ಯಾದಗಿರಿ | ಬಿಸಿ ಪಾನಕ ಬಿದ್ದು, ವಿದ್ಯಾರ್ಥಿಗೆ ಗಂಭೀರ ಗಾಯ: ಸ್ವಾಮಿ ನಾರಾಯಣ ಗುರುಕುಲ ವಿದ್ಯಾಪೀಠದ ಆಡಳಿತ ನಿರ್ಲಕ್ಷ್ಯ

Date:

ವಸತಿಶಾಲೆಯ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿರುವಾಗ ಮೇಮೇಲೆ ಬಿಸಿ ಪಾನಕ ಬಿದ್ದು, ಮೈ ಸುಟ್ಟಿರುವುದಕ್ಕೆ ಚಿಕಿತ್ಸೆ ನೀಡಲು ₹5 ಲಕ್ಷ ಖರ್ಚಾಗುವುದಾಗಿ ವೈದ್ಯರು ಹೇಳಿದ್ದಾರೆ. ಆದರೆ ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಹೇಳಿದ್ದ ಸ್ವಾಮಿ ನಾರಾಯಣ ಗುರುಕುಲ ವಿದ್ಯಾಪೀಠದ ಮುಖ್ಯೋಪಧ್ಯಾಯರು, ಈಗ ನಮ್ಮ ಫೋನ್‌ ಕರೆಗಳನ್ನೇ ಸ್ವೀಕರಿಸುತ್ತಿಲ್ಲ ಎಂದು ವಿದ್ಯಾರ್ಥಿಯ ಪೋಷಕ ಸಂಗಮೇಶ ಎಂಬುವವರು ಆರೋಪಿಸಿದ್ದಾರೆ.

ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಅಲವತ್ತುಕೊಂಡಿರುವ ಅವರು, “ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊತಪೇಟ ಗ್ರಾಮದವರಾದ ನಾವು ಮಗ(ಚೇತನ್)ನನ್ನು ಕಲಬುರಗಿ ನಗರದ ಸ್ವಾಮಿ ನಾರಾಯಣ ಗುರುಕುಲ ವಿದ್ಯಾಪೀಠದಲ್ಲಿ ವಿದ್ಯಾಭ್ಯಾಸ ಮಾಡಲು ಬಿಟ್ಟಿದ್ದೆವು. ಅಲ್ಲಿಯ ಅಡುಗೆ ಮನೆಯಲ್ಲಿ ಮಕ್ಕಳಿಂದಲೇ ಕೆಲಸ ಮಾಡಿಸುತ್ತಿದ್ದರು. ಈ ವೇಳೆ ಜಾಮೂನು ಮಾಡುವ ಸಂದರ್ಭದಲ್ಲಿ ಅವನ ಮೇಲೆ ಬಿಸಿ ಪಾಕ ಬಿದ್ದಿದ್ದು, ಗಂಭಿರ ಗಾಯಗಳಾಗಿವೆ” ಎಂದು ಆತಂಕ ವ್ಯಕ್ತಪಡಿಸಿದರು.

“ಈ ಕುರಿತು ಮುಖ್ಯೋಪಾಧ್ಯಾಯರ ಗಮನಕ್ಕೆ ತಂದಾಗ, ಶಾಲೆವತಿಯಿಂದಲೇ ಸಂಪೂರ್ಣವಾಗಿ ಅವನ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಹೇಳಿ ಕಳುಹಿಸಿದ್ದರು. ಆದರೆ ಈಗ ನನ್ನ ಮಗನಿಗೆ ಅಲ್ಪ ಚಿಕಿತ್ಸೆ ಮಾಡಿಸಿ, ಕಣ್ಮರೆಯಾಗಿದ್ದಾರೆ. ನಾನು ಹಲವು ಬಾರಿ ಪೋನ್ ಕಾಲ್ ಮಾಡಿದರೂ ರೀಸಿವ್‌ ಮಾಡುತ್ತಿಲ್ಲ. ಇತ್ತ ವೈದ್ಯರು ಅವನ ಚಿಕಿತ್ಸೆಗಾಗಿ 5 ಲಕ್ಷ ರೂ.ವರೆಗೂ ಖರ್ಚಾಗುತ್ತದೆಂದು ಹೇಳುತ್ತಿದ್ದಾರೆ. ನಮಗೆ ದಿಕ್ಕೇ ತೋಚದಂತಾಗಿದೆ” ಎಂದು ಅವಲತ್ತುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಜಿಲ್ಲೆಯಲ್ಲಿ 245 ಇಸ್ಪೀಟ್, ಜೂಜು ಆಟಗಾರರ ಬಂಧನ

ದಯಾಳುಗಳಾದ ತಾವುಗಳು ಮಧ್ಯ ಪ್ರವೇಶಿಸಿ ನನ್ನ ಮಗನ ಆರೋಗ್ಯದ ಸಲುವಾಗಿ ಶಾಲೆಯ ಕಡೆಯಿಂದ ವೈದ್ಯಕೀಯ ಚಿಕಿತ್ಸೆ ಪರಿಹಾರವನ್ನು ಕೊಡಿಸುವುದರ ಜತೆಗೆ ಅವನ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...