ವಿಚಾರಣೆಯ ನೆಪದಲ್ಲಿ ರಕ್ತ ಕ್ಯಾನ್ಸರ್ ಪೀಡಿತ ಮೆಹಬೂಬ್ ಅಲಿ ಮೇಲೆ ಪೊಲೀಸರು ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬೆಳಕಿಗೆ ಬಂದಿದೆ.
ಸುರಪುರ ತಾಲೂಕಿನ ಕೆಂಭಾವಿ ನಿವಾಸಿಯಾದ ಅವರನ್ನು ಮಂಗಳವಾರ ವಿಚಾರಣೆಗೆಂದು ಕರೆಸಿ ಹುಣಸಗಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಲಾಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಮೆಹಬೂಬ್ ಅಲಿ ಅವರನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ನಾಲ್ಕು ದಿನ ಚಿಕಿತ್ಸೆ ನೀಡಲಾಗಿದೆ.
ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಹಬೂಬ್ ಅಲಿ ಹಾಗೂ ಉತ್ತರ ಪ್ರದೇಶ ಮೂಲದ ಸಾಹಿಲ್ ಎಂಬ ಯುವಕ ಜಾತ್ರೆಗಳಲ್ಲಿ ಆಟಿಕೆ ಮಾರಾಟ ಮಾಡುತ್ತಿದ್ದರು. ಈ ವೇಳೆ ಟಂಟಂ ವಾಹನದಿಂದ ಬಿದ್ದು ಸಾಹಿಲ್ ಸಾವನ್ನಪ್ಪಿದ್ದ. ಐದು ತಿಂಗಳ ಹಳೆಯ ಈ ಪ್ರಕರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೊಲೀಸರು ಮೆಹಬೂಬ್ ಅಲಿ ಅವರನ್ನು ವಿಚಾರಣೆಗೆ ಕರೆಸಿಕೊಂಡ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಸುರಪುರ ಮಾಜಿ ಶಾಸಕ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು
ಈ ಪ್ರಕರಣದ ಕುರಿತು ಸಮಗ್ರ ತನಿಖೆಗೆ ಆದೇಶ ನೀಡಲಾಗಿದೆ. ಸುರಪುರ ಡಿಎಸ್ಪಿ ಜಾವೀದ್ ಇನಾಂದಾರ್ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ವರದಿ ಬಂದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.





