ಕನ್ನಡ ಭಾಷೆ, ಉದ್ಯೋಗ ಮತ್ತು ಅನ್ನದ ಭಾಷೆಯಾಗಬೇಕು. ಅನ್ಯಭಾಷೆಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಭಾಷೆ ನಮ್ಮ ಕನ್ನಡ ಭಾಷೆ ಎಂದು ಕನ್ನಡ ಅಧ್ಯಾಪಕಿ ಸುಮಲತಾ ತಿಳಿಸಿದರು.
ದೊಡ್ಡಬಳ್ಳಾಪುರ ಮುಖ್ಯ ರಸ್ತೆಯಲ್ಲಿರುವ ಬೆಂಗಳೂರಿನ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ವ್ಯಾಪ್ತಿಯ ಖಾಸಗಿ ಕಾಲೇಜಾದ ಆರ್ ಟಿ ನಗರ ಪದವಿ ಕಾಲೇಜಿನಲ್ಲಿ ‘ಕನ್ನಡ ನಾಡು ನುಡಿ ಸಂಭ್ರಮ’ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಡಾ.ನಜುರಲ್, ವಾಣಿಜ್ಯ ವಿಭಾಗದ ನಿರ್ವಾಹಕಿ ಶೃತಿ ನೇತೃತ್ವದೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಶೇಷವಾಗಿ ಯಕ್ಷಗಾನ, ನೃತ್ಯ, ಭರತನಾಟ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಭಾವಗೀತೆ, ಜಾನಪದ ಗೀತೆಗಳು, ಕನ್ನಡ ಸಿನಿಮಾ ಹಾಡುಗಳು ಕಾರ್ಯಕ್ರಮದಲ್ಲಿ ಗಮನ ಸೆಳೆದವು.

ಈ ಸುದ್ದಿ ಓದಿದ್ದೀರಾ? ಕನಕಪುರ | ಇಂದಿನಿಂದ ಬೃಹತ್ ಕೃಷಿ ಮೇಳ
ವಿದ್ಯಾರ್ಥಿಗಳಿಗೆ ಚಟುವಟಿಕೆಗಳೊಂದಿಗೆ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ತಿಳಿಸುವಂತಹ ಕರ್ನಾಟಕದ ಆಹಾರಗಳನ್ನು ಪ್ರದರ್ಶಿಸಿದ ಭಿತ್ತಿಚಿತ್ರಗಳು ಹಾಗೂ ವಿದ್ಯಾರ್ಥಿಗಳ ಸೃಜನಶೀಲತೆ ಕಂಡುಬಂದಿತು.
ಪ್ರಾಂಶುಪಾಲರು ಕನ್ನಡ ನಾಡಿನ ಕುರಿತು ಮಾತನಾಡಿ, ಮಕ್ಕಳಿಗೆ ಕೆಲವು ಕಿವಿಮಾತುಗಳನ್ನು ಹೇಳಿದರು. ಕನ್ನಡ ಭಾಷೆಯಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಇದೇ ವೇಳೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದರು.





