ಯಾದಗಿರಿ | ಸಾಲ ಮರುಪಾವತಿಗೆ ಕೆಬಿಎಸ್ ಬ್ಯಾಂಕ್‌ ಸಿಬ್ಬಂದಿ ಕಿರುಕುಳ : ಮಹಿಳೆಯರ ಆರೋಪ

Date:

ಕೃಷ್ಣ ಭೀಮಾ ಸಮೃದ್ಧಿ ಲೋಕಲ್‌ ಏರಿಯಾ ಬ್ಯಾಂಕ್‌ ಲಿಮಿಟೆಡ್‌ (ಕೆಬಿಎಸ್) ಬ್ಯಾಂಕ್‌ ಸಿಬ್ಬಂದಿ ಸಾಲ ಮರುಪಾವತಿಸುವಂತೆ ಮನೆಗೆ ಬಂದು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ಬ್ಯಾಂಕ್‌ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

ಈ ಸಂಬಂಧ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದ ಮಹಿಳೆಯರು ಯಾದಗಿರಿ ಗ್ರಾಮೀಣ ಠಾಣೆಗೆ ಮನವಿ ಸಲ್ಲಿಸಿದ್ದು, ಕೆಬಿಎಸ್ ಬ್ಯಾಂಕ್‌ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ʼಕೃಷಿ ಕೂಲಿ ಕಾರ್ಮಿಕರಾದ ನಾವು ಬ್ಯಾಂಕ್‌ನಿಂದ ಸಾಲ ಪಡೆದು ಮರುಪಾವತಿ ಮಾಡುತ್ತಿದ್ದೇವೆ. ಇನ್ನೂ ಒಂದಿಷ್ಟು ಸಾಲ ಬಾಕಿ ಇದೆ. ಆದರೆ ಸದ್ಯಕ್ಕೆ ಯಾವುದೇ ಕೆಲಸ ಇಲ್ಲದ ಕಾರಣ ಸಾಲ ಮರುಪಾವತಿಸಲು ಸಾಧ್ಯವಾಗುತ್ತಿಲ್ಲ. ಆದರೆ ಇದಕ್ಕೆ ಅವಕಾಶ ಕೊಡದ ಕೆಬಿಎಸ್ ಬ್ಯಾಂಕ್ ಸಿಬ್ಬಂದಿ ಪ್ರತಿದಿನ ಮನೆ ಬಾಗಿಲಿಗೆ ಬಂದು ಕಿರುಕುಳ ನೀಡುತ್ತಿದ್ದಾರೆʼ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೆಬಿಎಸ್ ಬ್ಯಾಂಕ್ ಫೈನಾನ್ಸ್ ಸಿಬ್ಬಂದಿ ಸಾಲಗಾರರ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ಬೈಯ್ದು, ಮನಸ್ಸಿಗೆ ಬೇಜಾರು ಮಾಡಿದ್ದಾರೆ. ಇದರಿಂದ ನಮ್ಮ ಜೀವಕ್ಕೆ ಏನಾದರೂ ಅನಾಹುತವಾದರೆ ಬ್ಯಾಂಕ್‌ ಸಿಬ್ಬಂದಿಯೇ ಕಾರಣರಾಗುತ್ತಾರೆ. ಕೂಡಲೇ ಬ್ಯಾಂಕ್‌ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಮೇಲೆ ಕಾನೂನು ಕ್ರಮ ಜರುಗಿಸಿ ನಮಗೆ ನ್ಯಾಯ ಒದಗಿಸಿʼ ಎಂದು ಕೋರಿದ್ದಾರೆ.

ಇದನ್ನೂ ಓದಿ : ಯಾದಗಿರಿ | ರೈತ ಹೋರಾಟಗಾರ ಚನ್ನಪ್ಪ ಆನೇಗುಂದಿ ಮೇಲೆ ದೂರು : ಪ್ರಾಂತ ರೈತ ಸಂಘ ಖಂಡನೆ

ಈ ಸಂದರ್ಭದಲ್ಲಿ ಶಾಣಮ್ಮ ಹನುಮಂತ, ನಿಂಗಮ್ಮ ನಿಂಗಪ್ಪ, ಮಲ್ಲಮ್ಮ ಚನ್ನಬಸಪ್ಪ, ಬಸಮ್ಮ ವೆಂಕಟೇಶ್, ಲಕ್ಷ್ಮೀ ರಾಮಣ್ಣ, ಪದ್ಮಾವತಿ, ಅನುಸಮ್ಮ, ನಾಗಮ್ಮ ಮಹಾದೇವಮ್ಮ , ನಾಗಮ್ಮ , ಪಾರ್ವತಿ , ನಾಗಮ್ಮ, ದೇವಿದ್ರಮ್ಮ, ಬಸಮ್ಮ ಮತ್ತಿತರರು ಇದ್ದರು.

ವರದಿ: ಸುಧೀರ್ ಕೋಟಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...