ಯಾದಗಿರಿ | ಸಾಮಾಜಿಕ ಭದ್ರತೆ ಯೋಜನೆಗಳ ನಿಯಮ ಸಡಿಲಿಸಿ ಮಾಸಿಕ ₹5,000ಕ್ಕೆ ಹೆಚ್ಚಿಸುವಂತೆ ಆಗ್ರಹ

Date:

ಸಾಮಾಜಿಕ ಭದ್ರತೆ ಯೋಜನೆಗಳ ನಿಯಮವನ್ನು ಸಡಿಲಿಸಿ ಮಾಸಿಕ ₹5,000 ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ಗಾಂಧಿವಾದಿ ಜನಪರ ಚಳವಳಿ ಸಮಿತಿಯಿಂದ ಯಾದಗಿರಿ ಜಿಲ್ಲೆಯ ಸುರಪುರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

“ಕರ್ನಾಟಕದ ಘನ ಸರ್ಕಾರದಿಂದ ನೀಡುತ್ತಿರುವ ಸಾಮಾಜಿಕ ಭದ್ರತೆ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂಧ್ಯಾಸುರಕ್ಷಾ ವೇತನ, ವಿಧವಾ ವೇತನ ಮತ್ತು ಅಂಗವಿಕಲ ವೇತನ ಹಾಗೂ ಮನಸ್ವಿನಿ ವೇತನ ಯೋಜನೆಗಳು ಸಂಪೂರ್ಣ ಸಾರ್ವಜನಿಕರಿಗೆ ವಿರುದ್ಧವಾದ ನಿಯಮಗಳಿಗೆ ಒಳಪಟ್ಟಿದ್ದು, ಇದರಿಂದ ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪದಂತಾಗಿ, ಶ್ರೀಮಂತರಿಗೆ ಮತ್ತು ದಲ್ಲಾಳಿಗಳ ಪಾಲಾಗಿವೆ. ಈ ಯೋಜನೆಗಳು ಸಂಪೂರ್ಣ ಹಳ್ಳ ಹಿಡಿದಂತಾಗಿವೆ” ಎಂದು ಹೇಳಿದರು.

“ಸದರಿ ಯೋಜನೆಗಳಾದ ವೃದ್ಯಾಪ್ಯ ವೇತನಕ್ಕೆ 65 ವರ್ಷ ನಿಗದಿಪಡಿಸಿದ್ದು, ಇದು ಅಸಮಂಜಸವಾಗಿದೆ. ಯಾಕೆಂದರೆ ಈ ಭಾಗದಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ನಮ್ಮ ನಾಗರಿಕರು 55 ವರ್ಷಕ್ಕೇ ದುಡಿಯುವ ಶಕ್ತಿಯನ್ನು ಕಳೆದುಕೊಂಡಿರುತ್ತಾರೆ. ಅವರು ಈ ಪ್ರದೇಶದಲ್ಲಿ ದುಡಿಯುವ ಶಕ್ತಿ ಇರುವುದಿಲ್ಲ. ಹಾಗಾಗಿ 55ಕ್ಕೆ ಇಳಿಸುವುದು ಸೂಕ್ತ ಮತ್ತು ನ್ಯಾಯ ಸಮ್ಮತವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸಲು ಗಂಡು ಮಕ್ಕಳು ಇರಬಾರದೆಂದು ನಿಯಮವಿದೆ. ಆದರೆ ಈ ಭಾಗದಲ್ಲಿ ಗಂಡು ಮಕ್ಕಳು ಇದ್ದರೂ ಕೂಡ ತಾಯಿಯನ್ನು ಯಾರು ಆರೈಕೆ ಮಾಡುತ್ತಿಲ್ಲ ಮತ್ತು ಅವರು ತಮ್ಮ ಕುಟುಂಬದ ನಿರ್ವಹಣೆಗಾಗಿ ಗುಳೆ ಹೋಗಿರುತ್ತಾರೆ. ಅವರನ್ನು ನೋಡಿಕೊಳ್ಳಲು ಯಾರೂ ಇರುವುದಿಲ್ಲ. ಹಾಗಾಗಿ ಈ ನಿಯಮವನ್ನು ಸಡಿಲಿಸಬೇಕು” ಎಂದು ಆಗ್ರಹಿಸಿದರು.

“ಮನಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಕೋರ್ಟಿನಿಂದ ವಿಚ್ಛೇದನಾ ಪ್ರಮಾಣ ಪತ್ರ ಅವಶ್ಯಕತೆ ಇದ್ದು, ಈ ಭಾಗದ ಮಹಿಳೆಯರು ಗಂಡನ ವಿರುದ್ಧ ಯಾವುದೇ ಪ್ರಕರಣ ದಾಖಲು ಮಾಡಲು ಶಕ್ತಿ ಇಲ್ಲದ ಕಾರಣ ಅವರು ಒಂಟಿಯಾಗಿ ಬದುಕುತ್ತಿದ್ದಾರೆ. ಇವರಿಗೆ ಮಕ್ಕಳನ್ನು ಪಾಲನೆ, ಪೋಷಣೆ ಮಾಡಲು ತುಂಬಾ ಕಷ್ಟಪಡುತ್ತಿದ್ದಾರೆ. ಈ ನಿಯಮವನ್ನು ಸಡಿಲಿಸಿ ಅವರ ಹೇಳಿಕೆಯ ಮೇರೆಗೆ ಯೋಜನೆಯನ್ನು ಸಡಿಲಗೊಳಿಸಬೇಕು” ಎಂದು ಒತ್ತಾಯಿಸಿದರು.

“ಅಂಗವಿಕಲರ ಯೋಜನೆಗೆ ಶೇ.75ರಷ್ಟು ಅವಶ್ಯಕತೆ ಇದ್ದು, ಇದು ಎಷ್ಟೋ ಜನರು ಬೋಗಸ್ ಬೊಟ್ಟಿ ಕಾಗದವನ್ನು ಸೃಷ್ಟಿಸಿ ಹಣ ಪಡೆಯುತ್ತಿದ್ದಾರೆ. ನಿಜವಾದ ಫಲಾನುಭವಿಗಳು ಯೋಜನೆಯ ದಾಖಲಾತಿ ಪಡೆಯಲು ಹಣವಿಲ್ಲದ ಕಾರಣ ಶೇ.75ರಷ್ಟು ಜನರು ಯೋಜನೆ ಪಡೆದುಕೊಂಡಿಲ್ಲ. ಅವರಿಗೆ ಅಧಿಕಾರಿಗಳು ಅಂಗವಿಕಲರ ಯೋಜನೆಯ ಹಣವನ್ನು ನೀಡಿರುವುದಿಲ್ಲ. ಈ ನಿಯಮವನ್ನು ಸಡಿಲಿಸಿ ಶೇ.50ರಷ್ಟು ಪರಿಗಣಿಸಬೇಕು” ಎಂದು ಆಗ್ರಹಿಸಿದರು.

“ಒಟ್ಟಾರೆಯಾಗಿ ಸದರಿ ಯೋಜನೆಯಲ್ಲಿರುವ ಎಲ್ಲ ಅವೈಜ್ಞಾನಿಕ ನಿಯಮವನ್ನು ಕೈ ಬಿಟ್ಟು ಈ ಪ್ರದೇಶಕ್ಕೆ ಅನುಗುಣವಾಗಿ ಮತ್ತು ಬಡವರಿಗೆ ನ್ಯಾಯ ನೀಡುವ ಸಲುವಾಗಿ ನಿಯಮ ಸಡಿಲಿಸಿ ಮತ್ತು ಎಲ್ಲ ಫಲಾನುಭವಿಗಳಿಗೆ ಮಾಸಿಕ ₹5,000ದಂತೆ ಈ ಯೋಜನೆಗೆ ಮಂಜೂರು ಮಾಡಬೇಕು. ಒಂದು ವೇಳೆ ವಿಳಂಬ ನೀತಿ ಅನುಸರಿಸಿದರೆ ಆಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗುವುದು. ಬಳಿಕ ಎಲ್ಲ ಆಗುಹೋಗುಗಳಿಗೆ ತಾವೇ ಹೊಣೆಗಾರರಾಗಿರುತ್ತೀರಿ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಪ್ರಜಾತಾಂತ್ರಿಕವಾಗಿ ಹೇರಿರುವ ಎನ್‌ಇಪಿಯನ್ನು ಹಿಂಪಡೆಯಬೇಕು: ಎಐಡಿಎಸ್‌ಒ

ಈ ಸಂದರ್ಭದಲ್ಲಿ ಭಾಗಪ್ಪ, ಮಲ್ಲಮ್ಮ, ಭೀಮಪ್ಪ, ಶೇಖಮ್ಮ, ವೀರಭದ್ರಪ್ಪ ಹೈಯಾಳಪ್ಪ, ಶಿವರಾಜ್, ಅಮತೆಮ್ಮ, ಹಣಮಂತ, ಯಲ್ಲಮ್ಮ, ಭೀಮಪ್ಪ, ಅಂಜನಮ್ಮ, ಮುತ್ತಮ್ಮ, ಮಲಮ್ಮ, ಭೀಮಪ್ಪ, ಹೋನಪ್ಪ, ಬಸಲಿಂಗಮ್ಮ, ಮರೆಮ್ಮ, ಭೀಮಪ್ಪ, ಯಲ್ಲಮ್ಮ, ರಾಮಣ್ಣ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...