ಯಾದಗಿರಿ | ಲಘುವಾಹನ ನಿಲುಗಡೆಗೆ ಸ್ಥಳ ನೀಡುವಂತೆ ಒತ್ತಾಯ

Date:

ಯಾದಗಿರಿ ಜಿಲ್ಲೆಯಾಗಿ 13 ವರ್ಷಗಳಿ ಕಳೆದರೂ ಈವರೆಗೆ ಸಾಕಷ್ಟು ಹೋರಾಟ ನಡೆಸಿ, ಮನವಿ ಸಲ್ಲಿಸಿದ್ದರೂ, ಪತ್ರಿಕೆ ಟಿವಿ ಮಾಧ್ಯಮದಲ್ಲಿ ಸುದ್ದಿಯಾದರೂ ಕೂಡ ಈವರೆಗೆ ಲಘುವಾಹನ ಚಾಲಕರಿಗೆ ಒಂದು ಟ್ಯಾಕ್ಸಿ ಸ್ಟ್ಯಾಂಡ್ ಒದಗಿಸಲು ಸಾಧ್ಯವಾಗಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ್‌ ಕೆ ಮುದ್ನಾಳ್‌ ಆರೋಪಿಸಿದರು.

ಯಾದಗಿರಿ ನಗರದ ಲಘು ವಾಹನ ನಿಲುಗಡೆ ಸ್ಥಳ ಒದಗಿಸಿಕೊಡುವಂತೆ ಗಿರಿನಾಡು ಕಾರು ಚಾಲಕರ ಸಂಘದ ಕಾರ್ಯಕರ್ತರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರರಿಗೆ ಮತ್ತು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಲಘು ವಾಹನ ಚಾಲಕರು ಇಂದಿಗೂ ರಸ್ತೆ ಬದಿಯಲ್ಲಿಯೇ ನಿಂತು ತಮ್ಮ ವ್ಯವಹಾರ ಮಾಡುತ್ತಿದ್ದಾರೆ. ಆದರೆ ರಾಜ್ಯದಲ್ಲಿ ತೆರಿಗೆ ಕಟ್ಟುವಲ್ಲಿ ಚಾಲಕರು ಮತ್ತು ಮಾಲೀಕರು ಮೊದಲ ಸ್ಥಾನದಲ್ಲಿದ್ದಾರೆ. ಏಕೆಂದರೆ ತೆರಿಗೆ ಪಾವತಿಸಿದ ನಂತರವೇ ವಾಹನವನ್ನು ರಸ್ತೆಗೆ ಇಳಿಸಲಾಗುತ್ತದೆ. ಇನ್ಷೂರೆನ್ಸ್ ಪಾವತಿ ಮಾಡಿದ ಮೇಲೆಯೇ ವಾಹನ ಬಳಕೆ ಆರಂಭವಾಗುತ್ತದೆ. ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಮುಂಗಡವಾಗಿಯೇ ತೆರಿಗೆ ಪಾವತಿಸುವ ಇಂತಹ ವಾಹನ ಮಾಲೀಕರು ಮತ್ತು ಚಾಲಕರು ಸೌಲಭ್ಯದಿಂದ ವಂಚಿತರಾಗಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾದಗಿರಿ ಜಿಲ್ಲೆಯಾದಾಗಿನಿಂದ ಹೊರಗಿನವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರ ನಿರ್ಲಕ್ಷ್ಯದಿಂದ ಜಿಲ್ಲೆಯ ಅಭಿವೃದ್ಧಿಯಾಗಿಲ್ಲ. ಈಗ ಸ್ವತಃ ಜಿಲ್ಲೆಯವರೇ ಸಚಿವರಾಗಿದ್ದೀರಿ. ಆದ್ದರಿಂದ ಜಿಲ್ಲೆಯ ಅಭಿವೃದ್ಧಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸಚಿವರಿಗೆ ಮನವಿ ಮಾಡಿದರು.

ಸಚಿವ ದರ್ಶನಾಪೂರ ಅವರು ಮಾತನಾಡಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಸೂಚಿಸಿದರು. ವಾಹನ ನಿಲುಗಡೆ ಸ್ಥಳದಲ್ಲಿ ಮೂಲ ಸೌಕರ್ಯಗಳಾದ ಕೊಳವೆಬಾವಿ, ಶೆಡ್ ನಿರ್ಮಾಣ, ಶೌಚಾಲಯ ವ್ಯವಸ್ಥೆ ಮಾಡಿಕೊಡಲು ಸೂಚಿಸುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ದಸರಾ ನಿಮಿತ್ತ 395 ಹೆಚ್ಚುವರಿ ಪೌರಕಾರ್ಮಿಕರ ನೇಮಕ: ಎಂಸಿಸಿ

ಈ ಸಂದರ್ಭದಲ್ಲಿ ಗಿರಿನಾಡು ಕಾರು ಚಾಲಕರ ಸಂಘದ ಜಿಲ್ಲಾಧ್ಯಕ್ಷ ಬಸಣ್ಣಗೌಡ ಇಟಗಿ, ಉಪಾಧ್ಯಕ್ಷ ಶಿವ ಶರಣಪ್ಪ ನಾರಣಪೇಟ್, ಖಜಾಂಚಿ ಸಾಬಯ್ಯ ಗುತ್ತೇದಾರ್, ಸದಸ್ಯರುಗಳಾದ ಶರಣು ಜೋತ, ಅಶೋಕ್ ಸಜ್ಜನ್, ವೆಂಕಟರೆಡ್ಡಿ ನಾಯ್ಕಲ್, ರಸಿದ್ ಪಾಷಾ, ಬಾಬಾ ಸಲೀಂ, ಶೇಕ್, ಸಂತೋಷ್ ರಾಥೋಡ್, ಬಾಬಾ ಪಟೇಲ್, ಸಾಬೀರ್, ಬಂದಪ್ಪ ಅಕ್ಕಿ, ಸಿದ್ದು ಉಮೇಶ್, ಸದಾಶಿವ ವಿಶ್ವನಾಥ್ ನವೀನ್, ಅಕ್ರಂ, ಜಮಲ್, ರಫೀಕ್, ಮೈನುದ್ದಿನ್, ಶರಣು ಹೊಸಮನಿ, ಅಪ್ಸರ್, ಬೀರಪ್ಪ, ಮಹೇಶ್ ಹೊಸಮನಿ, ದಿಲೀಪ್, ಅಜಿತ್, ನೈಮ್, ಬನಶಂಕರ್, ವಿಶ್ವಸ್ವಾಮಿ, ವಿಜಯಕುಮಾರ್, ಕಾಡಪ್ಪ, ವೀರೇಶ್ ಗೌಡ, ಮೌಲ, ಗೌಸ್, ರಿಯಾಜ್, ದೇವರಾಜ್ ಕುಮನೂರ್, ಷಡಕ್ಷಯ ಸ್ವಾಮಿ, ಅಯ್ಯಣ್ಣ, ಮೈಬೂಬ್, ಭೀಮು ಪೂಜಾರಿ, ತಾಯಪ್ಪ ಕೊಹಿಲೂರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...