ಯಾದಗಿರಿ | ಬುದ್ಧ, ಬಸವ, ಅಂಬೇಡ್ಕರ್ ತತ್ವ ಚಿಂತನೆಗಳು ಅವಶ್ಯಕ : ಮುರುಘರಾಜೇಂದ್ರ ಶ್ರೀ

Date:

ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ–ಸಿದ್ಧಾಂತಗಳು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದ್ದು, ಅಂಬೇಡ್ಕರ್ ರಚಿಸಿದ ಸಂವಿಧಾನವೇ ಮಾನವೀಯ ಮತ್ತು ಸಮಾನತೆಯ ಬದುಕಿಗೆ ದಾರಿ ತೋರಿಸುವ ಮಹಾನ್ ಗ್ರಂಥವಾಗಿದೆ ಎಂದು ಗುರುಮಠಕಲ್ ಖಾಸಮಠದ ಶ್ರೀ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.

ಯಾದಗಿರಿ ನಗರದಲ್ಲಿ ಶನಿವಾರ ದಿ. ವಿಶ್ವನಾಥರೆಡ್ಡಿ ಗೌಡ ಮುದ್ನಾಳ ಸಭಾಂಗಣದಲ್ಲಿ ಭೀಮ ಜ್ಯೋತಿ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಾಧಾರಿತ ನಾಟಕ ಪ್ರದರ್ಶನ ಹಾಗೂ ಅಂಬೇಡ್ಕರ್ ಸೇವರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

1033131

‘ಸಮಾಜದಲ್ಲಿ ಉತ್ತಮ ನಡತೆ, ಪರಸ್ಪರ ಸಮನ್ವಯ ಹಾಗೂ ಬಾಧ್ಯತೆಯ ಅರಿವಿನಿಂದ ನಡೆದುಕೊಳ್ಳುವ ಮೂಲಕ ರಾಷ್ಟ್ರೀಯ ಏಕತೆಯನ್ನು ಬಲಪಡಿಸಬೇಕಿದೆ. ಸಂವಿಧಾನದ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭೀಮ ಜ್ಯೋತಿ ಸಂಸ್ಥೆ ನಡೆಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ನಾಟಕಗಳ ಮೂಲಕ ಮಹಾನ್ ನಾಯಕರ ಜೀವನ ಚರಿತ್ರೆಯನ್ನು ಜನಮನದಲ್ಲಿ ಬಿತ್ತುವ ಮಹತ್ವದ ಕೆಲಸ ಸಂಸ್ಥೆ ಮಾಡುತ್ತಿದೆ’ ಎಂದು ಪ್ರಶಂಸಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮವನ್ನು ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚನ್ನಬಸಪ್ಪ ಮುಧೋಳ್ ಉದ್ಘಾಟಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಚನ್ನಬಸಪ್ಪ, ಉದ್ಯಮಿ ಹಾಗೂ ಶಶಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಶಿರಗೋಳ, ಜಿಲ್ಲಾ ಪಿ/ಪಂ ದೌರ್ಜನ್ಯ ತಡೆ ಸಮಿತಿ ಸದಸ್ಯ ಮರೆಪ್ಪ ಚಟ್ಟರ್ಕರ್, ಸಂಸ್ಥೆಯ ಅಧ್ಯಕ್ಷ ಭೀಮಶಂಕರ್ ಎಂ. ಯರಗೋಳ, ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಷಚಂದ್ರ ಕೌಲಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

1033132

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು. ಭವಾನಿ ಅಂಬೇಡ್ಕರ್ ಗೀತೆಗೆ ಭರತನಾಟ್ಯ ಪ್ರದರ್ಶಿಸಿದರು. ಅಂಬಿಕಾ ಹಾಗೂ ತಂಡ ಅಂಬೇಡ್ಕರ್ ಹಾಡಿಗೆ ನೃತ್ಯ ಮಾಡಿದರು. ಸೀತಮ್ಮ ಹಾಗೂ ತಂಡ ಅಂಬೇಡ್ಕರ್ ಗೀತೆ ಹಾಡಿದರು. ವಿಜಯನಗರ ಜಿಲ್ಲೆಯ ತುಂಗಭದ್ರ ಕಲಾತಂಡದಿಂದ ‘ನಮ್ಮ ಸಂವಿಧಾನ’ ಎಂಬ ನಾಟಕವನ್ನು ಪ್ರದರ್ಶಿಸಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಬಳ್ಳಾರಿ ಗುಂಪು ಘರ್ಷಣೆ ಪ್ರಕರಣ: ಎಸ್.ಪಿ. ಪವನ್ ನೆಜ್ಜೂರ್ ಅಮಾನತು ಖಂಡಿಸಿ ದಸಂಸ ಮನವಿ

ಕಾರ್ಯಕ್ರಮವನ್ನು ರೇಣುಕಾ ಕುಂಬಾರಹಳ್ಳಿ ನಿರೂಪಿಸಿದರು. ಮಾಲಾಶ್ರೀ ಬಿ. ಪ್ರಾರ್ಥಿಸಿದರು. ದೇವೇಂದ್ರ ಧೋತ್ರೆ ಸ್ವಾಗತಿಸಿ ವಂದಿಸಿದರು.

1033130

ಇದೆ ವೇಳೆ ಕಾರ್ಯಕ್ರಮದಲ್ಲಿ ಧಾರ್ಮಿಕ ಕ್ಷೇತ್ರದಿಂದ ಶ್ರೀ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿ, ನ್ಯಾಯಾಂಗ ಕ್ಷೇತ್ರದಿಂದ ನ್ಯಾಯಾಧೀಶ ಮರಿಯಪ್ಪ, ಸಾಮಾಜಿಕ ಕ್ಷೇತ್ರದಿಂದ ಎಸ್ ಎಸ್ ಚನ್ನಬಸಪ್ಪ, ವೈದ್ಯಕೀಯ ಕ್ಷೇತ್ರದಿಂದ ಡಾ. ಮಹೇಶ್ ಬಿರಾದಾರ, ಸಾಮಾಜಿಕ ಹೋರಾಟಗಾರೆಂದು ಮರೆಪ್ಪ ಚಟ್ಟರ್ಕರ್, ಶಿಕ್ಷಣ ಕ್ಷೇತ್ರದಿಂದ ಬಾಬು ಗಂಗು ಚೌವ್ಹಾಣ ರವರಿಗೆ ಡಾ. ಬಿ ಆರ್ ಅಂಬೇಡ್ಕರ್ ಸೇವರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...