ಯಾದಗಿರಿ | ಜಾತಿ ವ್ಯವಸ್ಥೆ ಪ್ರತಿಪಾದಕರು ಕಾಂತರಾಜ ವರದಿ ವಿರೋಧಿಸುತ್ತಿದ್ದಾರೆ: ಕೆ.ಎನ್.ಲಿಂಗಪ್ಪ

Date:

ಕರ್ನಾಟಕದಲ್ಲಿ 2013 ರಲ್ಲಿ ಕಾಂತರಾಜ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ಲೋಪವಾಗಿಲ್ಲ, ಅಂದು ಸಮೀಕ್ಷೆಗೆ ಸರಿಯಾಗಿ ಮಾಹಿತಿ ನೀಡದವರೇ ಈಗ ಅದನ್ನು ವಿರೋಧಿಸುತ್ತಿದ್ದಾರೆ ಎಂದು ಕಾಂತರಾಜ್ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಲ್ಲಿದ್ದ ಸದಸ್ಯ ಕೆ.ಎನ್.ಲಿಂಗಪ್ಪ ಹೇಳಿದರು.

ಸುರಪುರ ನಗರದ ಡಾ.ಬಾಬು ಜಗಜೀವನರಾಮ್ ಸಭಾ ಭವನದಲ್ಲಿ ಅಹಿಂದ ವೇದಿಕೆ ಹಮ್ಮಿಕೊಂಡಿದ್ದ ಕಾಂತರಾಜ್ ವರದಿಯ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2015ರ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು.

“ಕಾಂತರಾಜ್ ಆಯೋಗದ ಸಮೀಕ್ಷೆಯಲ್ಲಿ 1.33 ಲಕ್ಷ ಜನರಿಗೆ 2 ಬಾರಿ ತರಬೇತಿ ನೀಡಿ ಮಾನದಂಡ ಪ್ರಕಾರ ಸಮೀಕ್ಷೆಯನ್ನು ಮಾಡಿಸಲಾಗಿದೆ, ಇದಕ್ಕಾಗಿ 22,289 ಜನರನ್ನು ಮೇಲ್ವಿಚಾರಕರನ್ನು ನೇಮಿಸಲಾಗಿತ್ತು. ಅಲ್ಲದೆ ಈ ಸಮೀಕ್ಷೆಗೆ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ಜಿ.ಪಂ ಸಿಇಓ, ತಹಸೀಲ್ದಾರ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ಹಾಗೂ ಶಿಕ್ಷಕರು ಒಳಗೊಂಡು ಸಮೀಕ್ಷೆ ನಡೆಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂತರಾಜ ವರದಿಗೆ ಈಗ ವಿರೋಧಿಸುವ ಜನ ವರ್ಣಾಶ್ರಮ ಪದ್ದತಿ ಮುಂದುವರೆಯಬೇಕು ಎನ್ನುವ  ಮನಸ್ಥಿತಿಯಿಂದ ಹೇಳುತ್ತಿದ್ದಾರೆ. ವರದಿ ಜಾರಿಯಾದರೆ ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳು ಪ್ರಗತಿ ಸಾಧಿಸಲು ಅನುಕೂಲವಾಗುತ್ತದೆ, ಇದರಿಂದ ನಮಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ವಿರೋಧಿಸುತ್ತಿದ್ದಾರೆ” ಎಂದು ದೂರಿದರು.

 “ಹಿಂದಿನ ಸರಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾಸ್ವಾಮಿ, ಬಿ.ಎಸ್.ಯಡಿಯೂರಪ್ಪನವರು ವರದಿ ಸ್ವೀಕರಿಸಲು ಒಪ್ಪದೆ ಏನಾದರೂ ಸಬೂಬು ಹೇಳಿ ನಮ್ಮ ಆಯೋಗದ ತಂಡಕ್ಕೆ ವಾಪಸ್ ಕಳುಹಿಸಿದ್ದಾರೆ. ನಂತರ ಆಯೋಗವನ್ನೆ ರದ್ದುಗೊಳಿಸಿದರು. ಸಮೀಕ್ಷಾ ವರದಿಯ 45 ಸಂಪುಟಗಳನ್ನು ಒಂದು ಕೋಣೆಯಲ್ಲಿ ಭದ್ರವಾಗಿಟ್ಟು ಬೀಗ ಹಾಕಿ ಐಎಎಸ್ ಅಧಿಕಾರಿಯೊಬ್ಬರನ್ನು ಅದರ ಜವಾಬ್ದಾರಿ ನೀಡಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಕೋಣೆಯ ಬೀಗ ತೆಗೆದು ವರದಿ ನೋಡಿರುವ ಕಾರಣಕ್ಕೆ ಇಂದು ವಿರೋಧ ಮಾಡುತ್ತಿರಬಹುದು ಎಂಬ ಅನುಮಾನ ಮೂಡುತ್ತಿದೆ” ಎಂದರು.

“ಈಗ ನೇಮಕಗೊಂಡಿರುವ ಆಯೋಗ ನಮ್ಮ ವರದಿಯನ್ನು ಸರಕಾರ ಸ್ವೀಕರಿಸುವ ಕುರಿತು ಯಾವುದೇ ರೀತಿಯ ಪ್ರಯತ್ನ ಮಾಡುತ್ತಿಲ್ಲ. ರಾಜ್ಯದಲ್ಲಿರುವ ಒಟ್ಟು 1351 ಜಾತಿಗಳ ಸಮಗ್ರವಾದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಸೇರಿದಂತೆ ಎಲ್ಲಾ ವಿಧದ ಸಮೀಕ್ಷೆಯನ್ನು ಮಾಡಲಾಗಿದೆ. ಇದರಿಂದ ರಾಜ್ಯದಲ್ಲಿನ ಹಿಂದುಳಿದ ಸಮುದಾಯಗಳ ಸರ್ವಾಂಗೀಣ ಏಳಿಗೆಗೆ ಅನುಕೂಲವಾಗಲಿದೆ. ಆದರೆ ಅದಕ್ಕೆ ನಮ್ಮ ಹಿಂದುಳಿದ ಜನರೆ ಧ್ವನಿ ಎತ್ತುತ್ತಿಲ್ಲ ಎನಿಸುತ್ತದೆ, ಧ್ವನಿ ಎತ್ತಿದರೆ ಸರಕಾರ ವರದಿಯನ್ನು ಸ್ವೀಕರಿಸಿ ಬಹಿರಂಗಗೊಳಿಸಬಹುದು” ಎಂದರು.

ಈ ಸುದ್ದಿ ಓದಿದ್ದೀರಾ? ಆಮೆಗತಿಯಲ್ಲಿ ಸಾಗುತ್ತಿದೆ ಜೆಜೆಎಂ; ರಾಜ್ಯದಲ್ಲಿ ಶೇ.10ರಷ್ಟು ಪೂರ್ಣಗೊಳ್ಳದ ಕಾಮಗಾರಿ

ಕಾರ್ಯಕ್ರಮದಲ್ಲಿ ಅಹಿಂದ ವೇದಿಕೆ ಮುಖಂಡರಾದ ಮಲ್ಲಯ್ಯ ಕಮತಗಿ, ವೆಂಕಟೇಶ ಹೊಸ್ಮನಿ, ಅಹ್ಮದ್ ಪಠಾಣ್, ದೇವಿಂದ್ರಪ್ಪ ಪತ್ತಾರ, ನಂದಕುಮಾರ ಬಾಂಬೆಕರ್ ಕನ್ನಳ್ಳಿ, ಮಹಾಂತೇಶ ದೇವರಗೋನಾಲ, ಅಜಯ್ ಬಿಲ್ಲವ್ ಸೇರಿದಂತೆ ಸಾಮಾಜಿಕ ಕಾರ್ಯಕರ್ತರು, ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು. ನಂದಕುಮಾರ ಬಾಂಬೆಕರ್ ಸ್ವಾಗತಿಸಿದರು, ರಾಹುಲ್ ಹುಲಿಮನಿ ನಿರೂಪಿಸಿ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...