ಯಾದಗಿರಿ | ರೈತ ಬೆಳೆದ ಕಲ್ಲಂಗಡಿ ಹಣ್ಣನ್ನು ಕಟ್‌ ಮಾಡುವ ಮೂಲಕ ಹೊಸ ವರ್ಷಾಚರಣೆ

Date:

ರೈತ ಬೆಳೆದ ಕಲ್ಲಂಗಡಿ ಹಣ್ಣನ್ನು ಕಟ್‌ ಮಾಡುವ ಮೂಲಕ ಸಾಮಾಜಿಕ ಹೋರಾಟಗಾರ ಉಮೇಶ್‌ ಕೆ ಮುದ್ನಾಳ್ ಹೊಸ ವರ್ಷಕ್ಕೆ ಸ್ವಾಗತ ಕೋರಿದರು.

“ಯಾದಗಿರಿ ತಾಲೂಕಿನ ಮುದ್ನಾಳ್ ಗ್ರಾಮದ ಹಣಮಂತಪ್ಪ ಚಂದಪ್ಪ ಕೋಳಿ ಇವರ ಜಮೀನಿನಲ್ಲಿ
ಸುಮಾರು 5 ವರ್ಷಗಳಿಂದ ಈ ಕಾರ್ಯವನ್ನು ನಾವು ನೈಸರ್ಗಿಕವಾಗಿ ಮತ್ತು ವಿನೂತನವಾಗಿ ಹೊಸ ವರ್ಷಾಚರಣೆ ಮಾಡುತ್ತಾ ಬಂದಿದ್ದೇವೆ. ಕೇಕ್ ಕತ್ತರಿಸುವುದು ಬೇಡ ಎಣ್ಣೆ ಪಾರ್ಟಿ ಬೇಡವೇ ಬೇಡ. ಗುಂಡಿನ ಪಾರ್ಟಿ ಮಾಡಿ ದುಂದು ವೆಚ್ಚ ಮಾಡುವುದಕ್ಕಿಂತ ರೈತ ಬೆಳೆದ ಹಣ್ಣು ಹಂಪಲು ಮತ್ತು ತರಕಾರಿ ಖರೀದಿಸಿ ಸೇವನೆ ಮಾಡಿ ಹೊಸ ವರ್ಷ ಆಚರಿಸಿ” ಎಂದು ಕರೆ ನೀಡಿದರು.

“ಇತ್ತೀಚಿನ ದಿನಗಳಲ್ಲಿ ಹೊಸ ವರ್ಷ ಸಮೀಸುತ್ತಿದ್ದಂತೆ ಬಹಳಷ್ಟು ಯುವಜನರು ಮದ್ಯಪಾನ ಸೇರಿದಂತೆ ಇತರೆ ದುಶ್ಚಟಕ್ಕೆ ಬಲಿಯಾಗುವುದು ಹೆಚ್ಚಾಗಿದೆ. ಯುವಜನರು ಈ ದುಶ್ಚಟದಿಂದ ದೂರವಿರಬೇಕು. ಗುಣಮಟ್ಟದ ಹಣ್ಣು ಹಂಪಲು ತಿನ್ನುವುದರಿಂದ ಯುವಜನರು ಆರೋಗ್ಯದಿಂದ ಸದೃಢರಾಗುತ್ತಾರೆ” ಎಂದು ಯುವಜನರಿಗೆ ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | 48 ಸ್ಥಳಗಳಲ್ಲಿ ಜೀಬ್ರಾ ಕ್ರಾಸಿಂಗ್ ನಿರ್ಮಾಣ: ಎಂಸಿಸಿ

“ಈ ವರ್ಷ ಬರಗಾಲದಿಂದ ರೈತರು ಕಂಗಲಾಗಿದ್ದಾರೆ. ಅವರು ಕಷ್ಟವನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಅವರ ಕಷ್ಟವನ್ನು ನಾವು ನೀಗಿಸಬೇಕೆಂದರೆ ಪ್ರತಿಯೊಬ್ಬರೂ ಅವರು ಬೆಳೆದಿರುವ ಬೆಳೆಯನ್ನು ಖರೀದಿಸಿ ಹೊಸ ವರ್ಷಾಚರಣೆ ಮಾಡಿದರೆ ಮುಂದಿನ ದಿನಗಳಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ” ಎಂದರು.

ಈ ಸಂದರ್ಭದಲ್ಲಿ ಸುನಂದಾ, ಪವನ್, ವಿಶಾಲ್, ಹರ್ಷಿತಾ, ರವಿ, ಅನಿಲ್, ಶಿವು, ವಿಜಯ, ಪ್ರಭು, ಯಲಾಲಿಂಗ, ಜಗದೀಶ್, ಅಂಪಯ್ಯ, ಸಾಬರೆಡ್ಡಿ, ನೇತ್ರಾ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...