ಯಾದಗಿರಿ | ಮರ್ಯಾದೆ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ದಸಂಸ ಪ್ರತಿಭಟನೆ

Date:

ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವಡಗೇರಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಕಾಶಗೌಡ ಪಾಟೀಲ್ ಸೇರಿದಂತೆ ಬಂಧಿತ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಹಾಗೂ ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ವಡಗೇರಾ ತಾಲೂಕು ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ತಹಸೀಲ್ದಾರರ ಮುಖಾಂತರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಮಾತನಾಡಿ, ‘ದಲಿತ ಯುವಕ ವಿವೇಕಾನಂದನೊಂದಿಗೆ ಪ್ರೀತಿಸಿ ಮದುವೆಯಾದ ಕಾರಣಕ್ಕೆ ದ್ವೇಷ ಸಾಧಿಸಿ, ಏಳು ತಿಂಗಳ ಗರ್ಭಿಣಿ ಮಾನ್ಯಳನ್ನು ಮರ್ಯಾದೆ ಹೆಸರಿನಲ್ಲಿ ಕೊಲೆ ಮಾಡಿರುವುದು ಅಮಾನವೀಯ ಹಾಗೂ ಮಾನವೀಯತೆಯನ್ನು ಪ್ರಶ್ನಿಸುವ ಕ್ರೂರ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಸವಣ್ಣನ ನಾಡಿನಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ಖಂಡನೀಯ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಪ್ರಕರಣಕ್ಕೆ ಕಾರಣಕರ್ತರಾದ ಪ್ರಕಾಶಗೌಡ ಪಾಟೀಲ್, ಪ್ರೀತಮಗೌಡ ಪಾಟೀಲ್, ಅರುಣಗೌಡ ಪಾಟೀಲ್, ಈರಪ್ಪ ಹಾಗೂ ಮುದಕಪ್ಪ ಅವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ರಾಜ್ಯದಲ್ಲಿ ಮರ್ಯಾದೆ ಹತ್ಯೆಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೊಳಿಸಿ, ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು’ ಅವರು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಗ್ರಾಮ ಒನ್ ಕೇಂದ್ರದಲ್ಲಿ ಅಕ್ರಮ ಹಣ ವಸೂಲಿ ಆರೋಪ; ತಹಶೀಲ್ದಾರರಿಗೆ ಗ್ರಾಮಸ್ಥರು ಮನವಿ

ಇದೇ ವೇಳೆ ದಲಿತ ಯುವಕ ವಿವೇಕಾನಂದನ ಕುಟುಂಬಕ್ಕೆ ರೂ.50 ಲಕ್ಷ ಪರಿಹಾರ, ಸರ್ಕಾರಿ ನೌಕರಿ ಹಾಗೂ 4 ಎಕರೆ ಸರ್ಕಾರಿ ಭೂಮಿ ಮಂಜೂರು ಮಾಡಬೇಕು. ಕುಟುಂಬದ ಆತ್ಮರಕ್ಷಣೆಗೆ ಪಿಸ್ತೂಲು ಪರವಾನಿಗೆ ನೀಡಿ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಮರೆಪ್ಪ ಕ್ರಾಂತಿ, ಬಲಭೀಮ ಬೇವಿನಹಳ್ಳಿ, ವಡಗೇರಾ ತಾಲೂಕು ಸಂಚಾಲಕ ಭೀಮಶಂಕರ ಗುಂಡಹಳ್ಳಿ ಸೇರಿದಂತೆ ಹಲವಾರು ಸಂಘಟನಾ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...