ಯಾದಗಿರಿ | ಇನ್ನೊಬ್ಬರ ಬೆಳವಣಿಗೆಯನ್ನು ಸಹಿಸುವವನೇ ನಿಜವಾದ ಸಾಹಿತಿ ; ಈಶ್ವರ್ ಕಟ್ಟಿಮನಿ

Date:

ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯ ಬೆಳವಣಿಗೆಯನ್ನು ಸಹಿಸುವ ಗುಣ ಹೊಂದಿದ್ದರೆ ಅವನೇ ನಿಜವಾದ ಸಾಹಿತಿ ಎಂದು ಹಿರಿಯ ಸಾಹಿತಿ ಈಶ್ವರ್ ಕಟ್ಟಿಮನಿ ಅಭಿಪ್ರಾಯಪಟ್ಟರು.

ಅವರು ಸರಕಾರಿ ಪದವಿಪೂರ್ವ ಕಾಲೇಜು, ಭೀಮರಾಯನ ಗುಡಿಯಲ್ಲಿ ಆಯೋಜಿಸಿದ್ದ ಗೋವಿಂದರಾಜ ಸಿ. ಸುರಪುರಕರ ಅವಳಿ ಕೃತಿಗಳ ಲೋಕಾರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ‘ಪರೀಕ್ಷೆ ಎದುರಿಸುವುದು ಹೇಗೆ’ ವಿಷಯದ ವಿಶೇಷ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕವಿ ತನ್ನ ಕಾಲಘಟ್ಟದ ಸಾಮಾಜಿಕ ತಾರತಮ್ಯ, ದುಃಖ-ದುಮ್ಮಾನಗಳನ್ನು ಅರಿತು ಸಮಾಜಕ್ಕೆ ಪರಿಚಯಿಸಿ ಜಾಗೃತಿ ಮೂಡಿಸಬೇಕು. ಕವಿ ಬರೆದ ವಿಚಾರಗಳು ಪ್ರತಿಯೊಬ್ಬ ಓದುಗನಿಗೂ ತನ್ನದೇ ಎಂದು ಅನಿಸಿದಾಗಲೇ ಬರವಣಿಗೆ ಸಾರ್ಥಕವಾಗುತ್ತದೆ ಎಂದು ಯುವ ಕವಿಗಳಿಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ‘ನಕ್ಕಾವೋ ನಕ್ಷತ್ರ ಹನಿ’ ಗವಿತಾ ಕೃತಿಯನ್ನು ಶಹಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ರವೀಂದ್ರನಾಥ್ ಹೊಸ್ಮನಿ ಹಾಗೂ ‘ನಕ್ಕಾವೋ ನೋವುಗಳು’ ಕವನ ಸಂಕಲನವನ್ನು ಸರಕಾರಿ ಪದವಿ ಕಾಲೇಜು ಸುರಪುರದ ಪ್ರಾಂಶುಪಾಲ ಪ್ರೊ. ಬಲಭೀಮರಾಯ ದೇಸಾಯಿ ಲೋಕಾರ್ಪಣೆಗೊಳಿಸಿದರು.

‘ಅವಳಿ ಕೃತಿಗಳ ಪರಿಚಯವನ್ನು ಹಿರಿಯ ಸಾಹಿತಿ ಡಾ. ಗೋವಿಂದರಾಜ ಮತ್ತು ತಾಲೂಕು ಖಜಾನಾಧಿಕಾರಿ ಡಾ. ಮೋನಪ್ಪ ಶಿರವಾಳ್ ಮಾಡಿದರು. ಗೋವಿಂದರಾಜರ ಬರವಣಿಗೆ ಸಾಮರ್ಥ್ಯ ಶ್ಲಾಘನೀಯವಾಗಿದೆ’ ಎಂದು ಹೇಳಿದರು.

ನಂತರ ಭೀಮಪ್ಪ ಪೀರಾಪುರ್ ಹಾಗೂ ಶಿವಾನಂದ ದೋರನಹಳ್ಳಿ ಅವರು ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ನಿವಾರಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಿಂದ್ರಪ್ಪ ಮಡಿವಾಳಕರ್ ವಹಿಸಿದ್ದರು. ಉಪನ್ಯಾಸಕರಾದ ಸಾಯಬಣ್ಣ ಮೆತ್ರೆ, ಸಿದ್ದಪ್ಪ ಒಡೆಯರ್, ಭೀಮರೆಡ್ಡಿ ಪಾಟೀಲ್, ಗುರುನಾಥ ದೇಸಾಯಿ, ಸಂತೋಷ್ ಜುನ್ನ, ಹನುಮಂತ್ರಾಯ ಗೌಡ ಪಾಟೀಲ್, ಧರ್ಮನಗೌಡ ಹಾಗೂ ಸಾಹಿತಿಗಳಾದ ಆಮ್ಲಯ್ಯ ಮಡ್ನಾಳ್, ಈರಣ್ಣ ಸಾಹಿತ್ಯಗಾರ, ಬೀರನೂರ್ ಗೌಡಪ್ಪ ಗೌಡ, ಪರಿವಾಣ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿಯಲ್ಲಿ ʼಪ್ರಬುದ್ಧ ಅಕಾಡೆಮಿʼ ಉದ್ಘಾಟನೆ

ಈ ಸಂದರ್ಭದಲ್ಲಿ ಲೇಖಕ ಗೋವಿಂದರಾಜ ಸಿ. ಸುರಪುರ ಹಾಗೂ ಅವರ ಪತ್ನಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಶಹಾಪುರ ಮತ್ತು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಸುರೇಶ್ ಅರುಣಿ ಸ್ವಾಗತಿಸಿದರು. ಮಡಿವಾಳಪ್ಪ ಪಾಟೀಲ್ ನಿರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...