ಅಂತರ ರಾಜ್ಯ ಮಟ್ಟದ ಪ್ರತಿಷ್ಠಿತ ʼಕನ್ನಡ ಪಯಶ್ವಿನಿ ಅಚೀವ್ಮೆಂಟ್ ಪ್ರಶಸ್ತಿಗೆ ಯಾದಗಿರಿಯ ಲಕ್ಷ್ಮೀ ಎಸ್ ಅವರು ಆಯ್ಕೆಯಾಗಿದ್ದಾರೆ.
ಸಾಹಿತ್ಯ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಮಹತ್ವದ ಮತ್ತು ನಿರಂತರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜನವರಿ 18ರಂದು ಕಾಸರಗೋಡು ಜಿಲ್ಲೆಯ ನುಳ್ಳಿಪಾಡಿಯಲ್ಲಿರುವ ಕನ್ನಡ ಭವನದಲ್ಲಿ ಆಯೋಜಿಸಲಾದ ʼಕನ್ನಡ ಭವನ ರಜತ ಸಂಭ್ರಮ, ನಾಡು, ನುಡಿ ಹಬ್ಬʼ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಸಮಾರಂಭ ನಡೆಯಲಿದೆ.
ಈ ಕುರಿತು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ.ವಾಮನ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಜಾತಿ ನಿಂದನೆ ಪ್ರಕರಣದ ಆರೋಪಿಯ ಬಂಧನಕ್ಕೆ ವಿಳಂಬ: ಮಹಿಪಾಲ್ ಆರೋಪ
ಲಕ್ಷ್ಮೀ ಎಸ್ ಅವರಿಗೆ ಅಂತರರಾಜ್ಯ ಪ್ರಶಸ್ತಿ ಲಭಿಸಿರುವುದಕ್ಕೆ ದಲಿತ ಸಂಘರ್ಷ ಸಮಿತಿ, ಯಾದಗಿರಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇಕರ್ ಸೇರಿದಂತೆ ಹಲವು ಗಣ್ಯರು, ಸಂಘಟನೆಗಳು ಹಾಗೂ ಸಾಹಿತ್ಯ ವಲಯದವರು ಅಭಿನಂದಿಸಿದ್ದಾರೆ.





