ಯಾದಗಿರಿ | ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಪ್ರತಿಭಟನೆ

Date:

ಕಟ್ಟಡ ಕಾರ್ಮಿಕರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಬೇಕು. ಅವರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಎಐಯುಟಿಯುಸಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದೆ. ಸಂಘಟನೆಯ ಕಾರ್ಯಕರ್ತರು ಯಾದಗಿರಿಯಲ್ಲಿಯೂ ಪ್ರತಿಭಟನೆ ನಡೆಸಿದ್ದು, ಯಾದಗಿರಿ ವೃತ್ತ ನಿರೀಕ್ಷಕ ಶಿವರಾಜ್ ಪಾಟೀಲ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

“ಕಟ್ಟಡ ಕಾರ್ಮಿಕರಿಗೆ ನ್ಯಾಯಯುತ ಹಕ್ಕುಗಳನ್ನು ಒದಗಿಸುವ ಆಶಯದೊಂದಿಗೆ ಕಲ್ಯಾಣ ಮಂಡಳಿಯು ಅಸ್ತಿತ್ವಕ್ಕೆ ಬಂದಿದೆ. ಮಂಡಳಿಯು ಕಟ್ಟಡ ಕಾರ್ಮಿಕರಿಗೆ ಎಲ್ಲ ಘೋಷಿತ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಆದರೆ, ಸಕಾಲದಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡದೇ ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಕಾರ್ಮಿಕರನ್ನು ಹಕ್ಕುಗಳಿಂದ ವಂಚಿತರನ್ನಾಗಿಸುತ್ತಿದೆ” ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

“ನೊಂದಾಯಿತ ಕಾರ್ಮಿಕನ ಇಡೀ ಕುಟುಂಬಕ್ಕೆ ಸಿಗಬೇಕಾದ ಆರೋಗ್ಯ ಸೌಲಭ್ಯ ಮರೀಚಿಕೆಯಾಗಿದೆ. ಕಳೆದ 2 ವರ್ಷಗಳಿಂದ ಬರಬೇಕಾದ ಶೈಕ್ಷಣಿಕ ಸಹಾಯಧನ ಇನ್ನೂ ಬಂದಿಲ್ಲ. ಎಲ್ಲರಿಗೂ ಸೂರು ಕಟ್ಟುವ ಈ ಕಟ್ಟಡ ಕಾರ್ಮಿಕರು ತಮಗೊಂದು ಗೂಡು ಕಟ್ಟಿಕೊಳ್ಳಲು ಆಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದಿಗೂ ಬಹುತೇಕ ಕಟ್ಟಡ ಕಾರ್ಮಿಕರು ನೊಂದಾವಣೆಯಾಗದೆ ಹೊರಗುಳಿದ್ದಾರೆ. ಆದರೆ, ಕೆಲವೆಡೆ ಕಟ್ಟಡ ಕಾರ್ಮಿಕರಲ್ಲದವರು ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ನೋಂದಣಿ ಮಾಡಿಕೊಂಡು ವಂಚಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಬೇಡಿಕೆಗಳು:
1) ಕಳೆದ 2 ವರ್ಷಗಳಿಂದ ಬಾಕಿಯಿರುವ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಿ. ಪ್ರಸಕ್ತ 2023-24ನೇ ವರ್ಷದ ಶೈಕ್ಷಣಿಕ ಸಹಾಯಧನದ ಅರ್ಜಿಗಳನ್ನು ಸ್ವೀಕರಿಸುವ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಿ.
2) ಅರ್ಹ ಕಾರ್ಮಿಕನಿಗೆ ಪಿಂಚಣಿಗಾಗಿ 6 ತಿಂಗಳೂಳಗೆ ಅರ್ಜಿ ಸಲ್ಲಿಸಬೇಕೆಂಬ ನಿಯಮವನ್ನು ತೆಗೆದುಹಾಕಿ ಹಾಗೂ ಮೊದಲ ಬಾರಿಗೆ ಕಂದಾಯ ಅಧಿಕಾರಿಗಳು ‘ಜೀವಿತ ಪ್ರಮಾಣ’ ಪತ್ರವನ್ನು ನೀಡಿದ ನಂತರ, ಮುಂದಿನ ವರ್ಷಗಳಲ್ಲಿ ಕಾರ್ಮಿಕ ಇಲಾಖೆಯಿಂದಲೇ ಜೀವಿತ ಪ್ರಮಾಣ ಪತ್ರ ನೀಡಬೇಕು. ಮತ್ತು ಬೇರೆ ಯಾವುದೇ ಪಿಂಚಣಿ ಪಡೆದರೂ ಈ ಪಿಂಚಣಿಯನ್ನು ನಿಲ್ಲಿಸಬಾರದು.
3) ರೂ.5 ಲಕ್ಷ ರೂಪಾಯಿಗಳ ‘ನಗದು ರಹಿತ ಆರೋಗ್ಯ ಸೇವೆ’ಯನ್ನು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಕೂಡಲೇ ಜಾರಿಗೊಳಿಸಿ.
4) ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸ್ವಂತ ಮನೆ ನಿರ್ಮಾಣಕ್ಕೆ ಮಂಡಳಿಯು ರೂ. 5 ಲಕ್ಷ ಸಹಾಯಧನ ಒದಗಿಸಬೇಕು.
6) ಮಂಡಳಿಯ ಸದಸ್ಯತ್ವದ ನವೀಕರಣ ಅವಧಿಯನ್ನು ಕೇವಲ 1 ವರ್ಷಕ್ಕೆ ಇಳಿಸಿರುವ ಮಂಡಳಿಯ ನಿರ್ಧಾರವನ್ನು ಕೈಬಿಡಿ ಹಾಗೂ ಈ ಬಗ್ಗೆ ಹಿಂದಿನ ವಿಧಾನವನ್ನು ಮುಂದುವರಿಸಿ.
6) ಸ್ಲಂ ಬೋರ್ಡ್ ಗೆ ನೀಡಿದ 518 ಕೋಟಿ ರೂಪಾಯಿ ಮಂಡಳಿಯ ಹಣವನ್ನು ಕೂಡಲೇ ವಾಪಸ್ ಪಡೆಯಿರಿ.
7) ಮಂಡಳಿಯ ಹಣ ಪೋಲು ಮಾಡುವ ಶಿಶುವಿಹಾರ, ಅಂಗನವಾಡಿ, ಮೊಬೈಲ್ ಕ್ಲಿನಿಕ್ ಇತ್ಯಾದಿ ಯೋಜನೆಗಳನ್ನು ನಿಲ್ಲಿಸಿ.
8) ಅವಶ್ಯಕತೆ ಇರುವ ಮಕ್ಕಳಿಗೆ ಮಾತ್ರ…ಲ್ಯಾಪ್‌ಟಾಪ್-ಟ್ಯಾಬ್ ಖರೀದಿಸಲು ಡಿಬಿಟಿ ಮೂಲಕ ಸಹಾಯಧನ ನೀಡಿ ಹಾಗೆ ಅವಶ್ಯಕತೆ ಇರುವ ಕಟ್ಟಡ ಕಾರ್ಮಿಕರಿಗೆ ಮಾತ್ರ ಟೂಲ್ ಕಿಟ್ ಖರೀದಿಸಲು ಡಿಬಿಟಿ ಮೂಲಕ ಸಹಾಯಧನ ನೀಡಿ.
9) ಮಂಡಳಿಯ ಆದಾಯ ಹೆಚ್ಚಿಸಲು ಬಾಕಿಯಿರುವ ಸೆಸ್ ಕೂಡಲೇ ವಸೂಲು ಮಾಡಲು ಕ್ರಮ ಕೈಗೊಳ್ಳಿ ಮತ್ತು ಸರ್ಕಾರಿ ಹಾಗೂ ವಾಣಿಜ್ಯ ಕಟ್ಟಡಗಳಿಗೆ 2% ವರೆಗೆ ಸೆಸ್ ಹೆಚ್ಚಿಸಿ.
10) ಈವರೆಗೆ ವಿವಿಧ ಕಿಟ್‌ಗಳು, ಲ್ಯಾಪ್ ಟಾಪ್ ಖರೀದಿಯಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಕೂಡಲೇ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ.
11) ಬೋಗಸ್ ಕಾರ್ಡಗಳನ್ನು ಪತ್ತೆಹಚ್ಚಿ ರದ್ದು ಮಾಡಿ. ನೋಂದಾವಣೆಯನ್ನು ಈ ಹಿಂದೆ ಇದ್ದಂತೆ ಕಾರ್ಮಿಕ ಸಂಘಟನೆಯ ಮೂಲಕ ಮತ್ತು ಕಾರ್ಮಿಕ ಇಲಾಖೆಯ ಮೂಲಕ ಮಾತ್ರ ಮಾಡುವ ಕ್ರಮ ಜಾರಿಗೆ ತನ್ನಿ. ಏಜಂಟರ ಶೋಷಣೆ ತಪ್ಪಿಸಿ.
12) ಅಪಘಾತದಲ್ಲಿ ಜೀವ ಕಳೆದುಕೊಂಡ ಕಾರ್ಮಿಕರ ಕುಟುಂಬಗಳಿಗೆ 10ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿ. ಅಪಘಾತದಲ್ಲಿ ದುಡಿಯುವ ಸಾಮರ್ಥ್ಯವನ್ನು ಕಳೆದುಕೊಂಡ ಕಾರ್ಮಿಕರಿಗ 10 ಲಕ್ಷ ರೂಪಾಯಿಗಳ ಪರಿಹಾರ ಹಾಗೂ ಜೀವನ ಯೋಗ್ಯ ಪಿಂಚಣಿ ನೀಡಿ.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ರಾಮಲಿಂಗಪ್ಪ ಬಿ.ಎನ್, ಸದಸ್ಯರಾದ ಭೀಮಪ್ಪ, ಶಂಕರ್ ಠಾಕೂರ್ ಚವ್ಹಾಣ್, ಮಲ್ಲಿಕಾರ್ಜುನ್, ಮಟಾಲ್ಲೇಶ್ ವಡ್ಡರ್, ಯಲ್ಲಾಲಿಂಗ, ಬಂದೆನವಾಜ್, ಅಂಬ್ರೇಶ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...