208ನೇ ಭೀಮಾ ಕೋರೆಗಾಂವ್ ವಿಜಯೋತ್ಸವದ ಯಾದಗಿರಿ ತಾಲೂಕಿನ ಲಿಂಗೇರಿ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ವಿಜಯೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಯಪ್ಪ ಅವರು ಮಾತನಾಡಿ, ‘ಭೀಮಾ ಕೋರೆಗಾಂವ್ ವಿಜಯೋತ್ಸವವು ಸಮಾನತೆ, ಸ್ವಾಭಿಮಾನ ಹಾಗೂ ಹೋರಾಟದ ಪ್ರತೀಕವಾಗಿದ್ದು, ಡಾ. ಬಿ.ಆರ್. ಅಂಬೇಡ್ಕರ್ ಅವರ ಆಲೋಚನೆಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು’ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಮಂಜುನಾಥ ಮೇತ್ರಿ ಮಲ್ಹಾರ ಅವರು ಮಾತನಾಡಿ, ‘ಭೀಮಾ ಕೋರೆಗಾಂವ್ ವಿಜಯೋತ್ಸವವು ದಲಿತ ಸಮುದಾಯದ ಶೌರ್ಯ, ಸ್ವಾಭಿಮಾನ ಹಾಗೂ ಸಂವಿಧಾನಾತ್ಮಕ ಹೋರಾಟದ ಜೀವಂತ ಸಂಕೇತವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಚಿಂತನೆಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ’ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ : ಎಐಡಿಎಸ್ಒ ನೇತೃತ್ವದಲ್ಲಿ ಪ್ರತಿಭಟನೆ
‘ಭೀಮಾ ಕೋರೆಗಾಂವ್ ಯುದ್ಧದ ಐತಿಹಾಸಿಕ ಮಹತ್ವವನ್ನು ಸ್ಮರಿಸಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುವ ಸಂಕಲ್ಪವನ್ನು’ ಈ ಸಂದರ್ಭದಲ್ಲಿ ಪುನರುಚ್ಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬಸಲಿಂಗಪ್ಪ, ಮರೀಲಿಂಗಪ್ಪ, ನಾಗರಾಜ, ಬಸರಾಜ, ರಂಗಪ್ಪ, ಸಾಬಣ್ಣ, ಮಲ್ಲೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.





