ಯಾದಗಿರಿ | ರಸ್ತೆ ಇಕ್ಕೆಲಗಳಲ್ಲಿ ಡಬ್ಬಿ ಅಂಗಡಿಗಳ ಅಟ್ಟಹಾಸ; ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ

Date:

ಯಾದಗಿರಿಯ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಅಕ್ರಮ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿ, ಬಾಡಿಗೆ ಕೊಡಲಾಗಿದೆ. ಇದರಿಂದ ಪಾದಚಾರಿಗಳಿಗೆ ತೊಂದರೆ ಉಂಟಾಗಿದೆ. ಕೂಡಲೇ ಈ ಅಕ್ರಮವನ್ನು ತಡೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ್ ಕೆ ಮುದ್ನಾಳ್ ಆಗ್ರಹಿಸಿದ್ದಾರೆ.

ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಹೇಳಿಕೆ ನೀಡಿರುವ ಅವರು‌, “ಈ ಹಿಂದೆ ತಾಲೂಕು ಇದ್ದಾಗ ಯಾವುದೇ ಒಂದು ಪೆಟ್ಟಿಗೆ ಅಂಗಡಿಗಳೂ ಇರಲಿಲ್ಲ. ಜಿಲ್ಲೆಯಾದ ಬಳಿಕ ಶಾಸ್ತ್ರಿ ವೃತ್ತದಿಂದ ಜೆಸ್ಕಾಂ ಇಇ ಕಚೇರಿವರೆಗೆ ಪೋಸ್ಟ್ ಆಫೀಸ್‌ನಿಂದ ಕೋರ್ಟಿನವರೆಗೆ, ಚಿತ್ತಾಪೂರ ರಸ್ತೆಯ ಡಿಗ್ರಿ ಕಾಲೇಜಿನಿಂದ ಆರ್‌ಟಿಒವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಅಕ್ರಮ ಡಬ್ಬಿಗಳು ತಲೆ ಎತ್ತಿವೆ. ಇವುಗಳಿಗೆ ಯಾರು ಪರವಾನಿಗೆ ನೀಡಿದರು ಎಂಬುದನ್ನು ಜಿಲ್ಲಾಡಳಿತ ಹಾಗೂ ನಗರಸಭೆಯವರು ತುರ್ತಾಗಿ ಎರಡು ದಿನಗಳಲ್ಲಿ ಉತ್ತರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಈ ಕುರಿತು ಜೆಸ್ಕಾಂ ಮತ್ತು ನಗರಸಭೆ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಗಮನಕ್ಕೆ ತಂದ ಮೇಲೆಯೂ ವಿದ್ಯುತ್ ಸಂಪರ್ಕ ಹಾಗೂ ಡಬ್ಬಿಗಳ ಇಟ್ಟುಕೊಳ್ಳಲು ಅನುಮತಿ ಕೊಟ್ಟಿದ್ದಾರೆ. ಇವುಗಳನ್ನು ಹಾಕಿದ್ದರಿಂದ ಕಚೇರಿಗಳ ನಾಮಫಲಕಗಳೂ ಕಾಣದಂತೆ ಡಬ್ಬದಂಗಡಿಗಳು ತಲೆ ಎತ್ತಿವೆ.
ಅಲ್ಲದೆ ಈ ಡಬ್ಬಿಗಳಲ್ಲಿರುವವರು ಕಸ ಕಡ್ಡಿಯನ್ನು ಗುಡಿಸಿ ಚರಂಡಿಗೆ ತುಂಬುತ್ತಿದ್ದಾರೆ. ಮೊದಲೇ ನಗರಸಭೆಯಲ್ಲಿ ಪೌರಕಾರ್ಮಿಕರ ಕೊರತೆ ಇದೆ. ಅದರಲ್ಲೂ ಇವರು ಸಿಮೆಂಟ್ ಕಾಂಕ್ರೀಟ್ ಹಾಕಿ ಚರಂಡಿ ಮುಚ್ಚಿ ಮೇಲೆ ಡಬ್ಬಿಗಳನ್ನು ಇಟ್ಟುಕೊಂಡಿದ್ದರಿಂದ ಚರಂಡಿಗಳು ಮುಚ್ಚಿಹೋಗಿವೆ. ಇದೇ ರಸ್ತೆಯಲ್ಲಿ ಅಧಿಕಾರಿಗಳು ಸಂಚರಿಸುತ್ತಿದ್ದರೂ ಕಣ್ಣಿಗೆ ಕಾಣುತ್ತಿಲ್ಲವೇ” ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಡಬ್ಬದ ಅಂಗಡಿಗಳು ದಲ್ಲಾಳಿಗಳ ಅಡ್ಡಗಳಾಗಿವೆ. ಸರ್ಕಾರಿ ಕಚೇರಿಗೆ ಬರುವ ಮುಗ್ದ ಗ್ರಾಮೀಣ ಜನರಿಗೆ ಕೆಲಸ ಮಾಡಿಕೊಡುವುದಾಗಿ ಹೇಳಿ ಸಾಲ ಸೌಲಭ್ಯ ಒದಗಿಸಿಕೊಡುವುದಾಗಿ ಹೇಳಿ ಅವರಿಂದ ರಾಜಾರೋಷವಾಗಿ ಹಣ ಪೀಕುತ್ತಿದ್ದಾರೆ. ಇದರಿಂದ ಬಡ ಜನತೆ ಹಣ ಕಳೆದುಕೊಂಡು ಹತಾಶರಾಗುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಇಂಡಿ ಪ್ರತ್ಯೇಕ ಜಿಲ್ಲೆ ರಚನೆ ಮತ್ತು ಆರ್ಟಿಕಲ್ 371(ಜೆ) ಸೇರ್ಪಡೆಗೆ ಆಗ್ರಹ

“ನಾಯಿಕೊಡೆಗಳಂತೆ ತೆಲೆ ಎತ್ತಿರುವ ಡಬ್ಬಿಗಳನ್ನು ತುರ್ತಾಗಿ ತೆರವು ಮಾಡಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಡೆಯಬೇಕು, ಮುಗ್ದ ಜನರಿಗೆ ಆಗುತ್ತಿರುವ ವಂಚನೆಯನ್ನು ತಡೆಗಟ್ಟಬೇಕು. ಇಲ್ಲವಾದಲ್ಲಿ ನಗರಸಭೆ ಕಚೇರಿಗೆ ಜಾಲಿ ಮುಳ್ಳುಗಳನ್ನು ಬಡಿದು ಬೃಹತ್ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...