ್ಟಿದೆ. ಇದೊಂದು ಮುಖ್ಯ ರಸ್ತೆಯಾಗಿದ್ದು, ಸಾವಿರಾರು ವಾಹನಗಳು ಓಡಾಡುತ್ತವೆ. ದೊಡ್ಡ-ದೊಡ್ಡ ಗುಂಡಿಗಳು ಬಿದ್ದಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗಿದೆ. ದಿನನಿತ್ಯ ಅಪಘಾತಗಳು ಸಂಭವಿಸುತ್ತಿವೆ” ಎಂದು ಆತಂಕ ವ್ಯಕ್ತಪಡಿಸಿದರು.

ಯಾದಗಿರಿ

ಈ ಬಗ್ಗೆ ಹಲವಾರು ಬಾರಿ ಗಮನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ. ಈ ರಸ್ತೆ ನವೀಕರಣ ಮಾಡಲು ಮುಂದಾಗಬೇಕು ಹಾಗೂ ನಗರಸಭೆ ಪಕ್ಕದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವ ರಸ್ತೆ ಕೂಡಾ ಹದೆಗೆಟ್ಟಿದ್ದು, ಸಾರ್ವಜನಿಕರು ನಿತ್ಯ ಓಡಾಡುವ ರಸ್ತೆಯಾಗಿದೆ. ಈ ರಸ್ತೆಯನ್ನು ಕೂಡ ಡಾಂಬರೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಲೋಕೋಪಯೋಗಿ ಕಛೇರಿ ಮುಂದೆ ಧರಣಿ ಸತ್ಯಾಗ್ರಹ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಗ್ರೌಂಡ್ ರಿಪೋರ್ಟ್‌ | ಕಡಕೋಳ ಗಲಭೆ: ಗ್ರಾಮವನ್ನೇ ತೊರೆದ 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು!

ಈ ಸಂದರ್ಭದಲ್ಲಿ ರಾಜ್ಯ ಖಜಾಂಚಿ ಡಾ. ದೊಡ್ಡಪ್ಪ ಪೂಜಾರಿ, ಜಿಲ್ಲಾ ಉಪಾಧ್ಯಕ್ಷ ಶೇಖಪ್ಪ ಕಾಡಂಗೇರಾ, ನೀಲಿ ಸೇನೆ ರಾಜ್ಯ ಉಪಾಧ್ಯಕ್ಷ ಜಾಫರ್ ಹುಸೇನ್, ಜಿಲ್ಲಾ ಸಂಚಾಲಕ ಮಾನಪ್ಪ ಕಲ್ಲದೇವನಹಳ್ಳಿ, ರಾಜ್ಯ ಸಮಿತಿ ಸದಸ್ಯ ಮರಪ್ಪ ಕನ್ಯಾಕೋಳೂರು, ಜಿಲ್ಲಾ ಉಪಾಧ್ಯಕ್ಷ ಎಮ್.ಡಿ.ಲಾಲಸಾಬ್ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...