ಯಾದಗಿರಿ | ಕಾರ್ಮಿಕರ ನೋಂದಣಿಗೆ ವೇತನ ಚೀಟಿ ಕಡ್ಡಾಯ; ನಿರ್ಧಾರ ಹಿಂಪಡೆಯಲು ಆಗ್ರಹ

Date:

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಮಂಡಳಿಗೆ ನೋಂದಣಿ ಹಾಗೂ ನವೀಕರಣಕ್ಕೆ ವೇತನ ಚೀಟಿ ಸಲ್ಲಿಸಬೇಕೆಂಬ ಸರ್ಕಾರದ ಏಕಪಕ್ಷೀಯ ನಿರ್ಧಾರ ಹಿಂಪಡೆಯಲು ಎಐಯುಟಿಯುಸಿ ಆಗ್ರಹಿಸಿದೆ.

ಯಾದಗಿರಿ ಜಿಲ್ಲೆಯ ಎಐಯುಟಿಯುಸಿ ಕಾರ್ಯಕರ್ತ ರಾಮಲಿಂಗಪ್ಪ ಬಿ ಎನ್ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದು, “ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಹಲವು ಸೌಲಭ್ಯಗಳನ್ನು ಪಡೆಯಲು ಮಂಡಳಿ ನೀಡುವ ಲೇಬರ್ ಕಾರ್ಡ್ ಅಥವಾ ಕಾರ್ಮಿಕರ ಕಾರ್ಡ್ ಪಡೆಯಲು ಸೇವಾ ಸಿಂಧು ಆನ್ ಲೈನ್ ತಂತ್ರಾಂಶದ ಅಡಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ವೇತನ ಚೀಟಿ ಲಗತ್ತಿಸುವುದು ಕಡ್ಡಾಯಗೊಳಿಸಿರುವ ಸರ್ಕಾರದ ಏಕಪಕ್ಷೀಯ ನಿರ್ಧಾರ ಅತ್ಯಂತ ಖಂಡನೀಯ” ಎಂದರು.

“ಕಾರ್ಮಿಕರ ಸಚಿವ ಸಂತೋಷ್ ಎಸ್ ಲಾಡ್ ಮತ್ತು ಸಂಘಟನೆ ಒಗ್ಗೂಡಿ ಎಲ್ಲ ಕಟ್ಟಡ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಸಭೆ ಕರೆದಿದ್ದರು. ಸಭೆಯಲ್ಲಿ ಕಾರ್ಮಿಕರು ಮಂಡಳಿಗೆ ನೋಂದಣಿ ಮತ್ತು ನವೀಕರಣಕ್ಕೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ವರ್ಷಕ್ಕೆ ಕನಿಷ್ಠ 90 ದಿನಗಳ ವೇತನ ಚೀಟಿ ಕಡ್ಡಾಯವಾಗಿ ಲಗತ್ತಿಸಬೇಕು” ಎಂದು ಪ್ರಸ್ತಾಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರದ ಈ ಪ್ರಸ್ತಾವನೆಗೆ ಎಲ್ಲ ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರೂ, ಸರ್ಕಾರ ಏಕಪಕ್ಷೀಯವಾಗಿ ಜಾರಿಮಾಡಿದೆ. ಅಲ್ಲದೆ ಕಟ್ಟಡ ನಿರ್ಮಾಣ ಮಾಲೀಕರಾಗಲಿ ಅಥವಾ ಗುತ್ತಿಗೆದಾರರಾಗಲಿ ಕಾರ್ಮಿಕರಿಗೆ ವೇತನ ಚೀಟಿ ನೀಡುವ ನಿಯಮ ಚಾಲ್ತಿಯಲ್ಲಿಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಮರಣದಂಡನೆ ವಿಧಿಸಲು ಅವಕಾಶವಿದೆ: ನ್ಯಾ. ರಾಜೇಶ್ವರಿ

“ಸರ್ಕಾರದ ಪ್ರಸ್ತಾವನೆಯಂತೆ ಕಾರ್ಮಿಕರು ವೇತನ ಚೀಟಿ ಗುತ್ತಿಗೆದಾರರ ಬಳಿ ಕೇಳಿದರೆ ಕೆಲಸ ಕಳೆದುಕೊಳ್ಳುವ ಸಂಭವವೇ ಹೆಚ್ಚು. ಇದರಿಂದ ಬಡ ಕಟ್ಟಡ ಕಾರ್ಮಿಕರು ದೈನಂದಿನ ಕೂಲಿ ಜೊತೆಗೆ ಮಂಡಳಿ ಹಾಗೂ ಸರ್ಕಾರ ನೀಡುವ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಈ ಎಲ್ಲ ಸಾಧಕ ಬಾಧಕಗಳನ್ನು ಚರ್ಚಿಸದೆ ಕಾರ್ಮಿಕರ ಹಿತವನ್ನು ಗಾಳಿಗೆ ತೂರಿ ಏಕಪಕ್ಷೀಯವಾಗಿ ತೀರ್ಮಾನ ಮಾಡಿ ಆದೇಶ ಹೊರಡಿಸಿರುವುದು ಖಂಡನೀಯ” ಎಂದರು.

ಸರ್ಕಾರ ಈ ಆದೇಶವನ್ನು ಹಿಂಪಡೆದು, ಈ ಹಿಂದೆ ಇದ್ದ ನಿಯಮವನ್ನು ಮುಂದುವರೆಸಬೇಕು. ಅಲ್ಲದೇ ಕಳೆದ 2 ವರ್ಷಗಳಿಂದ ನೊಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಈವರೆಗೂ ಬಂದಿಲ್ಲ. ಅದನ್ನೂ ಕೂಡಲೇ ಬಿಡುಗಡೆ ಮಾಡಬೇಕು. ಮಂಡಳಿಯ ಸೌಲಭ್ಯಗಳು ನೋಂದಾಯಿತ ಎಲ್ಲ ಕಟ್ಟಡ ಕಾರ್ಮಿಕರಿಗೆ ತಲುಪುವಂತೆ ಮಾಡಬೇಕು” ಎಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಪರವಾಗಿ ಸರ್ಕಾರಕ್ಕೆ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...