ಯಾದಗಿರಿ | ಅನವಾರದಲ್ಲಿ ಜಲಜೀವನ್ ಯೋಜನೆ ವಿಫಲ: 15 ದಲಿತ ಕುಟುಂಬಗಳಿಗೆ ಹಳ್ಳವೇ ಆಶ್ರಯ

Date:

ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಡಿಗೇರ ತಾಲೂಕಿನ ಅನವಾರ ಗ್ರಾಮದಲ್ಲಿ ಜಲಜೀವನ್ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದರೂ ದಲಿತ(ಎಸ್‌ಸಿ) ಕಾಲನಿಯಲ್ಲಿ ಸುಮಾರು 15 ಕುಟುಂಬಗಳಿಗೆ ಕಳೆದ ಒಂದು ವರ್ಷದಿಂದ ಕುಡಿಯುವ ನೀರು ಲಭ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಕುಡಿಯುವ ನೀರು ಸಿಗದ ಕಾರಣ ಕಾಲನಿಯ ನಿವಾಸಿಗಳು ಪಕ್ಕದ ಗ್ರಾಮದ ಹಳ್ಳದಿಂದ ನೀರು ತಂದು ಕುಡಿಯುವ ದುಃಸ್ಥಿತಿ ಎದುರಾಗಿದೆ. ಮಹಿಳೆಯರು ಪ್ರತಿದಿನ ಹಳ್ಳಕ್ಕೆ ತೆರಳಿ ನೀರು ತುಂಬಿಕೊಳ್ಳುವುದು ನಿತ್ಯದ ಕಾಯಕವಾಗಿದ್ದು, ತೀವ್ರ ಪರದಾಟ ಅನುಭವಿಸುತ್ತಿದ್ದಾರೆ. ಈ ಗ್ರಾಮ ಹತ್ತಿಗೂಡೂರಿನಿಂದ ಯಾದಗಿರಿ ಜಿಲ್ಲಾ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದ್ದರೂ, ಮೂಲ ಸೌಕರ್ಯಗಳ ಕೊರತೆ ಮುಂದುವರೆದಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಕುರಿತು ಗ್ರಾಮಸ್ಥರು ಈ ದಿನ.ಕಾಮ್‌ನೊಂದಿಗೆ ಗ್ರಾಮಸ್ಥರು ಮಾತನಾಡಿ, “ಜಲಜೀವನ ಯೋಜನೆಯಲ್ಲಿ ನಮ್ಮ ಮನೆಗಳಿಗೆ ನೀರು ಬರುತ್ತಿಲ್ಲ. ಕುಡಿಯುವ ನೀರಿಗಾಗಿ ಸಂಕಷ್ಟ ಅನುಭವಿಸುತ್ತಿದ್ದೇವೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕುಡಿಯುವ ನೀರು ವ್ಯವಸ್ಥೆ ಮಾಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮದಲ್ಲಿ ಜಲಜೀವನ ಯೋಜನೆಯ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಇದರಿಂದಲೇ ನೀರು ಸರಬರಾಜಾಗುತ್ತಿಲ್ಲ. ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಮತ್ತು ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಕಾಲನಿ ನಿವಾಸಿಗಳಿಗೆ ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ದಸಂಸ ಜಿಲ್ಲಾಧ್ಯಕ್ಷ ಹತ್ತಿಗೂಡೂರ ಶರಣರೆಡ್ಡಿ ಈ ದಿನ.ಕಾಮ್ ಜತೆ ಮಾತನಾಡಿ, “ಗ್ರಾಮಸ್ಥರಿಗೆ ಕುಡಿಯುವ ನೀರು ಕಲ್ಪಿಸದಿದ್ದರೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತನಾಡಿ, “ಜೆಜೆಎಮ್(ಜಲಜೀವನ ಮಿಷನ್) ಕಾಮಗಾರಿ ಅಪೂರ್ಣವಾಗಿದ್ದು, ಆರ್‌ಡಬ್ಲ್ಯೂಎಸ್ ಸೆಕ್ಷನ್ ಅಧಿಕಾರಿಗಳು ರೀ-ಎಸ್ಟಿಮೇಟ್ ಮಾಡಿ ಗ್ರಾಮ ಪಂಚಾಯಿತಿಗೆ ಹ್ಯಾಂಡವರ್ ಮಾಡಿದ ನಂತರ ಮಾತ್ರ ನಾವು ಮುಂದಿನ ಕ್ರಮ ಕೈಗೊಳ್ಳಲು ಸಾಧ್ಯ. ಈ ಸಂಬಂಧ ಆರ್‌ಡಬ್ಲ್ಯೂಎಸ್ ಅಧಿಕಾರಿಗೆ ಪತ್ರ ಬರೆಯಲಾಗಿದೆ. ಟೆಂಡರ್ ಪ್ರಕ್ರಿಯೆ ಆರ್‌ಡಬ್ಲ್ಯೂಎಸ್ ಕಚೇರಿಯಿಂದ ನಡೆದಿದ್ದು, ಟೆಕ್ನಿಕಲ್ ಸಮಸ್ಯೆಯಿಂದ ಕಳೆದ ಒಂದು ವರ್ಷದಿಂದ ಕಾಮಗಾರಿ ಪೆಂಡಿಂಗ್ ಇದೆ” ಎಂದು ತಿಳಿಸಿದ್ದಾರೆ.

ಆರ್‌ಡಬ್ಲ್ಯೂಎಸ್ ಸೆಕ್ಷನ್ ಅಧಿಕಾರಿ ಶರಣಪ್ಪ ಮಾತನಾಡಿ, “ಗುತ್ತಿಗೆದಾರರಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ನೊಟೀಸ್ ನೀಡಲಾಗಿದೆ. ಐಎಂಎಸ್‌ನಲ್ಲಿ ನಮೂದಾದ ಮನೆಗಳಿಗಷ್ಟೇ ಜೆಜೆಎಮ್ ಕಾರ್ಯ ನಡೆದಿದೆ. ಉಳಿದ ಮನೆಗಳು ಐಎಂಎಸ್ ಪಟ್ಟಿಯಲ್ಲಿ ಇಲ್ಲದ ಕಾರಣ ಕಾಮಗಾರಿ ಅಪೂರ್ಣವಾಗಿದೆ. ಹೆಚ್ಚುವರಿ ಅನುಮೋದನೆ ದೊರೆತ ಬಳಿಕ ಉಳಿದ ಮನೆಗಳಿಗೂ ಕಾಮಗಾರಿ ಪೂರ್ಣಗೊಳಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

ಈ ದಿನ.ಕಾಮ್ ತಾಲೂಕು ಅಧಿಕಾರಿ ಮಲ್ಲಿಕಾರ್ಜುನ ಸಂಗವರ್ ಅವರನ್ನು ಸಂಪರ್ಕಿಸಿದೆಯಾದರೂ ಕರೆಗೆ ಲಭ್ಯವಾಗಿಲ್ಲ.

ಒಟ್ಟಾರೆ, ಜಲಜೀವನ ಯೋಜನೆ ಜಾರಿಗೆ ಬಂದರೂ ಕಾಲನಿಯ 15 ಕುಟುಂಬಗಳು ಇನ್ನೂ ನೀರಿನ ನಿರೀಕ್ಷೆಯಲ್ಲೇ ಉಳಿದಿರುವುದು ಗ್ರಾಮೀಣ ಮೂಲಸೌಕರ್ಯಗಳ ಸ್ಥಿತಿಗತಿಯನ್ನೇ ಪ್ರಶ್ನಿಸುವಂತಾಗಿದೆ.‌

ಇದನ್ನೂ ಓದಿದ್ದೀರಾ? ಬಂಗಾಳ ಚುನಾವಣೆ | ಮುಸ್ಲಿಂ ಪ್ರಾಬಲ್ಯವಿರುವ ಟಿಎಂಸಿ ಭದ್ರಕೋಟೆಯನ್ನು ಭೇದಿಸುವುದೇ ಬಿಜೆಪಿ?

ಬಾಬಾಸಾಹೇಬ್ ಅಂಬೇಡ್ಕರ್ ನೇತೃತ್ವದಲ್ಲಿ 1927ರಂದು ದಲಿತರು ಚೌಡಾರ್‌ ಕೆರೆಯ ನೀರನ್ನು ಮುಟ್ಟುವ ಮೂಲಕ ಆರಂಭಿಸಿದ ಚಳವಳಿ ದಲಿತರ ನೀರು ಹಕ್ಕುಗಳಿಗಾಗಿ ಮುನ್ನುಗ್ಗಿದ ಮೊದಲ ಬೃಹತ್‌ ಬಂಡಾಯವಾಗಿತ್ತು. ಅಂದಿನಿಂದ ದಲಿತ ಸಮುದಾಯಕ್ಕೆ ನೀರು ಹಕ್ಕುಗಳು(water rights) ಭಾರತದಲ್ಲಿ ಮೂಲಭೂತ ಮಾನವ ಹಕ್ಕುಗಳ ಭಾಗವಾಗಿವೆ.

ʼಭಾರತೀಯ ಸಂವಿಧಾನದ ಆರ್ಟಿಕಲ್ 21(ಜೀವನದ ಹಕ್ಕು) ಅಡಿಯಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಅಗತ್ಯಗಳನ್ನು ಸರ್ಕಾರ ಒದಗಿಸಬೇಕು. ನೀರು ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದ್ದು, ತಾರತಮ್ಯವಿಲ್ಲದೆ ಎಲ್ಲರಿಗೂ ಲಭ್ಯವಾಗಬೇಕೆಂದು ಸುಪ್ರೀಂ ಕೋರ್ಟ್ ಹಲವು ತೀರ್ಪುಗಳಲ್ಲಿ ಸ್ಪಷ್ಟಪಡಿಸಿದೆ. ಆದರೂ ಗ್ರಾಮೀಣ ಭಾರತದಲ್ಲಿ ಈಗಲೂ ಶೇ.20ಕ್ಕಿಂತ ಅಧಿಕ ದಲಿತ ಕುಟುಂಬಗಳಿಗೆ ಸುರಕ್ಷಿತ ಕುಡಿಯುವ ನೀರು ಲಭ್ಯವಿಲ್ಲ. ದಲಿತ ಗ್ರಾಮಗಳಲ್ಲಿ ಶೇ.48ಕ್ಕಿಂತ ಹೆಚ್ಚು ನೀರಿನ ಮೂಲಗಳಿಗೆ ಪ್ರವೇಶ ನಿರಾಕರಣೆ ಎದುರಾಗುತ್ತದೆ.

WhatsApp Image 2024 11 08 at 12.18.37 667ed234 e1731048718511
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...