ಕುಡಿದ ಅಮಲಿನಲ್ಲಿ ಸ್ನೇಹಿತರಿಬ್ಬರ ನಡುವೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸೋಮವಾರ ರಾತ್ರಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಬಳಿ ನಡೆದಿದೆ.
ಬಸನಗೌಡ (30) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಹಾಗೂ ಆರೋಪಿ ಇಬ್ಬರೂ ಟಿಪ್ಪರ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ಆರಂಭವಾಗಿ, ನಂತರ ಅದು ತೀವ್ರ ಗಲಾಟೆಗೆ ತಿರುಗಿದೆ ಎಂದು ತಿಳಿದುಬಂದಿದೆ. ಹಲ್ಲೆಯಲ್ಲಿ ಬಸನಗೌಡ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಡಿವೈಎಸ್ಪಿ ಜಾವೇದ್ ಇನಾಮ್ಹಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಭೂಮಿ, ನಿವೇಶನಕ್ಕಾಗಿ ತಮಟೆ ಘರ್ಜನೆ: ಬೇಡಿಕೆ ಈಡೇರಿಸದಿದ್ದರೆ ನಿರಂತರ ಸಂಘರ್ಷದ ಖಡಕ್ ಎಚ್ಚರಿಕೆ!
ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.





