ಯಾದಗಿರಿ | ಪುಸ್ತಕ ನಮ್ಮ ಜ್ಞಾನದ ಬುನಾದಿ, ಅರಿವಿನ ಸಂಕೇತ: ಡಾ. ಮಾನಸ ಅಭಿಮತ

Date:

ಪುಸ್ತಕಗಳು ನಮ್ಮ ಜ್ಞಾನದ ಬುನಾದಿಯಾಗಿದ್ದು, ಅರಿವಿನ ಸಂಕೇತಗಳಾಗಿವೆ. ಗಾಂಧಿ, ಅಬ್ದುಲ್ ಕಲಾಂ ಅವರಂತಹ ಮಹಾನ್ ವ್ಯಕ್ತಿಗಳನ್ನು ಸಮಾಜಕ್ಕೆ ನೀಡಿರುವ ಶಕ್ತಿ ಪುಸ್ತಕಗಳಲ್ಲಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅಭಿಮತ ಅವರು ಹೇಳಿದರು.

ಯಾದಗಿರಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ ಕನ್ನಡ ಪುಸ್ತಕ ಪ್ರಾಧಿಕಾರದ ‘ಮನೆಗೊಂದು ಗ್ರಂಥಾಲಯ’ ಯೋಜನೆಯ ಕರಪತ್ರ ಬಿಡುಗಡೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿ ಸದಸ್ಯರಿಗೆ ನೇಮಕಾತಿ ಪತ್ರ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಈ ಅಭಿಯಾನವು ಮುಖ್ಯವಾಗಿ ಯುವಜನತೆಗೆ ತಲುಪಬೇಕಾಗಿರುವ ಅಭಿಯಾನವಾಗಿದ್ದು. ಪುಸ್ತಕಗಳು ನಮ್ಮ ಜ್ಞಾನದ ಬುನಾದಿ, ಅರಿವಿನ ಸಂಕೇತವಾಗಿವೆ ಅವುಗಳು ಗಾಂಧಿ, ಕಲಾಂ ನಂತವರನ್ನು ಸಮಾಜಕ್ಕೆ ನೀಡಿವೆ ಅದಕ್ಕಾಗಿ ನಮ್ಮ ಪ್ರಾಧಿಕಾರದಿಂದ ಒಂದು ವಿನೂತನ ಕಾರ್ಯವನ್ನು ಕೈಗೊಂಡಿದ್ದೇವೆ. ಮನೆಗಳನ್ನು ಜ್ಞಾನ ಮಂದಿರಗಳನ್ನಾಗಿ ಪರಿವರ್ತಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಲನಚಿತ್ರ ನಟರು, ಜನಪ್ರತಿನಿಧಿಗಳು, ರಾಜಕಾರಣಿಗಳ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಯೋಜನೆ ಇದೆ. ಇದಕ್ಕೆ ಓದುವ ಸಂಸ್ಕೃತಿ ಹೆಚ್ಚಿಸುವ ಕಾರ್ಯ ಹೆಚ್ಚಿಸಬೇಕಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
894251

‘ಗ್ರಂಥಾಲಯಗಳ ಸತತ ಕ್ರಿಯಾಶೀಲತೆಗೆ ಜಿಲ್ಲಾಮಟ್ಟದಲ್ಲಿ ಗ್ರಂಥಾಲಯ ಜಾಗೃತಿ ಸಮಿತಿಗಳನ್ನು ರಚಿಸಲಾಗುವುದು. ಹೊಸ ಗ್ರಂಥಾಲಯಗಳ ಸ್ಥಾಪನೆ, ಹೊಸ ಪುಸ್ತಕಗಳ ಪರಿಚಯ, ಗಣ್ಯರೊಂದಿಗೆ ಸಂವಾದ, ಸ್ಥಳೀಯ ಸಾಹಿತಿಗಳ ಸಾಧನೆಗೆ ಅಭಿನಂದನಾ ಕಾರ್ಯಕ್ರಮಗಳು ಸಮಿತಿಯ ಕರ್ತವ್ಯವಾಗಿರುತ್ತವೆ’ ಎಂದರು.

ಮನೆಗೊಂದು ಗ್ರಂಥಾಲಯ ಜಾಗೃತಿ ಸಮಿತಿಯ ಸಂಚಾಲಕರಾಗಿ ಪ್ರಕಾಶ್ ಅಂಗಡಿ ಅವರನ್ನು ಹಾಗೂ ಸದಸ್ಯರಾಗಿ ಭಾಗ್ಯದೋರೆ, ನೀಲಮ್ಮ ಮಲ್ಲೆ, ದೇವೇಂದ್ರ ಹುಲ್ಕಲ್ (ಜೆ), ಸಂತೋಷ್ ಸತ್ಯಂಪೇಟ್, ಕನಕಪ್ಪ ವಾಗನಣಗೇರಿ, ನೀಲಕಂಠ ಹೊನ್ಕಲ್ ಮತ್ತು ಮಲ್ಲಿಕಾರ್ಜುನ್ ಕೊಠಗೇರಿ ಅವರನ್ನು ನೇಮಿಸಿ ಅರ್ಹತಾ ಪತ್ರಗಳನ್ನು ವಿತರಿಸಲಾಯಿತು.

ಈ ವೇಳೆ ಕಸಾಪ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಕಸಾಪ ತಾಲ್ಲೂಕು ಅಧ್ಯಕ್ಷ ಡಾ. ರವೀಂದ್ರನಾಥ ಹೊಸಮನಿ ಹಾಗೂ ಪುಸ್ತಕ ಪ್ರಾಧಿಕಾರದ ಶ್ರೀನಿವಾಸ್ ಕರಿಯಪ್ಪ ವೇದಿಕೆ ಮೇಲೆ ಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ಮರ್ಯಾದಾ ಹತ್ಯೆ ಖಂಡಿಸಿ: ಮರ್ಯಾದಾ ಹತ್ಯೆ ತಡೆ ಕಾಯ್ದೆ ತರಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾರ್ಯಕ್ರಮವನ್ನು ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಭಾಶ್ಚಂದ್ರ ಕೌಲಗಿ, ಸಾಹಿತಿ ಡಾ.ಗಾಳೆಪ್ಪ ಪೂಜಾರಿ, ಎಸ್.ಎಸ್. ನಾಯಕ್, ಮಹಾದೇವಪ್ಪಗೌಡ, ಸಿ.ಎಂ.ಪಟ್ಟೇದಾರ್, ಬಸವರಾಜ ಮೊಟನಳ್ಳಿ, ಚನ್ನಪ್ಪಗೌಡ, ದೇವರಾಜ ನಾಯಕ, ದ್ವೀತಿಯ ದರ್ಜೆ ಗುತ್ತಿಗೆದಾರ ಮರಿಲಿಂಗ ಬಂದಳ್ಳಿ, ದೊಡ್ಡಮಾನಪ್ಪ ನಾಟೇಕರ್, ಸಣ್ಣ್ಡಮಾನಪ್ಪ ನಾಟೇಕರ್, ಕು. ಸಂಗೀತ ಹುಲ್ಕಲ್ ಭಾಗವಹಿಸಿದರು.

ಕಾರ್ಯಕ್ರಮವನ್ನು ಡಾ.ಭೀಮರಾಯ ಲಿಂಗೇರಿ ನಿರೂಪಿಸಿದರು, ಪ್ರಕಾಶ ಅಂಗಡಿ ಸ್ವಾಗತಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...