ಯಾದಗಿರಿ | ಅನವಾರ ಗ್ರಾಮದಲ್ಲಿ ಸಾರಿಗೆ ಬಸ್ ನಿಲುಗಡೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಮನವಿ

Date:

ಯಾದಗಿರಿ ಜಿಲ್ಲೆಯ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಜಿಲ್ಲಾ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿಯ ಅಧ್ಯಕ್ಷ ಹತ್ತಿಗೂಡೂರ್ ಶರಣರೆಡ್ಡಿ ಮಾತನಾಡಿ, ‘ಸುರಪುರ-ಯಾದಗಿರಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್‌ಗಳು ನಿಲುಗಡೆ ಆಗದೇ ಇರುವುದರಿಂದ ವಿದ್ಯಾರ್ಥಿಗಳು ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ಈ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಅನವಾರ ಗ್ರಾಮದಿಂದ ಹತ್ತಿಗೂಡೂರ್ ಸರ್ಕಾರಿ ಪ್ರೌಢಶಾಲೆ, ಶಹಾಪುರ ಕಾಲೇಜು ಹಾಗೂ ಯಾದಗಿರಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬಸ್ ನಿಲುಗಡೆ ಇಲ್ಲದ ಕಾರಣ ಬಹಳಷ್ಟು ದೂರ ನಡೆದುಕೊಂಡು ಹೋಗುವ ಅನಿವಾರ್ಯತೆಗೆ ಒಳಗಾಗಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಸಮಯ, ಸುರಕ್ಷತೆ ಹಾಗೂ ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ’ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ತಕ್ಷಣವೇ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್ ನಿಲುಗಡೆ ವ್ಯವಸ್ಥೆಯನ್ನು ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಅನವಾರ ಗ್ರಾಮದ ವಿದ್ಯಾರ್ಥಿಗಳು ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ರಸ್ತೆ ತಡೆ ಸೇರಿದಂತೆ ತೀವ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಲಾಯಿತು.

ಇದನ್ನು ಓದಿದ್ದೀರಾ? ಯಾದಗಿರಿ | ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಎಐಡಿವೈಒ ಸಹಿ ಸಂಗ್ರಹ ಅಭಿಯಾನ

ಈ ಸಂದರ್ಭದಲ್ಲಿ ಸಿದ್ದಪ್ಪ ಹೊಸ್ಮನಿ ಹಾಗೂ ವಿದ್ಯಾರ್ಥಿಗಳಾದ ಆಕಾಶ ದೊಡ್ಮನಿ, ರಾಮ ಪೂಜಾರಿ, ಸಾಬು ಗುತ್ತೇದಾರ್, ರಾಜು ಗುತ್ತೇದಾರ್, ಜೈ ಭೀಮ್ ಹೊಸಮನಿ, ಬೀರಲಿಂಗ ಪೂಜಾರಿ, ಅಯ್ಯಾಳಪ್ಪ, ಸೌಂದರ್ಯ, ಯಶೋಧ, ಸಾನಿಯಾ, ಅನುಶಿಯ, ಸವಿತಾ, ಅಕ್ಷತಾ, ಶ್ರೀದೇವಿ, ಮಹಾಲಿಂಗಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು...

ಯಾದಗಿರಿ | ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭಯ ಬೇಡ: ಸಿಇಒ ಲವೀಶ್ ಒರಡಿಯಾ

ಎಸ್ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ...

ಯಾದಗಿರಿ | ವಿದ್ಯಾರ್ಥಿನಿ ಆತ್ಮಹತ್ಯೆ: ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...