ನಗರಸಭೆಯ ಪೌರ ಕಾರ್ಮಿಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಎದೆನೋವಿನಿಂದ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಡಾ. ಬಿ ಆರ್ ಅಂಬೇಡ್ಕರ್ ನಗರದ ನಿವಾಸಿ ಪಿಲ್ಲಪ್ಪ ಬೊಮ್ಮನ್ (ಪೌರ ಕಾರ್ಮಿಕ) ಎಂದು ತಿಳಿದು ಬಂದಿದೆ. ಸೋಮವಾರ ಬೆಳಿಗ್ಗೆ ಎಂದಿನಂತೆ ನಗರದಲ್ಲಿ ಕಸ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ವೇಳೆ ಅವರಿಗೆ ಅಚಾನಕ್ ಎದೆನೋವು ಕಾಣಿಸಿಕೊಂಡಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ತಲವಾರದಿಂದ ಕೇಕ್ ಕತ್ತರಿಸಿ ಜನ್ಮದಿನ ಆಚರಣೆ; ಯುವಕನ ವಿರುದ್ಧ ಪ್ರಕರಣ ದಾಖಲು
ಸಹೋದ್ಯೋಗಿಗಳು ತಕ್ಷಣ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲು ಮುಂದಾದರೂ, ಸ್ವಲ್ಪ ಸಮಯದಲ್ಲೇ ಅವರ ಸ್ಥಿತಿ ಗಂಭೀರಗೊಂಡಿತು. ನಂತರ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.





