ಯಾದಗಿರಿ | ಒತ್ತುವರಿಯಾದ ಗೈರಾಣಿ ಭೂಮಿ ರಕ್ಷಿಸಿ; ಉಮೇಶ ಮುದ್ನಾಳ ಒತ್ತಾಯ

Date:

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಸೂಗೂರು ಗ್ರಾಮದ ಸರ್ಕಾರಿ ಗೈರಾಣಿ ಭೂಮಿಯನ್ನು ಅನಧಿಕೃತವಾಗಿ ಒತ್ತುವರಿ ಮಾಡಿ ಸಾಗುವಳಿ ಮಾಡಲಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ಈ ಜಾಗವನ್ನು ವಶಕ್ಕೆ ಪಡೆಯಬೇಕೆಂದು ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ ಮುದ್ನಾಳ್  ಒತ್ತಾಯಿಸಿದ್ದಾರೆ.

ಉಮೇಶ್ ಮುದ್ನಾಳ ಮತ್ತು ಸಂಘಟನೆಯ ಹಲವಾರು ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಸೂಗೂರು ಗ್ರಾಮದ ಸರ್ಕಾರಿ ಸರ್ವೆ ನಂ.7 ರಲ್ಲಿ 9 ಎಕರೆ ಮತ್ತು ನಂ.12 ರಲ್ಲಿ 38 ಎಕರೆ 5 ಗುಂಟೆ ಭೂಮಿಯಿದೆ. ಈ ಸರ್ಕಾರಿ ಭೂಮಿಯನ್ನು ಅನಧಿಕೃತವಾಗಿ ಕೆಲವು ಪಟ್ಟಭದ್ರ ಹಿತಾಶಕ್ತಿಗಳಿಂದ ಒತ್ತುವರಿ ಮಾಡಿ ಸುಮಾರು ಸಾಗುವಳಿ ಮಾಡುತ್ತಿದ್ದು, ಜಮೀನಿನಲ್ಲಿ ಗ್ರಾಮಸ್ಥರು ದನಕರು, ಕುರಿ-ಮೇಕೆ ಮೆಯಿಸಲು ಹೋದವರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಸರ್ಕಾರಿ ಭೂಮಿಯಲ್ಲಿ ದನಕರುಗಳಿಗೆ ಮೆಯಿಸಲು ಬಿಡದ ಪರಿಣಾಮ ಗ್ರಾಮಸ್ಥರು ಮನೆಯಲ್ಲೇ ಕಟ್ಟಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.

ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ ಮುದ್ನಾಳ್ ಮಾತನಾಡಿ, “ಅನಧಿಕೃತವಾಗಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು, ಜನರ ಮೇಲೆ ದಬ್ಬಾಳಿಕೆ ದೌರ್ಜನ್ಯ ಮಾಡುತ್ತಿರುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಿ ತಪ್ಪಿಸ್ಥರಿಗೆ ವಶಕ್ಕೆ ಪಡೆಯಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆಗೆ ಪ್ರೇರೇಪಿಸಲಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಈ ವೇಳೆ ಸಮಾಜದ ಪ್ರಮುಖರಾದ ಬಸವರಾಜ ಇಟಗಿ, ಆಂಜನೇಯ ನಾಯ್ಕೋಡಿ,ಬಸವರಾಜ, ರವಿಕುಮಾರ್, ಮರೆಪ್ಪ, ಮಲ್ಲಿಕಾರ್ಜುನ್ ಮಲ್ಲಿಕಾರ್ಜುನ, ಶರಣಪ್ಪ, ಬಸವರಾಜ್, ಮಾದೇವ್, ತಾಯಪ್ಪ, ಹನುಮೇಶ್, ಬಸವರಾಜ್ ಬೂದುರ, ತಾಯಪ್ಪ ಮುನ್ಗಲ್, ಚಂದ್ರಯ್ಯ, ತಿಮ್ಮಪ್ಪ, ಸಾಬಯ್ಯ,ಬಸವರಾಜ, ರವಿಕುಮಾರ್, ಮರೆಪ್ಪ, ಮಲ್ಲಿಕಾರ್ಜುನ್ , ಶರಣಪ್ಪ, ಬಸವರಾಜ್, ಮಾದೇವ್, ತಾಯಪ್ಪ, ಹನುಮೇಶ್, ಬಸವರಾಜ್ ಬೂದುರ, ತಾಯಪ್ಪ ಮುನ್ಗಲ್, ಚಂದ್ರಯ್ಯ, ತಿಮ್ಮಪ್ಪ ಇದ್ದರು..

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...