ನಗರದ ಲುಂಬಿನಿ ಗಾರ್ಡನ್ನಲ್ಲಿ ದೆವ್ವ ಸಂಚಾರವಿದೆ ಎಂಬ ವದಂತಿಯಿಂದ ಸಾರ್ವಜನಿಕರಲ್ಲಿ ಉಂಟಾಗಿರುವ ಭಯ ಮತ್ತು ಆತಂಕವನ್ನು ನಿವಾರಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ‘ಲುಂಬಿನಿ ಗಾರ್ಡನ್ನಲ್ಲಿ ದೆವ್ವ ಇದೆಯೇ?’ ಎಂಬ ಶೀರ್ಷಿಕೆಯಡಿ ವೈಜ್ಞಾನಿಕ ಜಾಗೃತಿ ಕಾರ್ಯಕ್ರಮವನ್ನು ಜ.18ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ಲುಂಬಿನಿ ಗಾರ್ಡನ್ ಆವರಣದಲ್ಲಿ ಆಯೋಜಿಸಲಾಗಿದೆ.
ದೆವ್ವ–ಭೂತ ಎಂಬ ನಂಬಿಕೆಗಳಿಗೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ ಎಂಬುದನ್ನು ತಾರ್ಕಿಕವಾಗಿ ವಿವರಿಸಿ, ಮೂಢನಂಬಿಕೆ ನಿವಾರಣೆ ಹಾಗೂ ವೈಜ್ಞಾನಿಕ ಚಿಂತನೆ ಬೆಳೆಸುವ ಉದ್ದೇಶ ಈ ಕಾರ್ಯಕ್ರಮದಾಗಿದೆ. ಸಾರ್ವಜನಿಕರು ಭಯಕ್ಕೆ ಒಳಗಾಗದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪರಿಷತ್ತು ಮನವಿ ಮಾಡಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಯುವತಿ ನದಿಗೆ ಹಾರಿದ ಶಂಕೆ ; ಮುಂದುವರಿದ ಶೋಧ ಕಾರ್ಯಾಚರಣೆ
ನಗರದ ನಾಗರಿಕರು, ಯುವಜನತೆ ಹಾಗೂ ವಿದ್ಯಾರ್ಥಿಗಳು ಈ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೂಢನಂಬಿಕೆ ವಿರುದ್ಧ ಅರಿವು ಮೂಡಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.





