ಯಾದಗಿರಿ | ರೈತರಿಂದ ಗಾಂಧಿ ಜಯಂತಿ ಆಚರಣೆ; ಸುರಪುರ ತಾಲೂಕು ಬರಪೀಡಿತ ಘೋಷಣೆಗೆ ಒತ್ತಾಯ

Date:

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸುರಪುರ ತಾಲೂಕು ಸಮಿತಿ ವತಿಯಿಂದ ಪಟ್ಟಣದ ಗಾಂಧಿ ವೃತ್ತದಲ್ಲಿ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಟೇಲರ್ ಮಂಜಿಲ್‌ನಲ್ಲಿ ಸಭೆ ಸೇರಿ 154ನೇ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಈ ವೇಳೆ ಸಂಘದ ತಾಲೂಕು ಅಧ್ಯಕ್ಷ ಹಣಮಂತರಾಯ ಮಡಿವಾಳರ ಸುರಪುರ ಮಾತನಾಡಿ, “ಗಾಂಧೀಜಿಯವರು 1859ರ ಅಕ್ಟೋಬರ್ ೦೨ರಂದು ಜನಿಸಿದರು. ನಮ್ಮ ದೇಶದಲ್ಲಿ ಬ್ರಿಟೀಷರ ವಿರುದ್ಧ ಹೋರಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ನಂತರ ಅವರನ್ನು ಮಹಾತ್ಮ ಎಂದು ಕರೆಯಲಾಯಿತು. ಏಕೆಂದರೆ, ಅವರು ತಾಳ್ಮೆ, ಸಹನೆ, ಅಹಿಂಸೆಯಿಂದ ಹೋರಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅಂದು ಅವರೆಲ್ಲ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎನ್ನುವ ಕಾರಣಕ್ಕೆ, ಇಂದು ಎಲ್ಲಾ ಜಾತಿ ಜನಾಂಗದವರು ನೆಮ್ಮದಿಯಿಂದ ಬಾಳಬೇಕಾಗಿದೆ. ಇಲ್ಲವಾದಲ್ಲಿ ನಾವಿನ್ನೂ ಪರಕೀಯರ ಗುಲಾಮಗಿರಿಯಲ್ಲಿ ಇರಬೇಕಾಗಿರುತ್ತಿತ್ತು. ಅವರನ್ನು ನಾವು ಇವತ್ತು ಸ್ಮರಿಸಬೇಕು.

ಇದೇ ವೇಳೆ, ರಾಜ್ಯದ 161 ತಾಲೂಕುಗಳನ್ನು ಬರಗಾಲವೆಂದು ಘೋಷಣೆ ಮಾಡಿದೆ. ಆದರೆ, ಯಾದಗಿರಿ ಜಿಲ್ಲೆಯ ಆರು ತಾಲೂಕುಗಳ ಪೈಕಿ ಕೇವಲ ಎರಡು ತಾಲೂಕುಗಳಾದ ಶಹಾಪುರ, ವಡಿಗೇರಾ ಬರಗಾಲವೆಂದು ಘೋಷಣೆ ಮಾಡಿದ್ದಾರೆ. ಇನ್ನುಳಿದ ಸುರಪುರ, ಹುಣಸಗಿ, ಗುರುಮಿಠಕಲ್, ಯಾದಗಿರಿ ಈ ನಾಲ್ಕು ತಾಲೂಕುಗಳಲ್ಲಿ ಸಾಧಾರಣ ಬರಗಾಲವೆಂದು ಘೋಷಣೆ ಮಾಡಿ, ಮಲತಾಯಿ ಧೋರಣೆ ತೋರಿಸಿರುವುದು ಖಂಡನೀಯ. ಈ ಕೂಡಲೇ ಯಾದಗಿರಿ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡಿ, ರೈತರಿಗೆ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಹುಣಸಗಿ ತಾಲೂಕಾ ಅಧ್ಯಕ್ಷ ಸಾಹೇಬಗೌಡ ಮದಲಿಂಗನಾಳ, ಸುರಪುರ ತಾಲೂಕ ಸಂಚಾಲಕ ಭೀಮಣ್ಣ ತಿಪ್ಪನಟಗಿ, ನಿಂಗನಗೌಡ ಗುಳಬಾಳ ಗ್ರಾಮ ಘಟಕ ಅಧ್ಯಕ್ಷ ಭೀಮಣ್ಣಗೌಡ ಕರ್ನಾಳ, ಸುರಪುರ ತಾಲೂಕಾ ಉಪಾಧ್ಯಕ್ಷ ಶಂಕ್ರಪ್ಪ ಗುಳಬಾಳ ಸೇರಿದಂತೆ ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...