ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಗ್ರಾಮಸ್ಥರು ಮತ್ತು ಪೋಷಕರು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗನೂರು ಗ್ರಾಮದ ಸರ್ಕಾರಿ ಉರ್ದು ಶಾಲೆ ಹಾಗೂ ಗುಡ್ಡದ ಗುರುಲಿಂಗೇಶ್ವರ ಬಡಾವಣೆಯ ಸರ್ಕಾರಿ ಶಾಲೆಗಳನ್ನು ಉಳಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಪ್ರಾರಂಭಿಸುವ ಮೂಲಕ ಗ್ರಾಮ ಪಂಚಾಯಿತಿಗೆ ಒಂದೇ ಶಾಲೆ ಆರಂಭಿಸಿ ರಾಜ್ಯದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಒ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಲಕ್ಕಪ್ಪ ಅವರು ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಿಂದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗಲಿದೆ ಎಂದು ಹೇಳಿದರು. ಹಲವು ಮಹಾನ್ ವ್ಯಕ್ತಿಗಳ ಹೋರಾಟದ ಮೂಲಕ ದೇಶದಲ್ಲಿ ಶಿಕ್ಷಣದ ಹಕ್ಕು ಸಿಕ್ಕಿದ್ದು, ಈಗ ಈ ಯೋಜನೆಯ ಮೂಲಕ ಶಿಕ್ಷಣವನ್ನು ಕೆಲವರ ಸ್ವತ್ತಾಗಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಅವರು ಆರೋಪಿಸಿದರು.

‘ಒಂದೆಡೆ ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ, ಇನ್ನೊಂದೆಡೆ ಇಲಾಖೆಯಿಂದ ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗುತ್ತಿದೆ ಎಂದು ಅವರು ಟೀಕಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಇರುವ ಕೆಕೆಆರ್ಡಿಬಿ ನಿಧಿಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಸ್ಥಾಪನೆಗೆ ಬಳಸುತ್ತಿರುವುದು ಸರಿಯಲ್ಲ. ಈ ನಿಧಿಯನ್ನು ಆಸ್ಪತ್ರೆಗಳು, ಉದ್ಯೋಗ ಸೃಷ್ಟಿ ಹಾಗೂ ಜನರ ಜೀವನಮಟ್ಟ ಸುಧಾರಣೆಗೆ ಬಳಸಬೇಕಾಗಿದೆ’ ಎಂದು ಹೇಳಿದರು.
‘ಗ್ರಾಮದಲ್ಲಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳು ಸುಲಭವಾಗಿ ಹೋಗಿ ಬರುವ ವ್ಯವಸ್ಥೆ ಇದೆ. ಆದರೆ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಿನಲ್ಲಿ ದೂರದ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವುದು ಬಡ ಕುಟುಂಬಗಳಿಗೆ ಸಾಧ್ಯವಿಲ್ಲ. ಆದ್ದರಿಂದ ನಮ್ಮೂರಿನ ಸರ್ಕಾರಿ ಶಾಲೆಗಳನ್ನು ಉಳಿಸಬೇಕು’ ಎಂದು ಗ್ರಾಮಸ್ಥರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಭಾಶಾ ಸಾಬ್, ಹಸನ್ ಸಾಬ್, ಅದ್ಬುಲ್ ರಹೀಮ್ ಸಾಬ್, ರಹೀಮ್ ಸಾಬ್, ತಿರುಪತಿ, ಹೊನ್ನಪ್ಪ, ಹಣಮಂತರಾಯ, ಸಿದ್ದಣ್ಣ ಹಳ್ಳಿ, ಮಾಲಮ್ಮ, ಶಿವರಾಜ್, ಸಿದ್ದಣ್ಣ, ಗುರುನಾಥ, ದೇವಿಂದ್ರ, ಭಾಗ್ಯಮ್ಮ ಸೇರಿದಂತೆ ಅನೇಕ ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಗ್ರಾಮಸ್ಥರು ಮತ್ತು ಪೋಷಕರು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗನೂರು ಗ್ರಾಮದ ಸರ್ಕಾರಿ ಉರ್ದು ಶಾಲೆ ಹಾಗೂ ಗುಡ್ಡದ ಗುರುಲಿಂಗೇಶ್ವರ ಬಡಾವಣೆಯ ಸರ್ಕಾರಿ ಶಾಲೆಗಳನ್ನು ಉಳಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಪ್ರಾರಂಭಿಸುವ ಮೂಲಕ ಗ್ರಾಮ ಪಂಚಾಯಿತಿಗೆ ಒಂದೇ ಶಾಲೆ ಆರಂಭಿಸಿ ರಾಜ್ಯದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಒ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಲಕ್ಕಪ್ಪ ಅವರು ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಿಂದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗಲಿದೆ ಎಂದು ಹೇಳಿದರು. ಹಲವು ಮಹಾನ್ ವ್ಯಕ್ತಿಗಳ ಹೋರಾಟದ ಮೂಲಕ ದೇಶದಲ್ಲಿ ಶಿಕ್ಷಣದ ಹಕ್ಕು ಸಿಕ್ಕಿದ್ದು, ಈಗ ಈ ಯೋಜನೆಯ ಮೂಲಕ ಶಿಕ್ಷಣವನ್ನು ಕೆಲವರ ಸ್ವತ್ತಾಗಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಅವರು ಆರೋಪಿಸಿದರು.
‘ಒಂದೆಡೆ ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ, ಇನ್ನೊಂದೆಡೆ ಇಲಾಖೆಯಿಂದ ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗುತ್ತಿದೆ ಎಂದು ಅವರು ಟೀಕಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಇರುವ ಕೆಕೆಆರ್ಡಿಬಿ ನಿಧಿಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಸ್ಥಾಪನೆಗೆ ಬಳಸುತ್ತಿರುವುದು ಸರಿಯಲ್ಲ. ಈ ನಿಧಿಯನ್ನು ಆಸ್ಪತ್ರೆಗಳು, ಉದ್ಯೋಗ ಸೃಷ್ಟಿ ಹಾಗೂ ಜನರ ಜೀವನಮಟ್ಟ ಸುಧಾರಣೆಗೆ ಬಳಸಬೇಕಾಗಿದೆ’ ಎಂದು ಹೇಳಿದರು.
‘ಗ್ರಾಮದಲ್ಲಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳು ಸುಲಭವಾಗಿ ಹೋಗಿ ಬರುವ ವ್ಯವಸ್ಥೆ ಇದೆ. ಆದರೆ ಕರ್ನಾಟಕ ಪಬ್ಲಿಕ್ ಶಾಲೆ ಹೆಸರಿನಲ್ಲಿ ದೂರದ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವುದು ಬಡ ಕುಟುಂಬಗಳಿಗೆ ಸಾಧ್ಯವಿಲ್ಲ. ಆದ್ದರಿಂದ ನಮ್ಮೂರಿನ ಸರ್ಕಾರಿ ಶಾಲೆಗಳನ್ನು ಉಳಿಸಬೇಕು’ ಎಂದು ಗ್ರಾಮಸ್ಥರು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಶಾಲಾ ವಾಹನ ಡಿಕ್ಕಿ: 8 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಈ ಸಂದರ್ಭದಲ್ಲಿ ಭಾಶಾ ಸಾಬ್, ಹಸನ್ ಸಾಬ್, ಅದ್ಬುಲ್ ರಹೀಮ್ ಸಾಬ್, ರಹೀಮ್ ಸಾಬ್, ತಿರುಪತಿ, ಹೊನ್ನಪ್ಪ, ಹಣಮಂತರಾಯ, ಸಿದ್ದಣ್ಣ ಹಳ್ಳಿ, ಮಾಲಮ್ಮ, ಶಿವರಾಜ್, ಸಿದ್ದಣ್ಣ, ಗುರುನಾಥ, ದೇವಿಂದ್ರ, ಭಾಗ್ಯಮ್ಮ ಸೇರಿದಂತೆ ಅನೇಕ ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





