ಯಲ್ಲಾಪುರ | ಆಸ್ತಿ ವಿಚಾರಕ್ಕೆ ನಡೆದ ಕಲಹದಲ್ಲಿ ತಂದೆಯನ್ನೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಮಗ

Date:

ಯಲ್ಲಾಪುರ: ಆಸ್ತಿ ವಿವಾದ ಹಾಗೂ ಕುಟುಂಬ ಕಲಹದ ಹಿನ್ನೆಲೆಯಲ್ಲಿನ ಜಗಳ ತಂದೆಯ ಸಾವಿನಲ್ಲಿ ದಾರುಣ ಅಂತ್ಯ ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಬೆಳ್ಳುಂಬಿ ಸಮೀಪದ ಮಾವಿನಕಟ್ಟಾದಲ್ಲಿ ನಡೆದಿದೆ. ಸ್ವಂತ ಮಗನೇ ಕೊಡಲಿಯಿಂದ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಸ್ಥಳೀಯರಲ್ಲಿ ಬೆಚ್ಚಿಬೀಳುವಂತಾಗಿದೆ.

ಮೃತ ದುರ್ದೈವಿಯನ್ನು ನಾರಾಯಣ ಪರಶು ಮರಾಠಿ (51) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಪುತ್ರ ಹರೀಶ ಮರಾಠಿ (29) ಕೃತ್ಯದ ನಂತರ ಸ್ಥಳದಿಂದ ಪರಾರಿಯಾದರೂ ಬಳಿಕ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ತಂದೆ, ಪುತ್ರ ಹಾಗೂ ಪುತ್ರಿ ತಾರಾ ಮರಾಠಿ ಒಂದೇ ಮನೆಯಲ್ಲಿ ವಾಸವಾಗಿದ್ದು, ಆರೋಪಿ ಹರೀಶ ತೋಟದ ಕೆಲಸ ಮಾಡುತ್ತ ಜೀವನ ನಿರ್ವಹಿಸುತ್ತಿದ್ದ.

ಪತ್ನಿ ಸವಿತಾ ಮತ್ತು ಮಗಳು ಸುರಕ್ಷಾ ಜೊತೆಗೆ ವಾಸವಿದ್ದರೂ ಅಡುಗೆ ಪ್ರತ್ಯೇಕವಾಗಿತ್ತು. ಕುಟುಂಬದೊಳಗೆ ಆಗಾಗ ಕಲಹಗಳು ನಡೆಯುತ್ತಿದ್ದವು. ಘಟನೆಯ ದಿನ ಬೆಳಿಗ್ಗೆ ಸಹೋದರಿ ತಾರಾ ಹಾಗೂ ಪತ್ನಿ ಸವಿತಾ ನಡುವೆ ಜಗಳ ನಡೆದದ್ದು, ಆ ವೇಳೆಯಲ್ಲಿ ಹರೀಶ ಸಹೋದರಿಯ ಮೇಲೆ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ. ಇದರಿಂದ ಕೋಪಗೊಂಡ ತಂದೆ ನಾರಾಯಣ ಮಗನಿಗೆ ತರಾಟೆ ತೆಗೆದುಕೊಂಡು, “ನಿನ್ನ ವಿರುದ್ಧ ಪೊಲೀಸರಿಗೆ ದೂರು ಕೊಡುತ್ತೇನೆ” ಎಂದು ಎಚ್ಚರಿಸಿದ್ದಂತೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸಣ್ಣವರ ಬಂಧನ, ದೊಡ್ಡವರಿಗೆ ರಕ್ಷಣೆ: ಮಟ್ಕಾ, ಇಸ್ಪಿಟ್ ದಂಧೆಯ ಹಿಂದಿರುವ ಕಾಣದ ಕೈ ಯಾವುದು?

ಹರೀಶ ಮನೆ, ಸಾಲ ಮತ್ತು ಮದುವೆಯ ಹೊಣೆಗಾರಿಕೆ ತಾನೇ ತೀರಿಸಿದ್ರೂ ಆಸ್ತಿ ಕೊಡಲಿಲ್ಲ ಎಂಬ ಆಕ್ರೋಶದಲ್ಲಿ ಕೊಡಲಿಯಿಂದ ಹಲ್ಲೆ ನಡೆಸಿದ. ಈ ವೇಳೆ ಎಡ ಕಿವಿ ಭಾಗಕ್ಕೆ ಕೊಡಲಿಯೇಟು ಬಿದ್ದ ಪರಿಣಾಮ ನಾರಾಯಣ ಮರಾಠಿ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಾರಾ ಮರಾಠಿ ತಕ್ಷಣ ತಂದೆಯನ್ನು ಯಲ್ಲಾಪುರ ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ನಾರಾಯಣ ಮೃತಪಟ್ಟಿದ್ದರು. ಕೊಲೆ ಬಳಿಕ ಪರಾರಿಯಾಗಿದ್ದ ಹರೀಶನನ್ನು ಪೊಲೀಸರು ಸಂಜೆ ಬಂಧಿಸಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...