ಯಾದಗಿರಿ | ಕೃಷಿ ಕೂಲಿಕಾರರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಆಗ್ರಹ

Date:

ಕೃಷಿ ಕೂಲಿಕಾರರು ನಿತ್ಯದ ದುಡಿಮೆಯನ್ನೇ ಅವಲಂಬಿಸಿ ಜೀವನ ಸಾಗಿಸಬೇಕು. ಇವರಿಗೆ ಈ ಹಿಂದೆ ಕೃಷಿ ರಂಗದಲ್ಲಿ ಕೆಲಸ ಸಿಗುತ್ತಿತ್ತು. ಇದೀಗ ರೈತರು ಹೆಚ್ಚಾಗಿ ಯಂತ್ರಗಳನ್ನು ಬಳಸುತ್ತಿರುವುದರಿಂದ ಕೃಷಿ ಕೂಲಿಕಾರರಿಗೆ ಮೊದಲಿನಂತೆ ರೈತರ ಹೊಲ ಗದ್ದೆಗಳಲ್ಲಿ ಕೆಲಸ ಸಿಗದಂತಾಗಿದೆ. ಪರಿಣಾಮ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿರುವುದು ಗಣನೀಯವಾಗಿ ಹೆಚ್ಚಾಗಿದೆ ಎಂದು ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ. ಪುಟ್ಟಮಾರು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಯಾದಗಿರಿ ಜಿಲ್ಲಾ ಸಮಿತಿ ಕಾರ್ಯಕರ್ತರು ʼಕೂಲಿಕಾರರ ಕೂಲಿಯ ಪ್ರಶ್ನೆ- ಸಮಾವೇಶʼ ಹಮ್ಮಿಕೊಂಡಿದ್ದು, ನಗರದ ಚರಬಸವೇಶ್ವರ ಹನುಮಾನ ದೇವಸ್ಥಾನದ ಬಳಿಯಿಂದ ಮೆರವಣಿಗೆ ಮಾಡುವುದರ ಮೂಲಕ ಆರಂಭಿಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.

“ಕೃಷಿ ಕೂಲಿಕಾರರು ಅಸಂಘಟಿತರಾಗಿದ್ದಾರೆ. ಅವರಿಗೆ ಸಾಮೂಹಿಕ ಚೌಕಾಸಿಯ ಮೂಲಕ ತಮ್ಮ ವೇತನ ಸೌಲಭ್ಯಗಳನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇತರ ಅಸಂಘಟಿತ ಕೈಗಾರಿಕೆಗಳ ಕಾರ್ಮಿಕರಂತೆ ಕೃಷಿ ಕೂಲಿಕಾರರ ಕನಿಷ್ಠ ವೇತನವನ್ನು ಸರ್ಕಾರವೇ 5 ವರ್ಷಕ್ಕೊಮ್ಮೆ ಪರಿಷ್ಕರಿಸಿ ಪ್ರಕಟಿಸುತ್ತದೆ. ಆದರೆ, ಹೋರಾಟ ಮಾಡಿ ಒತ್ತಾಯ ಮಾಡಿದರೆ ಮಾತ್ರ ಸರ್ಕಾರ ಕೃಷಿ ಕೂಲಿಕಾರರ ಮೂಲ ವೇತನವನ್ನು ಪರಿಷ್ಕರಿಸುತ್ತದೆ. ಇಲ್ಲದೆ ಇದ್ದರೆ ಗಮನಹರಿಸುವುದೇ ಇಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಗತ್ಯ ವಸ್ತುಗಳ ಬೆಲೆಗಳು ಏರುತ್ತಿರುತ್ತವೆ. ಬೆಲೆ ಏರಿಕೆಗೆ ತಕ್ಕಂತೆ ಕೃಷಿ ಕೂಲಿಕಾರರ ಕೂಲಿ ಹೆಚ್ಚಳ ಆಗುವುದೇ ಇಲ್ಲ. ಪರಿಷ್ಕರಿಸಿದ ಕೂಲಿ ಜಾರಿಯಾಗುವುದಿಲ್ಲ. ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಮಾಡುವ ವ್ಯವಸ್ಥೆ ಇಲ್ಲ. ಇಂದಿಗೂ ಮಹಿಳಾ ಕೃಷಿ ಕೂಲಿಕಾರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿಲ್ಲ. ಮಹಿಳೆಯರಿಗೆ ಹಾಗಾಗಿ ಒಂದು ಮಾನವ ದಿನಕ್ಕೆ ಕನಿಷ್ಠ ಕೂಲಿ ₹600 ನೀಡಬೇಕು” ಎಂದು ಒತ್ತಾಯಿಸಿದರು.

“ಕೃಷಿ ಕೂಲಿಕಾರರಿಗಾಗಿ ಒಂದು ಸಮಗ್ರ ಕಾಯ್ದೆ ಜಾರಿಗೆ ತಂದು ಕನಿಷ್ಠ ವೇತನ ಹಾಗೂ ಇತರ ಕಾರ್ಮಿಕ ಕಾನೂನುಗಳನ್ನು ಜಾರಿಗೊಳಿಸಬೇಕು. ಕೃಷಿ ಕೂಲಿಕಾರರ ದಿನದ ಕನಿಷ್ಠ ಕೂಲಿಯನ್ನು ₹600ಕ್ಕೆ ಏರಿಸಿ ಪರಿಷ್ಕರಿಸಬೇಕು. 57 ವರ್ಷ ತುಂಬಿದ ಪ್ರತಿಯೊಬ್ಬ ಕೃಷಿ ಕೂಲಿಕಾರನಿಗೆ ₹5000 ಪಿಂಚಣಿ ಸೌಲಭ್ಯ ನೀಡಬೇಕು. ಮಹಿಳೆಯರಿಗೆ ಪುರುಷರಷ್ಟೇ ಸಮಾನ ವೇತನ ನೀಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹೂವಿನಹಡಗಲಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ರೈತ ಸಂಘ ಒತ್ತಾಯ

“ಕೂಲಿಕಾರರ ಅಪಘಾತ, ಅಕಾಲಿಕ ಮರಣ ಸೇರಿದಂತೆ ಹಲವು ಸಂದರ್ಭಗಳಲ್ಲಿ ಮೃತಪಟ್ಟವರಿಗೆ ಹಾಗೂ ಗಾಯಗೊಂಡವರಿಗೆ ಗರಿಷ್ಠ ಪರಿಹಾರ ನೀಡಬೇಕು. ಮಹಿಳಾ ಕೃಷಿ ಕೂಲಿಕಾರರಿಗೆ ಹೆರಿಗೆ ಭತ್ಯೆ ಹಾಗೂ ಹೆರಿಗೆ ರಜೆ ನೀಡಬೇಕು. ಕೃಷಿ ಕೂಲಿಕಾರರಿಗೆ ಸಂಬಳ ಸಹಿತ ವಾರದ ರಜೆ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆ ಅಡಿ ವರ್ಷದಲ್ಲಿ 200 ದಿನಗಳ ಕೆಲಸವನ್ನು ಕಡ್ಡಾಯವಾಗಿ ಒದಗಿಸಬೇಕು. ವಾಸಕ್ಕೆ ಸ್ವಂತ ಮನೆ ಇಲ್ಲದ ಕೂಲಿಕಾರರಿಗೆ ಮನೆಗಳನ್ನು ಒದಗಿಸಿ ದುಬಾರಿ ಮನೆ ಬಾಡಿಗೆ ನೀಡಬೇಕಾಗುವುದನ್ನು ತಪ್ಪಿಸಬೇಕು” ಎಂದು ಮನವಿ ಮಾಡಿದರು.

ಜಿಲ್ಲಾಧ್ಯಕ್ಷ ದಾವಲಸಾಬ ನದಾಫ್, ಜಿಲ್ಲಾ ಕಾರ್ಯದರ್ಶಿ ಅಯ್ಯಪ್ಪ ಅನ್ನೂರ, ಜಿಲ್ಲಾ ಸಮಿತಿ ಉಪಾಧ್ಯಕ್ಷರುಗಳಾದ ಶರಣಬಸವ ಜಂಬಲದಿನ್ನಿ, ಹಣಮಂತ ಗೋನಾಲ್, ಮಮತಾಜ್ ಬೇಗಂ, ರಂಗಮ್ಮ ಕಟ್ಟಿಮನಿ, ಬಾಬು ಗುಂಡಳ್ಳಿ, ಸಾಯಬಣ್ಣ ತಂಗಡಗಿ, ಜಿಲ್ಲಾ ಸಮಿತಿ ಸಹ ಕಾರ್ಯದರ್ಶಿಗಳಾದ ನಿಂಗಪ್ಪ ಕುರಕುಂದಿ, ಪ್ರಕಾಶ ಆಲ್ದಾಳ್, ಸಿದ್ದಯ್ಯ ಬೀರಗೊಂಡ, ಶಿವಪ್ಪ ಬಜಂತ್ರಿ ಜುಬೇರ ಪಾಷ, ಸಿದ್ದಮ್ಮ ಬಜಂತ್ರಿ, ಮಹಾದೇವಪ್ಪ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...