ಯಾದಗಿರಿ | ಜಾತಿಗಣತಿಯಲ್ಲಿ ಮಾದಿಗ ಎಂದು ಬರೆಯಿಸಿ: ಮಂಜುನಾಥ ಮಲ್ಹಾರ ಮನವಿ

Date:

ಹಬ್ಬ-ಹರಿದಿನ, ಜಾತ್ರೆ, ಜಯಂತಿ ಆಚರಣೆ, ಮದುವೆ ಸಮಾರಂಭಗಳನ್ನು ಕೈಬಿಟ್ಟು ಜಾತಿಗಣತಿಯತ್ತ ಗಮನ ಹರಿಸಬೇಕು.
ಒಳ ಮೀಸಲಾತಿ ಜಾರಿಗಾಗಿ ಸಮೀಕ್ಷೆಗಾಗಿ ನಿಮ್ಮ ಮನೆಗೆ ಬಂದಾಗ ನಮ್ಮ ಜಾತಿ ‘ಮಾದಿಗ’ ಎಂದು ಹೆಮ್ಮೆಯಿಂದ ಬರೆಯಿಸಬೇಕು ಎಂದು ಯಾದಗಿರಿ ಸಾಮಾಜಿಕ ಹೋರಾಟಗಾರ ಮಂಜುನಾಥ ಎಸ್ ಮೇತ್ರಿ ಮಲ್ಹಾರ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಒಳಮೀಸಲಾತಿ ಜಾರಿಗಾಗಿ ಸಮೀಕ್ಷೆ ನಡೆಸಲು ಗಣತಿದಾರರು, ಪರಿಶಿಷ್ಟ ಜಾತಿಗಳಲ್ಲಿನ ಮೂಲಜಾತಿಗಳ ಸಮೀಕ್ಷೆಗಾಗಿ ಮನೆ-ಮನೆ ಭೇಟಿ ನೀಡುತ್ತಾರೆ. ಆಗ ಮೂಲ ಜಾತಿಗಳ ಮಾಹಿತಿ ಕೇಳಿದಾಗ, ಆದಿ ದ್ರಾವಿಡ, ಆದಿ ಆಂಧ್ರ, ಆದಿ ಕರ್ನಾಟಕ ಎಂದು ಹೇಳಬೇಡಿ ಬದಲಾಗಿ ʼಮಾದಿಗʼ ಎಂದು ಹೇಳಿ ಬರೆಯಿಸಬೇಕು” ಎಂದಿದ್ದಾರೆ.

“ದಾಸ್ ಅವರು ನೀಡಿರುವ ವರದಿಯಂತೆ ರಾಜ್ಯ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ. ಅದರಂತೆ ಮೇ 5ರಿಂದ ಜಾತಿ ಗಣತಿ ಆರಂಭವಾಗಿದ್ದು, ಯಾರು ಈ ಬಗ್ಗೆ ನಿರ್ಲಕ್ಷ್ಯ ಮಾಡದೆ ಮಾದಿಗ ಸಮುದಾಯದ ಎಲ್ಲಾ ಪ್ರಜ್ಞಾವಂತ, ಹಿರಿಯರು, ರಾಜಕೀಯ ನಾಯಕರು, ವಿದ್ಯಾರ್ಥಿ ಸಮೂಹ, ಮುಖಂಡರು ದ್ವಂದ್ವ ನೀತಿ ಅನುಸರಿಸಿದೆ ಎಚ್ಚರಿಕೆಯಿಂದ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗೂಡಿ ಮಾದಿಗ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಯಾದಗಿರಿ | ನೀರು ಕುಡಿಯಲು ಹೋದ ಮೂವರು ಬಾಲಕರು ದುರ್ಮರಣ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...