ಯಾದಗಿರಿ | ರಾಷ್ಟ್ರೀಯ ಹೆದ್ದಾರಿ‌ಯಲ್ಲಿ ಬಸ್‌ ನಿಲುಗಡೆಗೆ ದಸಂಸ ಆಗ್ರಹ

Date:

ಶಹಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ‌ ಬಳಿ ಕೊಂಗಂಡಿ ಗ್ರಾಮದ ಮಾರ್ಗವಾಗಿ ತೆರಳುವ ಬಸ್‌ಗಳನ್ನು ಸದರಿ ಗ್ರಾಮದಲ್ಲಿ ನಿಲುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಯಾದಗಿರಿ ಜಿಲ್ಲಾ ಸಮಿತಿಯಿಂದ ಶಹಾಪುರ ಘಟಕದ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರು.

“ಕೊಂಗಂಡಿ ಗ್ರಾಮದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಈ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳನ್ನು ಕೊಂಗಂಡಿ ಗ್ರಾಮದಲ್ಲಿ ನಿಲ್ಲಿಸಬೇಕು. ಶಹಾಪುರ ನಗರದ ಹೊಸ ಬಸ್ ನಿಲ್ದಾಣದಿಂದ ಪ್ರತಿಯೊಂದು ಗ್ರಾಮಗಳಿಗೆ ತೆರಳುವ ಬಸ್‌ಗಳು ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ಸಂಚರಿಸಬೇಕು” ಎಂದು ಆಗ್ರಹಿಸಿದರು.

“ಅಧಿಕಾರಿಗಳು ಈ ವಿಷಯದಲ್ಲಿ ಹೆಚ್ಚಿನ ಕಾಳಜಿ ವಹಿಸಿ ಗಂಭೀರತೆಯಿಂದ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ಶಾಲೆ ಕಾಲೇಜಿಗೆ ತೆರಳುವುದಕ್ಕಾಗಿ ಅನಾನುಕೂಲ ಇರುವುದರಿಂದ ಸಮಯಕ್ಕೆ ಸರಿಯಾಗಿ ತೆರಳಲಾಗುತ್ತಿಲ್ಲ. ಕೊಂಗಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯಾರ್ಥಿಗಳು ಬಸ್‌ಗಾಗಿ ಕಾದು ಕುಳಿತಿದ್ದರೂ ಕೂಡ ಯಾವುದೇ ಬಸ್ ನಿಲ್ಲದೇ ಇರುವುದರಿಂದ ವಿದ್ಯಾರ್ಥಿಗಳ ಸಮಯ ಮೀರುತ್ತಿದ್ದು, ಶಾಲೆ/ಕಾಲೇಜುಗಳಿಗೆ ತೆರಳದೆ ಮನೆಗೆ ವಾಪಸ್ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳ ಅನುಕೂಲಕ್ಕಾದರೂ ಬಸ್‌ ವ್ಯವಸ್ಥೆ ಕಲ್ಪಿಸಿ, ಈ ಮಾರ್ಗ ಮಧ್ಯೆ ಸಂಚರಿಸುವ ಬಸ್‌ಗಳು ಬೆಳಿಗ್ಗೆ 6 ರಿಂದ 12ರವರೆಗೆ ಮತ್ತು ಸಂಜೆ 4ರಿಂದ 10:30ರ ಸಮಯದವರೆಗೆ ನಿಲುಗಡೆ ಮಾಡಿದರೆ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ. ವಿದ್ಯಾರ್ಥಿ ಮತ್ತು ಸಾರ್ವಜನಿಕರಿಗೆ ಬಸ್‌ ವ್ಯವಸ್ಥೆ ಮಾಡದಿದ್ದರೆ ಡಿಸೆಂಬರ್ 29ರಂದು ಬೆಳಿಗ್ಗೆ 6ಕ್ಕೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಾರ್ವಜನಿಕರೊಂದಿಗೆ ಕೊಂಗಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

“ಶಹಾಪುರ ನಗರದ ಹೊಸ ಬಸ್ ನಿಲ್ದಾಣದಿಂದ ಪ್ರತಿಯೊಂದು ಗ್ರಾಮಕ್ಕೆ ಹಾಗೂ ಅಂತರ ಜಿಲ್ಲೆಗೆ ಸಂಚರಿಸುವ ಬಸ್‌ಗಳು ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ಹೋದರೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ರೈತರಿಗೆ, ವೃದ್ದರಿಗೆ ಪ್ರಯಾಣ ಮಾಡಲು ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿ, ಬಸ್ ನಿಲುಗಡೆಗೆ ಕ್ರಮ ವಹಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಅಕ್ರಮವಾಗಿ ಹೂಳಲಾದ ಎಂಡೋಸಲ್ಫಾನ್ ಪ್ರಕರಣ; ನೊಟೀಸ್‌ ಜಾರಿ

ಈ ಸಂದರ್ಭದಲ್ಲಿ ಶರಣರೆಡ್ಡಿ ಹತ್ತಿಗೂಡುರ್, ಶರಣಪ್ಪ ಛಲವಾದಿ, ಹನುಮಂತ ದೊಡ್ಡಮನಿ, ಕಂಡಪ್ಪ ಅಯ್ಯಳ ಬಿ, ಬಸವರಾಜ್ ಪರಸಾಪುರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...