ಯಾದಗಿರಿ | ದೇವಪ್ಪ ಅಬ್ಲಿ ಭಾರತೀಯ ಸೇನೆಗೆ ಆಯ್ಕೆ; ಗ್ರಾಮಸ್ಥರಿಂದ ಅದ್ದೂರಿ ಮೆರವಣಿಗೆ

Date:

ಹುಣಸಗಿ ತಾಲೂಕಿನ ಮಂಜಲಾಪುರಹಳ್ಳಿಯ ಯುವಕ ದೇವಪ್ಪ ಅಬ್ಲಿ ಭಾರತೀಯ ಸೇನೆಗೆ ಆಯ್ಕೆಯಾಗಿದ್ದು, ಗ್ರಾಮದಲ್ಲಿ ಹೆಮ್ಮೆ ಮತ್ತು ಸಂತಸದ ವಾತಾವರಣ ಮೂಡಿಸಿದೆ. ಬಡತನದ ನಡುವೆಯೂ ಗುರಿ ತಲುಪಿ ಸಾಧನೆ ಮಾಡಿರುವ ದೇವಪ್ಪ ಸ್ಥಳೀಯ ಯುವಕರಿಗೆ ಪ್ರೇರಣಾದಾಯಕ ಮಾದರಿಯಾಗಿದ್ದಾರೆ.

ಅಗ್ನಿವೀರ 6ನೇ ಬ್ಯಾಚ್‌ನ ದೇವಪ್ಪ ಅಬ್ಲಿ, ಲಖ್ನೋವಿನ ಎಎಮ್‌ಸಿ ಸೆಂಟರ್ ಅಂಡ್ ಕಾಲೇಜಿನಲ್ಲಿ ಏಳು ತಿಂಗಳ ತರಬೇತಿಯನ್ನು ಪೂರ್ಣಗೊಳಿಸಿ ಗುರುವಾರ ಸ್ವಗ್ರಾಮಕ್ಕೆ ಆಗಮಿಸಿದ ಹಿನ್ನೆಲೆ ಗ್ರಾಮಸ್ಥರು ಹಾಗೂ ಹುಣಸಗಿ ಪಟ್ಟಣದ ಜನತೆ ಅದ್ದೂರಿಯಾಗಿ ಮೆರವಣಿಗೆ ಆಯೋಜಿಸಿದ್ದರು.

ಹುಣಸಗಿ ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಬೈಕ್ ಮೆರವಣಿಗೆ ಮತ್ತು ತೆರೆದ ವಾಹನದಲ್ಲಿ ಮೆರವಣಿಗೆ ನಡೆಯಿತು. ಯುವ ಯೋಧನಿಗೆ ಜಯಘೋಷ ಹಾಗೂ ಹರ್ಷೋದ್ಗಾರದ ನಡುವೆ ಭವ್ಯ ಸ್ವಾಗತ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸನ್ಮಾನ ಸ್ವೀಕರಿಸಿದ ದೇವಪ್ಪ ಅಬ್ಲಿ ಅವರು ಹೆತ್ತವರಿಗೆ ಪರೇಡ್ ಡ್ರಿಲ್ ಮೂಲಕ ಸೆಲ್ಯೂಟ್ ನೀಡಿ, ಟೋಪಿ ಮುಡಿಗೇರಿಸುವ ಮೂಲಕ ಕೃತಜ್ಞತೆ ವ್ಯಕ್ತಪಡಿಸಿದರು. ಗ್ರಾಮದಲ್ಲಿ ನಡೆದ ಈ ಅದ್ದೂರಿ ಮೆರವಣಿಗೆ ಸ್ಥಳೀಯ ಯುವಕರಲ್ಲಿ ಸೇನೆಗೆ ಸೇರುವ ಆಸಕ್ತಿ ಇನ್ನಷ್ಟು ಹೆಚ್ಚಿಸಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಮಲ್ಲಣ್ಣ ಬಿರಾದಾರ, ಹಣಮೇಶ ತೋಳದಿನ್ನಿ, ಅರುಣ್ ದೊರೆ ಹುಣಸಗಿ, ಸುನಿಲ್ ಸೇರಿದಂತೆ ಹಲವರು ದೇವಪ್ಪ ಅಬ್ಲಿಗೆ ಶುಭಹಾರೈಕೆ ತಿಳಿಸಿ ಸನ್ಮಾನಿಸಿದರು. ಬಳಿಕ ಮಂಜಲಾಪುರ ಹಳ್ಳಿಯ ಪ್ರಮುಖ ಬೀದಿಗಳಲ್ಲೂ ಮೆರವಣಿಗೆ ಮುಂದುವರಿಯಿತು.

ಇದನ್ನು ಓದಿದ್ದೀರಾ? ‘ಲೀಪ್’ ಯೋಜನೆಯಡಿ ಕಲಬುರಗಿಯಲ್ಲಿ ಐಟಿ ಬಿಟಿ ವಲಯ ವಿಸ್ತಾರ: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮದ ಪ್ರಮುಖರಾದ ಪ್ರಧಾನೇಪ್ಪ ಮೇಟಿ, ಮಲ್ಲಪ್ಪ ಮೇಟಿ, ಚಂದಪ್ಪ ಬೈಚಬಾಳ, ವೆಂಕಟೇಶ್ ಬಿರಾದಾರ, ಮಲ್ಲಪ್ಪ ಸಾಲವಾಡಗಿ ಮತ್ತಿತರರು ಯುವ ಸೈನಿಕನನ್ನು ಅಭಿನಂದಿಸಿದರು. ಗೆಳೆಯರ ಬಳಗ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...