ಯಾದಗಿರಿ | ಸಾವೂರು ಗ್ರಾಮದ ಸರ್ಕಾರಿ ಶಾಲೆಗಿಲ್ಲ ಮೂಲ ಸೌಕರ್ಯ

Date:

ಶಾಲೆಯು ಮಕ್ಕಳ ಕಲಿಯುವ, ಬೆಳೆಯುವ ಮತ್ತು ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯುವ ಸ್ಥಳವಾಗಿದೆ. ಸಮಗ್ರ ಶಿಕ್ಷಣದ ಜೊತೆಗೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶಾಲೆಗಳು ಪೂರವಾಗಿರಬೇಕು ಮತ್ತು ಅಂತಹ ವಾತಾವರಣವನ್ನು ಸೃಷ್ಠಿಸಬೇಕು. ಅದರೆ, ಯಾದಗಿರಿ ಜಿಲ್ಲೆಯ ಸಾವೂರು ಗ್ರಾಮದ ಸರ್ಕಾರಿ ಶಾಲೆ ಮೂಲ ಸೌಕರ್ಯಗಳಿಲ್ಲದೆ ಬಳಲುತ್ತಿದೆ.

ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಸ್ವಚ್ಛ ಶೌಚಾಲಯ, ಗ್ರಂಥಾಲಯ, ಆಟದ ಮೈದಾನ, ವೈದ್ಯಕೀಯ ಸೌಲಭ್ಯಗಳು, ಉತ್ತಮ ವಾತಾವರಣ ಹಾಗೂ ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯಗಳು ಇರಬೇಕು. ಆದರೆ, ಸಾವೂರು ಶಾಲೆಯಲ್ಲಿ ಈ ಯಾವ ಸೌಲಭ್ಯಗಳು ಇಲ್ಲ. ಹೀಗಾಗಿ, ಕಲಿಕೆಗೆ ಪೂರಕ ವಾತಾವರಣವೇ ಇಲ್ಲದೆ, ಮಕ್ಕಳು ಕಲಿಯುತ್ತಿದ್ದಾರೆ.

ಶಾಲೆಯ ಆವರಣದಲ್ಲಿ ಬೊರವೆಲ್ ಇದ್ದು, ಅದರಲ್ಲಿ ನೀರು ತುಂಬಾ ಗಡುಸಾಗಿ ಬರುತ್ತದೆ. ಆ ನೀರು ಕುಡಿಯಲು ಯೋಗ್ಯವಿಲ್ಲವೆಂದು ಹೇಳಲಾಗಿದೆ. ಆದರೂ, ಬೇರೆ ವ್ಯವಸ್ಥೆ ಇಲ್ಲದೆ, ಆ ನೀರನ್ನೇ ಮಕ್ಕಳು ಕುಡಿಯುತ್ತಿದ್ದಾರೆ. ಪರಿಣಾಮ, ಅನಾರೋಗ್ಯಕ್ಕೆ ತುತ್ತಾಗುವ ಆತಂಕವೂ ಇದೆ. ಕೆಲವು ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಬೇರೆಡೇ ಹೋಗಿ ನೀರು ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಮೂಲೆಗುಂಪಾಗಿರುವ ಬೊಮ್ಮಾಯಿ ತಮ್ಮ ಅಸ್ತಿತ್ವಕ್ಕಾಗಿ ಸರ್ಕಾರದ ಮೇಲೆ ಹುಸಿ ಆರೋಪ: ಸಿದ್ದರಾಮಯ್ಯ

ಇದಲ್ಲದೆ ಶಾಲೆಗೆ ಕಂಪೌಂಡ್, ಗೇಟ್ ಇಲ್ಲವಾಗಿದ್ದು, ರಾತ್ರಿ ವೇಳೆ ಶಾಲೆ ಕುಡುಕರ ಸಾಮ್ರಾಜ್ಯವಾಗುತ್ತಿದೆ. ಕುಡಿದ ಅಮಲಿನಲ್ಲಿ ಕಿಡಿಗೇಡಿಗಳು ಶಾಲೆ ಬಳಿ ಇಸ್ಪೀಟ್, ಜೂಜು ಆಡುತ್ತಾರೆ. ಬೀಡಿ, ಸಿಗರೇಟು, ಮದ್ಯದ ಬಾಟಲಿಗಳನ್ನು ಶಾಲೆಯ ಆವರಣದಲ್ಲಿ ಎಸೆದು ಹೋಗುತ್ತಾರೆ. ಶಾಲೆಯ ವಾತಾವರಣ ಹಾಳಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

ಶಾಲೆಗೆ ಶೌಚಾಲಯ, ಕಾಂಪೌಂಡ್ ಗೊಡೆ, ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಬೇಕು ಎಂದು ಶಾಲಾ ಮಕ್ಕಳು ಆಗ್ರಹಿಸಿದ್ದಾರೆ.

ಗ್ರಾಮಸ್ಥರು ಶಾಲೆಯ ವಿಚಾರವಾಗಿ ಸಾಕಷ್ಟು ಬಾರಿ ಅರ್ಜಿ ಸಲ್ಲಿಸಿದ್ದರೂ ಯಾವೊಬ್ಬ ಅಧಿಕಾರಿ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಶಾಲೆಯಲ್ಲಿ ಮಕ್ಕಳ ದಾಖಲಾತಿ 260 ಇದ್ದು, ಮಕ್ಕಳಿಗೆ ಏನಾದರೂ ಹೆಚ್ಚುಕಮ್ಮಿ ಆದರೆ, ಅದಕ್ಕೆ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ ಎಂದು ಸಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ್ ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕಾಫಿ ಕೊಯ್ಲಿಗೆ ಸಿಗುತ್ತಿಲ್ಲ ಕಾರ್ಮಿಕರು; ವೇತನದ ಜಾಹೀರಾತು ಹಿಡಿದು ನಿಂತ ಮಾಲೀಕ

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...