ಸಿದ್ದರಾಮಯ್ಯರನ್ನು ಕೆಳಗಿಳಿಸಲು ʼಆಪರೇಷನ್‌ ಹಸ್ತʼಕ್ಕೆ ಮುಂದಾದ ಡಿಕೆ ಶಿವಕುಮಾರ್:‌ ಯತ್ನಾಳ್‌ ಆರೋಪ

Date:

  • ಸಿದ್ದರಾಮಯ್ಯನವರ ವರ್ಚಸ್ಸು ಕಡಿಮೆ ಮಾಡಲು ಪಕ್ಷಾಂತರದ ಹೊಸ ಗೇಮ್
  • ‘ಸಿದ್ದರಾಮಯ್ಯರವರನ್ನು ಕೆಳಗೆ ಇಳಿಸುವುದಕ್ಕೆ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ’

ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ನಲ್ಲಿ ಹೆಚ್ಚಿನ ಶಾಸಕರ ಬೆಂಬಲವಿದೆ. ಆದರೆ, ಡಿಕೆ ಶಿವಕುಮಾರ್​​ಗೆ ಶಾಸಕರ ಬೆಂಬಲವಿಲ್ಲ. ಹೀಗಾಗಿ ಸಿದ್ದರಾಮಯ್ಯನವರ ವರ್ಚಸ್ಸು ಕಡಿಮೆ ಮಾಡಲು ಪಕ್ಷಾಂತರದ ಹೊಸ ಗೇಮ್ ಆಡುತ್ತಿದ್ದಾರೆ. ಇದು ಸಿಎಂ ಪಟ್ಟವೇರಲು ಡಿಕೆ ಶಿವಕುಮಾರ್ ಮಾಡಿರುವ ತಂತ್ರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದರು.

ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ಧರಾಮಯ್ಯನವರನ್ನು ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಸಿ ರಾಜ್ಯದ ಸೂಪರ್ ಸಿಎಂ ಆಗಲು ತೆರೆಮರೆಯಲ್ಲಿ ಡಿಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆ” ಎಂದು ದೂರಿದರು.

“ದೆಹಲಿಯಲ್ಲಿ ಡಿಕೆ ಶಿವಕುಮಾರ್ ಅವರು ಯಾರ್‍ಯಾರ ಮನೆಗೆ ತೆರಳಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾರೆ ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯಿದೆ. ಸಿದ್ದರಾಮಯ್ಯರವರನ್ನು ಕೆಳಗೆ ಇಳಿಸುವುದಕ್ಕೆ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ಎಲ್ಲ ಮಾಹಿತಿ ಬಿಡುಗಡೆ ಮಾಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆ ನೀಡಿದ ಸಚಿವರು

ಸಿದ್ದರಾಮಯ್ಯ ವಿರುದ್ಧ ಇರುವ ಶಾಸಕರನ್ನು ಪಕ್ಷಕ್ಕೆ ವಾಪಸ್ ಕರೆಸಿ ತಮ್ಮ ಶಾಸಕಾಂಗ ಬೆಂಬಲವನ್ನು ಹೆಚ್ಚಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಈ ಬೆಳವಣಿಗೆಯ ಕುರಿತು ಸಿದ್ದರಾಮಯ್ಯರವರಿಗೆ ನೋವಿದೆ. ಆದರೆ ಯಾವುದೇ ಕಾರಣಕ್ಕೂ ಅವರು ಸಿಎಂ ಹುದ್ದೆಯನ್ನು ಬಿಟ್ಟುಕೊಡುವುದಿಲ್ಲ. 5 ವರ್ಷದ ಸರ್ಕಾರವಾಗಲಿ 5 ತಿಂಗಳ ಸರ್ಕಾರವಾಗಲಿ ಸಿದ್ದರಾಮಯ್ಯರವರೇ ಕೊನೆಯ ಮುಖ್ಯಮಂತ್ರಿಯಾಗಿರುತ್ತಾರೆ” ಎಂದು ಭವಿಷ್ಯ ನುಡಿದರು.

“ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ಎಲ್ಲ ಇಲಾಖೆಗಳ ಸಭೆ ಕರೆಯಲು ಅವಕಾಶವಿದೆ. ಉಪಮುಖ್ಯಮಂತ್ರಿಗೆ ಆ ಅಧಿಕಾರ ಇಲ್ಲ. ಸಿಎಂ ಹುದ್ದೆಯಲ್ಲಿ ಸಿದ್ದರಾಮಯ್ಯ ಸುಮ್ಮನೆ ಕುಳಿತಿದ್ದಾರಷ್ಟೇ, ಅವರದ್ದೇನು ನಡೆಯುತ್ತಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...