ಯಾದಗಿರಿ | ಮನರೇಗಾ ಕೆಲಸಕ್ಕಾಗಿ ಕಾರ್ಮಿಕರ ಅಹೋರಾತ್ರಿ ಧರಣಿ

Date:

ಮನರೇಗಾ ಅಡಿಯಲ್ಲಿ ಕೆಲಸಕ್ಕಾಗಿ ಕಳೆದ ಎರಡು ತಿಂಗಳಲ್ಲಿ ಎರಡು ಬಾರಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಿದರೂ ಕೆಲಸ ನೀಡಿಲ್ಲ. ಇದರಿಂದ ಬಡ ಕೂಲಿ ಕಾರ್ಮಿಕರಿಗೆ ದುಡಿಮೆ ಇಲ್ಲದಂತಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಆರೋಪಿಸಿದೆ,.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕಾಡಂಗೇರಾ ಬಿ ಗ್ರಾಮದಲ್ಲಿ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಆಹೋರಾತ್ರಿ ಧರಣಿ ನಡೆಸಿದ್ದಾರೆ. ಮನರೇಗಾ ಉದ್ಯೋಗ ಒದಗಿಸುಂತೆ ಒತ್ತಾಯಿಸಿದ್ದಾರೆ.

“ಅಕ್ಟೋಬರ್ 18 ಮತ್ತು ನವೆಂಬರ್ 9ರಂದು ಎರಡು ಬಾರಿ ನಮೂನೆ-6ರಲ್ಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಗಳ ಅವಧಿ ಮುಗಿದಿದ್ದರೂ, ಕೆಲಸ ನೀಡಲಾಗಿಲ್ಲ. ಅಲ್ಲದೆ, ಮತ್ತೆ ಅರ್ಜಿ ಸಲ್ಲಿಸಿಲು ಸ್ವೀಕೃತಿ ನೀಡುತ್ತಿಲ್ಲ. ಪಿಡಿಓ ಮಲ್ಲಿಕಾರ್ಜುನ ಗಿರಿ ಅವರು ಅರ್ಜಿ ವಿತರಣೆಯನ್ನು ತಡೆಹಿಡಿದಿದ್ದಾರೆ. ಪರಿಣಾಮವಾಗಿ ಬಡಕೂಲಿಕಾರರ ಹೊಟ್ಟೆಪಾಡು ಕಷ್ಟಕರವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾಕಾರರ ಹಕ್ಕೊತ್ತಾಯಗಳು:

1. ಗ್ರಾಮದಲ್ಲಿ ಕೃಷಿ ಚಟುವಟಿಕೆಗಳು ಸ್ಥಗಿತಗೊಳ್ಳುತ್ತಿದ್ದು, ಯುಗಾದಿವರೆಗೆ ನಿರಂತರವಾಗಿ ಕೆಲಸ ಕೊಡಬೇಕು.
2. 15 ದಿನಗಳ ನಂತರ ಪ್ರತಿ ನಮೂನೆ-6 ಅರ್ಜಿಗೆ ಕಡ್ಡಾಯವಾಗಿ ಸ್ವೀಕೃತಿ ಕೊಡಬೇಕು.
3. ಹೊಸ ಜಾಬ್ ಕಾರ್ಡಗಳಿಗೆ ಅರ್ಜಿ ಸಲ್ಲಿಸಿರುವವರಿಗೆ ಕೂಡಲೇ ಜಾಬ್‌ಕಾರ್ಡ್‌ ವಿತರಿಸಿ, ಕೆಲಸ ನೀಡಬೇಕು.
4. ಕಚೇರಿ ಕೆಲಸದ ಅವಧಿಯಲ್ಲಿ ಕರೆ ಮಾಡಿದರೂ ಪಿಡಿಓ ಸಂಪರ್ಕಕ್ಕೆ ಸಿಗುವುದಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು.

ಪ್ರತಿಭಟನೆಯಲ್ಲಿ ದಾವಲಸಾಬ್ ನಧಾಫ್, ಚಂದ್ರರೆಡ್ಡಿ ಕಾಡಂಗೇರಾ. ಬಿ,ನಿಂಗಣ್ಣ ಕುರಕುಂದಿ,ಸಾಲರಸಾಬ್ ಖುರೇಷಿ, ಶೇಖರ್ ಇಬ್ರಾಹಿಂಪುರ,ಖಾದರಸಾಬ, ಆಶಪ್ಪ ದಿಡ್ಡಿ, ಹಣಮಂತ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...