ಯಾದಗಿರಿ | ಹಾಲಿನಪುಡಿ ಪೂರೈಕೆ ಸ್ಥಗಿತ; ವಿತರಣೆಗೆ ಎಐಡಿಎಸ್‌ಒ ಆಗ್ರಹ

Date:

ನಾಲ್ಕು ತಿಂಗಳಿನಿಂದ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಹಾಲಿನಪುಡಿ ಪೂರೈಕೆ ಆಗಿಲ್ಲ. ಕೂಡಲೇ ಹಾಲಿನ ಪುಡಿ ವಿತರಣೆ ಆರಂಭವಾಗಬೇಕು ಎಂದು ಎಐಡಿಎಸ್‌ಒ ಆಗ್ರಹಿಸಿದೆ.

ಯಾದಗಿರಿಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆಯ ಮುಖಂಡೆ ಶಿಲ್ಪಾ ಬಿ.ಕೆ, “ಕಳೆದ ಮೂರು ನಾಲ್ಕು ತಿಂಗಳಿಂದ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಸರ್ಕಾರದಿಂದ ಹಾಲಿನಪುಡಿ ಪೂರೈಕೆ ಆಗಿಲ್ಲ. ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಹಾಲಿನ ಸೇವನೆಯು ಅತ್ಯವಶ್ಯಕವಾಗಿದೆ. ಸರ್ಕಾರದ ಈ ಲೋಪವು ರಾಜ್ಯದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ 36 ಲಕ್ಷಕ್ಕೂ ಅಧಿಕ ಮಕ್ಕಳನ್ನು ಹಾಗೂ 6 ಲಕ್ಷಕ್ಕೂ ಹೆಚ್ಚು ಮಂದಿ ಗರ್ಭಿಣಿ ಹಾಗೂ ಬಾಣಂತಿಯರನ್ನು ಹಾಲಿನಿಂದ ವಂಚಿತರನ್ನಾಗಿಸಿದೆ” ಎಂದು ಆರೋಪಿಸಿದರು.

ಆಡಳಿತ ಸರ್ಕಾರವು ಈಗಾಗಲೇ ಅವಶ್ಯಕತೆ ಇರುವುದಕ್ಕಿಂತ 5 ಪಟ್ಟು ಕಡಿಮೆ ಹಾಲಿನಪುಡಿ ಪೂರೈಕೆ ಮಾಡುತ್ತಿದೆ. ಮೂರರಿಂದ ಆರು ವರ್ಷದ ಒಳಗಿನ ಒಂದು ಮಗುವಿನ ಸಮರ್ಪಕ ಬೆಳವಣಿಗೆಗೆ ದಿನಕ್ಕೆ ಕನಿಷ್ಟ 450 ಮಿಲಿ ಲೀಟರ್ ಹಾಲಿನ ಅವಶ್ಯಕತೆ ಇದೆ. ಅಂದರೆ 70 ಗ್ರಾಂ ಹಾಲಿನ ಪೌಡರ್ ಬದಲಿಗೆ ಸರ್ಕಾರ ಕೇವಲ 15 ಗ್ರಾಂನಷ್ಟು ವಿತರಿಸುತ್ತಿದೆ. ಬಡತನ ಮತ್ತು ಆರ್ಥಿಕ ಬಿಕ್ಕಟಿನಿಂದಾಗಿ ರಾಜ್ಯದಲ್ಲಿ ಅಪೌಷ್ಟಿಕತೆಯ ಪ್ರಮಾಣ ಹೆಚ್ಚಿದೆ. ನಮ್ಮ ದೇಶದಲ್ಲಿ ಪ್ರತಿದಿನ ಹಸಿವು ಮತ್ತು ಅಪೌಷ್ಟಿಕತೆಯಿಂದಾಗಿ 5000ಕ್ಕೂ ಅಧಿಕ ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಮಕ್ಕಳ ಪೌಷ್ಟಿಕಾಂಶಗಳ ಪೂರೈಕೆಗಾಗಿ ಲಕ್ಷಾಂತರ ಕುಟುಂಬಗಳು ಅಂಗನವಾಡಿ ಕೇಂದ್ರಗಳ ಮೇಲೆ ಅವಲಂಬಿತವಾಗಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ‘ಜಾನುವಾರು ರೋಗ’ದ ನೆಪದಲ್ಲಿ ಹಾಲಿನ ಪುಡಿ ಕೊರತೆ ಹುಟ್ಟು ಹಾಕುತ್ತಿದೆ. ಹಾಗಾದಾಗ, ಹಾಲಿನ ಪುಡಿ ಪೂರೈಕೆಯನ್ನು ಖಾಸಗಿ ಸಂಸ್ಥೆ ʼಅಮೂಲ್ʼ ವಹಿಸಿಕೊಂಡು, ಮಾರುಕಟ್ಟೆಗೆ ಪ್ರವೇಶ ಮಾಡುವಂತೆ ಸರ್ಕಾರವೇ ನೇರ ಸಹಾಯ ಮಾಡುತ್ತಿದೆ ಎಂಬ ಗುಮಾನಿಯು ಜನಸಾಮಾನ್ಯರನ್ನು ಕಾಡುತ್ತಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಸಿಡಿಲು ಬಡಿದು ಮಹಿಳೆ ಸಾವು

“ಏಕಾಏಕಿ ಹಾಲಿನಪುಡಿ ಪೂರೈಕೆ ನಿಲ್ಲಿಸಿರುವುದು ಸರ್ಕಾರವು ಮಕ್ಕಳಿಗೆ ಮಾಡಿರುವ ದ್ರೋಹ ಎಂದೇ ನಾವು ಭಾವಿಸುತ್ತೇವೆ. ಹಾಲಿನ ಕೊರತೆಯು ಲಕ್ಷಾಂತರ ಮಕ್ಕಳ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ. ಒಂದು ವೇಳೆ ರಾಜ್ಯದಲ್ಲಿ ಹಾಲಿನಪುರಿ ಪೂರೈಕೆ ಕೊರತೆ ಇದ್ದರೆ ಆ ಕುರಿತು ಕೂಡಲೇ ಗಮನಹರಿಸಲಿ. ಒಟ್ಟಾರೆ ಪರಿಸ್ಥಿತಿಯ ತೀವ್ರತೆಯನ್ನು ಅರಿತು ಕೂಡಲೇ ಹಾಲಿನಪುಡಿ ಪೂರೈಕೆಗೆ ಒತ್ತು ನೀಡಬೇಕು. ಕೂಡಲೇ ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಹಾಲಿನ ಪುಡಿ ಪೂರೈಸಬೇಕು” ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಆಗ್ರಹಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...