ಯಾದಗಿರಿ | ‘ಬುದ್ಧ ಮಲಗಿದ ಬೆಟ್ಟ’ ಯೋಜನೆ ತ್ವರಿತ ಅನುಷ್ಠಾನಕ್ಕೆ ಆಗ್ರಹ

Date:

ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ವಿಶ್ವ ಪ್ರಸಿದ್ಧ ಪ್ರವಾಸೋದ್ಯಮ ತಾಣವಾದ ‘ಬುದ್ಧ ಮಲಗಿದ ಬೆಟ್ಟ’ದ ಯೋಜನೆಯನ್ನು ಜನೋಪಯೋಗಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಭಾರತೀಯ ಬೌದ್ಧ ಮಾಹಾಸಭಾದ ಮುಖಂಡರು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

“ಬುದ್ಧ ಮಲಗಿದ ಬೆಟ್ಟವು ಕರ್ನಾಟಕ ರಾಜ್ಯಕ್ಕೆ ವಿಶ್ವಮಟ್ಟದ ಖ್ಯಾತಿ ತಂದುಕೊಟ್ಟ ನಿಸರ್ಗದ ಅದ್ಭುತ ಪ್ರವಾಸಿತಾಣವಾಗಿದೆ. ಸಗರಾದ್ರಿ ಬೆಟ್ಟದಲ್ಲಿರುವ ಪ್ರಾಚೀನ, ಐತಿಹಾಸಿಕ, ಸಾಂಸ್ಕೃತಿಕ ನೆಲೆಗಳು, ಬೌದ್ಧ, ಶೈವ, ವೈಷ್ಣವ, ಸೂಫಿ ಶರಣ ಪರಂಪರೆಯ ಕುರುಹುಗಳ ತಾಣವಾಗಿದೆ. ಇಲ್ಲಿನ ಪರಿಸರ ಖನಿಜ, ಸಸ್ವರಾಶಿ, ಜೀವಸಂಪತ್ತು ಸಹ ವೈಶಿಷ್ಟಪೂರ್ಣವಾಗಿದೆ” ಎಂದು ಮಹಾಸಭಾ ಹೇಳಿದೆ.

“ಸರ್ಕಾರವು ಬುದ್ಧ ಮಲಗಿದ ಬೆಟ್ಟವನ್ನು ಪ್ರವಾಸಿತಾಣವೆಂದು ಘೋಷಿಸಿ ಕೋಟ್ಯಾಂತರ ರೂಪಾಯಿ ಅನುದಾನ ಖರ್ಚುಮಾಡುತ್ತಾ ಬಂದಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷತನದಿಂದ ಈ ತಾಣದ ಅಭಿವೃದ್ಧಿ ಯೋಜನೆ ದಶಕಗಳಿಂದ ತೆವಳುತ್ತಿದೆ. ಅಲ್ಲದೆ, ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ಕಳಪೆ ಕಾಮಗಾರಿಗಳು ಸಾಕ್ಷಿಯಾಗಿವೆ. ಇಲ್ಲಿನ ಅವ್ಯವಸ್ಥೆ ಮತ್ತು ಕಾನೂನು ಬಾಹಿರ ಜನವಿರೋಧಿ ಚಟುವಟಿಕೆಗಳ ಬಗ್ಗೆ ಹಲವಾರು ಸಂಘ ಸಂಸ್ಥೆಗಳು ಹಲವು ಭಾರಿ ಮನವಿ ಸಲ್ಲಿಸಿದರು. ಯಾವುದೇ ಪರಿಹಾರ ಕ್ರಮ ಕೈಗೊಂಡಿಲ್ಲ” ಎಂದು ಬೌದ್ಧ ಮಹಾಸಭಾದ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸಲ್ಲಿಸುವ ವೇಳೆ ಸುರೇಶ ಎಸ್, ವೆಂಕಟೇಶ್‌ ಹೊಸಮನಿ, ರಣವೀರ ಹೊಸಮನಿ, ಬುದ್ಧಘೋಷ ದೇವಿಂದ್ರ ಹೆಗಡೆ, ಬಾಬುರಾವ್ ಭೂತಾಳಿ, ಮಲ್ಲಣ್ಣ ಕುರಕುಂದಿ, ಬಸವರಾಜ ಗುಡಿಮನಿ, ವಿಶ್ವ ನಾಟೇಕರ್ ಇದ್ದರು.

ವರದಿ: ಮಿಲಿಂದ್ ಸಾಗರ, ಸಿಟಿಜನ್ ಜರ್ನಲಿಸ್ಟ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...