ಸರ್ಕಾರದ ಖರೀದಿ ಕೇಂದ್ರಗಳಲ್ಲಿ ತೊಗರಿಯನ್ನು ಪ್ರತಿ ಎಕರೆಗೆ 8 ಕ್ವಿಂಟಲ್ವರೆಗೆ ಖರೀದಿಸುವಂತೆ ಮರುಆದೇಶ ಹೊರಡಿಸಬೇಕು ಎಂದು ಜಯ ಕರ್ನಾಟಕ ತಾಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ ಆಗ್ರಹಿಸಿದರು.
‘ಈ ವಿಚಾರವಾಗಿ ಮಂಗಳವಾರ ಜಯ ಕರ್ನಾಟಕ ತಾಲೂಕು ಘಟಕ ಗುರಮಿಠಕಲ್ ವತಿಯಿಂದ ತಹಸೀಲ್ದಾರ್ ರವರ ಮುಖಾಂತರ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಮಾತನಾಡಿದ ಅವರು ‘ರಾಜ್ಯ ಸರ್ಕಾರ ರೈತರ ಅನುಕೂಲಕ್ಕಾಗಿ ಫ್ರೂಟ್ಸ್ ತಂತ್ರಾಂಶದ ಆಧಾರದಲ್ಲಿ ಬೆಂಬಲ ಬೆಲೆಗೆ ತೊಗರಿ ಖರೀದಿ ಕೇಂದ್ರಗಳನ್ನು ಆರಂಭಿಸಿ ಕ್ವಿಂಟಲ್ಗೆ 8, ಸಾವಿರ ರೂಪಾಯಿ ದರ ನಿಗದಿ ಮಾಡಿ ಪ್ರತಿ ಎಕರೆಗೆ 4 ಕ್ವಿಂಟಲ್ ಖರೀದಿಸಲು ಆದೇಶಿಸಿರುವುದು ಸ್ವಾಗತಾರ್ಹವಾದರೂ, ಇದು ರೈತರಿಗೆ ಸಮರ್ಪಕವಾಗಿಲ್ಲ’ ಎಂದು ಹೇಳಿದರು.
‘ಒಂದು ಎಕರೆ ಭೂಮಿಯಲ್ಲಿ ಸಾಮಾನ್ಯವಾಗಿ ರೈತರು 7ರಿಂದ 8 ಕ್ವಿಂಟಲ್ವರೆಗೆ ತೊಗರಿ ಬೆಳೆಸುತ್ತಾರೆ. ಆದರೆ ಸರ್ಕಾರ ಕೇವಲ 4 ಕ್ವಿಂಟಲ್ ಮಾತ್ರ ಖರೀದಿಸುವುದರಿಂದ ಉಳಿದ ಪಸಲನ್ನು ಕಡಿಮೆ ದರಕ್ಕೆ ಖಾಸಗಿ ವ್ಯಾಪಾರಿಗಳಿಗೆ ಮಾರಬೇಕಾದ ಅನಿವಾರ್ಯತೆ ಎದುರಾಗುತ್ತಿದೆ. ಆದ್ದರಿಂದ ರೈತರ ಹಿತದೃಷ್ಟಿಯಿಂದ ಪ್ರತಿ ಎಕರೆಗೆ ಕನಿಷ್ಠ 8 ಕ್ವಿಂಟಲ್ ತೊಗರಿ ಖರೀದಿಸುವಂತೆ ಸರ್ಕಾರ ಮರು ಆದೇಶ ಹೊರಡಿಸಬೇಕು’ ಎಂದು ಅವರು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಬ್ರಹ್ಮಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ಒ ಪ್ರತಿಭಟನೆ
ಈ ಸಂದರ್ಭದಲ್ಲಿ ಜಯ ಕರ್ನಾಟಕ ತಾಲೂಕು ಉಪಾಧ್ಯಕ್ಷ ಕಾಶಪ್ಪ ದೊರೆ, ದೇವು ಪರಮೇಶಪಳ್ಳಿ, ಅಯಾಜ್ ಅಲಿ, ನಿಖಿಲ್ ಗಾಜರಕೋಟ ಸೇರಿದಂತೆ ಇತರರು ಉಪಸ್ಥಿತರಿದ್ದರು.





