ಯಾದಗಿರಿ | ಕಕ್ಕೇರಾದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ

Date:

ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ವಲಯದ ಆಯ್ಕಟ್ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಆಯೋಜಿಸಲಾಯಿತು.

ಮಂಗಳವಾರ ಮಾಶಾಸನ ಫಲಾನುಭವಿಯಾದ ಮೈಬುಬ್ಬಿ ಅವರಿಗೆ ₹1,35,000 ಸಾವಿರ ವೆಚ್ಚದಲ್ಲಿ ನಿರ್ಮಿಸಲಾದ ವಾತ್ಸಲ್ಯ ಮನೆ ಹಸ್ತಾಂತರಿಸಲಾಯಿತು. ಇದೇ ವೇಳೆ ಅವರಿಗೆ ಪ್ರತಿ ತಿಂಗಳು ₹1000 ಮಾಶಾಸನ ಸಹ ನೀಡಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ವಸಂತಗೌಡ ಮಾತನಾಡಿ, ‘ಯೋಜನೆಯಡಿ ಕೃಷಿ ಅಭಿವೃದ್ಧಿ, ಕೆರೆ ಹೂಳೆತ್ತುವ ಕಾರ್ಯ, ಸಮುದಾಯ ಅಭಿವೃದ್ಧಿ ಚಟುವಟಿಕೆಗಳು, ಶಾಲಾ-ಕಾಲೇಜುಗಳಿಗೆ ಡೆಸ್ಕ್-ಬೆಂಚ್ ವಿತರಣೆ, ಹಿಂದೂ ರುದ್ರಭೂಮಿ ನಿರ್ಮಾಣ, ಸುಜ್ಞಾನ ನಿಧಿ ಶಿಷ್ಯವೇತನ ಹಾಗೂ ಜನಮಂಗಳ ಯೋಜನೆಯಡಿ ವೀಲ್‌ಚೇರ್ ವಿತರಣೆ ಸೇರಿದಂತೆ ಅನೇಕ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1588076

ಕಾರ್ಯಕ್ರಮದಲ್ಲಿ ವಿಎಸ್‌ಎಸ್‌ಎನ್ ಅಧ್ಯಕ್ಷ ಅಂಬ್ರಪ್ಪ ಮಂಡೆ, ಸೋಮಶೇಖರ್ ದೊರೆ, ಉದ್ಯಮಿಗಳಾದ ರಮೇಶ್ ಶೆಟ್ಟರ್ ಹಾಗೂ ಪ್ರಕಾಶ ಕುಂಬಾರ, ಸೋಮನಾಥ ದೇವಸ್ಥಾನದ ಅರ್ಚಕ ಅಯ್ಯಣ್ಣ ಪೂಜೇರಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಜೊತೆಗೆ ದಸ್ತಗೀರ್ ಶಾನಿಮುತ್ತ್ಯಾ, ಮೂಡೆಪ್ಪ ದೇಸಾಯಿ, ಬಸವರಾಜ್, ಶರಣು ಅಕ್ಕಿ, ಬಾಶಾಸಾಬ್, ಮೈಬುಬ್ ಸಾಬ್, ಶಿವಲಿಂಗಪ್ಪ ಉಪಸ್ಥಿತರಿದ್ದರು.

ತಾಲೂಕಿನ ಯೋಜನಾಧಿಕಾರಿಗಳಾದ ನಾಗೇಶ್ ಎನ್‌ಪಿ ಹಾಗೂ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಅನಿತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಲಯ ಮೇಲ್ವಿಚಾರಕರಾದ ನಿಂಗರಾಜ್ ಬಿಎಸ್‌ ಸ್ವಾಗತಿಸಿ, ಸುರಿಯಾ ಬೇಗಂ ವಂದಿಸಿದರು. ಸೇವಾ ಪ್ರತಿನಿಧಿಗಳಾದ ರವಿ, ಸೈದಾಬಿ ಕಾಜಾಬಿ, ಒಕ್ಕೂಟದ ಅಧ್ಯಕ್ಷೆ ಕಸ್ತೂರಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಯಾದಗಿರಿ | ಹತ್ತಿಕುಣಿ ಹೊರವಲಯದಲ್ಲಿ ಚಿರತೆ ದಾಳಿ: ಹಸು ಬಲಿ, ಕರುಗೆ ಗಾಯ

ಜ್ಞಾನವಿಕಾಸ ಕಾರ್ಯಕ್ರಮದಡಿ ಒಟ್ಟು 11 ವಾತ್ಸಲ್ಯ ಮನೆಗಳನ್ನು ನಿರ್ಮಿಸಲಾಗಿದ್ದು, ಇಂತಹ ಯೋಜನೆಗಳು ದುರ್ಬಲ ವರ್ಗದ ಜನರಿಗೆ ಆಶ್ರಯ ಒದಗಿಸುತ್ತಿವೆ ಎಂದು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಯಾದಗಿರಿ | ಕ್ರೂಸರ್ ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ವಾಹನ ಮತ್ತು ಬೈಕ್...