ಯಾದಗಿರಿ | ದಲಿತ ಸಮುದಾಯಕ್ಕೆ ಸಾಮಾಜಿಕ ಬಹಿಷ್ಕಾರ; ಕಂಡೂ ಕಾಣದಂತಿರುವ ಜನಪ್ರತಿನಿಧಿ, ಅಧಿಕಾರಿಗಳು

Date:

ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಚಿನ್ನಕರ ಗ್ರಾಮದಲ್ಲಿ ದಲಿತ ಸಮುದಾಯದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ನಡೆದಿದೆ.

ಸರ್ಕಾರದ ಆದೇಶದಿಂದ ಸರ್ವೇ ನಂ. 458ರಲ್ಲಿ 9 ಗುಂಟೆ ಜಾಗದಲ್ಲಿ 6 ಗುಂಟೆ ಜಾಗವನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಭವನ ಹಾಗೂ ಉದ್ಯಾನವನ ನಿರ್ಮಾಣಕ್ಕಾಗಿ‌ 2017ರ ಡಿಸೆಂಬರ್ 29ರಂದು ಆಗಿನ ಯಾದಗಿರಿ ಜಿಲ್ಲಾಧಿಕಾರಿ ಮಂಜುನಾಥ್ ಜೆ ಅವರು ಆದೇಶ ಹೊರಡಿಸಿದ್ದರು. ಆದರೆ ಸರ್ವಣಿಯರು ಬಲವಂತವಾಗಿ ಆ ಜಾಗದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲು ಜೆಸಿಬಿ ಮೂಲಕ ಜಾಗವನ್ನು ಸ್ವಚ್ಛ ಮಾಡಿಸಲು ಮುಂದಾದಾಗ ದಲಿತ ಸಮುದಾಯದವರು, ʼಅದು ಅಂಬೇಡ್ಕರ್ ಭವನಕ್ಕೆ ಮಂಜೂರಾದ ಜಾಗ. ನಾವು ಗ್ರಾಮ ಪಂಚಾಯಿತಿ ನಿರ್ಮಾಣಕ್ಕೆ ಬಿಡುವುದಿಲ್ಲʼವೆಂದು ಪಟ್ಟುಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮೇಲ್ಜಾತಿಯ ಜನರೆಲ್ಲ ಒಂದಾಗಿ ದಲಿತ ಸಮುದಾಯದವರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

“ಚಹಾ ಅಂಗಡಿಯಲ್ಲಿ, ಕ್ಷೌರಿಕ ಅಂಗಡಿ(ಕಟಿಂಗ್ ಶಾಫ್), ಕಿರಾಣಿ ಅಂಗಡಿಗಳಲ್ಲಿ ದಿನಸಿ ವಸ್ತು ಕೊಡದಂತೆ,
ಜಮೀನಿನಲ್ಲಿ ಕೂಲಿ ಕೆಲಸ ನೀಡದಿರುವುದು, ಪಶುಗಳನ್ನು ಬಿಡದಿರುವುದು, ದೇವಾಲಯಗಳಿಗೆ ಪ್ರವೇಶ ನಿರಾಕರಣೆ, ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸಲು ಅಡ್ಡಿ ಉಂಟುಮಾಡಿ ಮೇಲ್ಜಾತಿಯ ಸ್ಥಳೀಯ ಗ್ರಾಮಪಂಚಾಯಿತಿ ಸದಸ್ಯರು ನಿರ್ಬಂಧಗಳನ್ನು ಹೇರಿದ್ದಾರೆ” ಎಂದು ಗ್ರಾಮಸ್ಥರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ಸಮುದಾಯದ ಹುಸೇನಪ್ಪ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸರ್ವೆ ನಂ. 458ರಲ್ಲಿ ನಮ್ಮ ಹಿಂದಿನ ತಲೆಮಾರುಗಳಿಂದ ಆ ಜಾಗದಲ್ಲಿ ತಿಪ್ಪೆ, ದೊಡ್ಡಿಗಳು ಮಾಡಿಕೊಂಡಿದ್ದರು. ನಾವುಗಳು ಜಾಗೃತರಾಗಿ ಅದನ್ನು ಸ್ವಚ್ಛಗೊಳಿಸಿ ಅಂಬೇಡ್ಕರ್ ಸಂಘ ಕಟ್ಟಿಕೊಂಡು ಆ ಜಾಗದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಹೋರಾಟ ಮಾಡಿದ್ದೆವು. ಅದರ ಪ್ರತಿಫಲವಾಗಿ ಆ ಜಾಗವನ್ನು ನಮಗೆ ಆಗಿನ ಜಿಲ್ಲಾಧಿಕಾರಿಯವರು 2017ರಲ್ಲಿ ಮಂಜೂರು ಮಾಡಿ ಆದೇಶ ನೀಡಿದರು. ಆದೇಶ ಪ್ರತಿ ಇದ್ದರೂ ಕೂಡ ಮೇಲ್ಜಾತಿಯವರು ಉದ್ದೇಶ ಪೂರ್ವಕವಾಗಿ ಅಲ್ಲಿ ಗ್ರಾಮ ಪಂಚಾಯಿತಿ ನಿರ್ಮಾಣ ಮಾಡಲು ಮುಂದಾದಾಗ ನಾವುಗಳು ಅದಕ್ಕೆ ಅಡ್ಡಿಪಡಿಸಿದ ಕಾರಣ ದಲಿತ ಸಮುದಾಯದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ” ಎಂದರು.

ಅಂಬೇಡ್ಕರ್‌ ಭವನಕ್ಕೆ ಜಾಗ

ತಹಶೀಲ್ದಾರ್ ಶಾಂತಗೌಡ ಈ‌ ದಿನ.ಕಾಮ್‌ನೊಂದಿಗೆ ಮಾತನಾಡಿ, ಎರಡ್ಮೂರು ಬಾರಿ ನಾವು ಆ ಜಾಗವನ್ನು ವೀಕ್ಷಿಸಿದ್ದೇವೆ. ಅದನ್ನು ಆಳತೆ ಮಾಡಿದ್ದೇವೆ. ಸರ್ವೇ ನಂ. ಆದೇಶ ಪ್ರಕಾರ ನಾವು ಸತ್ಯಾಸತ್ಯತೆ ಪರಿಶೀಲಿಸಿ, ಒಂದು ವೇಳೆ ಆ ಜಾಗ ಅವರಿಗೆ ಮಂಜೂರಾಗಿದ್ದರೆ ಅವರಿಗೆ ಕೊಡಲಾಗುವುದು” ಎಂದು ತಿಳಿಸಿದರು.

“ಸಾಮಾಜಿಕ ಬಹಿಷ್ಕಾರದ ಬಗ್ಗೆ ಮಾಹಿತಿ ಇರಲಿಲ್ಲ. ಹಾಗೇನಾದರೂ ಇದ್ದಲ್ಲಿ ಖಂಡಿತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಅಂಬೇಡ್ಕರ್‌ ಭವನದ ಜಾಗ ಕಬಳಿಕೆ

ಸರ್ಕಲ್ ಇನ್‌ಸ್ಪೆಕ್ಟರ್‌ ವೀರಣ್ಣ ದೊಡ್ಡಮನಿ ಮಾತನಾಡಿ, “ಎಸ್‌ಪಿ ಅವರೊಂದಿಗೆ ಮಾತಾಡಿರುವೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುವುದು” ಎಂದು ತಿಳಿಸಿದರು.

ಸಾಮಾಜಿಕ ಹೋರಾಟಗಾರ ಹಣಮಂತ ಕೊಂಕಲ್ ಮಾತನಾಡಿ, “ದಲಿತ ಸಮುದಾಯದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ ಮೂರ್ನಾಲ್ಕು ದಿನಗಳಾದರೂ ಕೂಡ ಯಾರೊಬ್ಬ ಅಧಿಕಾರಿಗಳು ಊರಿಗೆ ಬಂದು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ. ಅಲ್ಲದೆ ಈ ವಿಷಯದಲ್ಲಿ ರಾಜಕೀಯ ಕೈವಾಡಿವಿದೆ. ಹಾಗಾಗಿ ಯಾರೊಬ್ಬರೂ ಸಮಸ್ಯೆ ಬಗೆಹರಿಸಲು ಮುಂದಾಗುತ್ತಿಲ್ಲ” ಎಂದು ದೂರಿದರು.

ಇದನ್ನೂ ಓದಿದ್ದೀರಾ? ಹಿಂದುತ್ವಕ್ಕೂ ಹಿಂದು ಧರ್ಮಕ್ಕೂ ಸಂಬಂಧವೇ ಇಲ್ಲ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಪ್ರಕಾಶ್

ಆಲ್ ಇಂಡಿಯಾ ಬಹುಜನ ಪಾರ್ಟಿ ರಾಜ್ಯ ಉಪಾಧ್ಯಕ್ಷ ಕೆ ಬಿ ವಾಸು ಮಾತನಾಡಿ, “ಗುರುಮಠಕಲ್ ತಾಲೂಕಿನ ಚಿನ್ನಕರ ಗ್ರಾಮದಲ್ಲಿ ದಲಿತ ಸಮುದಾಯದವರಿಗೆ ಸವರ್ಣೀಯರೆಂಬ ದುಷ್ಟ ಮನಸ್ಥಿತಿಯವರು ಸಾಮಾಜಿಕ ಬಹಿಷ್ಕಾರ ಹಾಕಿರುವುದು ಅತ್ಯಂತ ವಿಷಾದನೀಯ ಹಾಗೂ ಖಂಡನಾರ್ಹ. ಈ ಕುರಿತು ಸರ್ಕಾರ ಹಾಗೂ ಜಿಲ್ಲಾಡಳಿತ ಕೂಡಲೇ ತುರ್ತು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಇಂತಹ ಘಟನೆಗಳನ್ನು ತಕ್ಷಣ ನಿಯಂತ್ರಿಸಲು ಸ್ಥಳೀಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಡಳಿತ ಹಾಗೂ ಸರ್ಕಾರ ಶಿಘ್ರ ತುರ್ತು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಮಾನವೀಯತೆ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇಂತಹ ಅಸಹಿಷ್ಣುತೆ ನಡೆಯುತ್ತಿರುವುದು ಅತ್ಯಂತ ದುಃಖದಾಯಕ. ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ನಾನು ಈ ಮೂಲಕ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...