ರಾಯಚೂರು | ದಲಿತರ ‘ಯೇವೋಲಾ ಘೋಷಣಾ ಪುನರುಚ್ಛಾರ’ ಸಮಾವೇಶ

Date:

ಅಂಬೇಡ್ಕರ್‌ ಅವರು ʼಹಿಂದುವಾಗಿ ಹುಟ್ಟಿದ್ದೇನೆ; ಆದರೆ ಹಿಂದುವಾಗಿ ಸಾಯಲಾರೆʼ ಎಂದು ಹೇಳಿದ ಘೋಷಣೆಯನ್ನು ದಲಿತರು ಪುನರುಚ್ಛಾರ ಸಂಕಲ್ಪ ಮಾಡುತ್ತಿರುವುದು ಸಂತಸ ತಂದಿದೆ ಎಂದು ಹಿರಿಯ ಹೋರಾಟಗಾರ ಎಂ.ಆರ್.ಭೇರಿ ಹರ್ಷ ವ್ಯಕ್ತಪಡಿಸಿದರು.

ರಾಯಚೂರಿನಲ್ಲಿ ನಡೆಯುತ್ತಿರುವ ಏಮ್ಸ್ ಹೋರಾಟ ವೇದಿಕೆಯಲ್ಲಿ ಶುಕ್ರವಾರ ಯೇವೋಲಾ ಘೋಷಣಾ ಸಂಕಲ್ಪ ಸಮಿತಿ ವತಿಯು ʼದಲಿತರ ಯೇವೋಲಾ ಘೋಷಣಾ ಪುನರುಚ್ಛಾರ ಸಮಾವೇಶʼ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಹಿಂದು ಧರ್ಮದಲ್ಲಿನ ಜಾತಿಪದ್ಧತಿ, ಶೋಷಣೆ, ದೌರ್ಜನ್ಯ, ಮೌಢ್ಯ ಮತ್ತು ಅಸ್ಪೃಶ್ಯತೆ ಸೇರಿದಂತೆ ಹಿಂದು ಧರ್ಮದ ಸಂಕೋಲೆಯಿಂದ ಹೊರಬರಲು ಅಂಬೇಡ್ಕರ್ ಅವರು 1935ರ ಅ.13 ರಂದು ಯೋವೋಲಾದ ನಿಮ್ನ ವರ್ಗಗಳ ಸಮ್ಮೇಳನ ನಡೆಸಿದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಹೋರಾಟಗಾರ ಜೆ.ಬಿ. ರಾಜು ಮಾತನಾಡಿ, “ಹಿಂದು ಎನ್ನುವುದು ಅಸಾಂವಿಧಾನಿಕ ಪದವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದಲ್ಲಿ ಧರ್ಮಾಧಾರಿತವಾಗಿ ಮೀಸಲಾತಿ ನೀಡುತ್ತಿದ್ದ ವೇಳೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತುಳಿತಕ್ಕೊಳಗಾದ ನಿಮ್ನ ವರ್ಗಗಳಿಗೆ ವಿದ್ಯೆ, ಉದ್ಯೋಗ ಹಾಗೂ ರಾಜಕೀಯ ಅಧಿಕಾರದಲ್ಲಿ ಮೀಸಲಾತಿ ಹಕ್ಕು ನೀಡಬೇಕೆಂದು ಬ್ರಿಟಿಷರಿಗೆ ಒತ್ತಾಯಿಸಿದರು” ಎಂದು ನುಡಿದರು.

“ದಲಿತರು ಹಿಂದುಗಳು ಹೌದೋ-ಅಲ್ಲವೋ ಎಂಬುದನ್ನು ಬ್ರಿಟಿಷರಿಗೆ ಸಾಬೀತು ಪಡಿಸಲು ಚೌಡರ್ ಕೆರೆ ನೀರು ಮುಟ್ಟುವ ಹೋರಾಟ ಮತ್ತು ಕಾಳರಾಂ ದೇವಸ್ಥಾನ ಪ್ರವೇಶ ಹಮ್ಮಿಕೊಂಡು ದಲಿತರು ಹಿಂದುಗಳಲ್ಲ ಎಂಬುದನ್ನು ಬ್ರಿಟಿಷರಿಗೆ ಬಾಬಾ ಸಾಹೇಬರು ಸಾಬೀತು ಪಡಿಸಿದ್ದರು” ಎಂದರು.

ಇದೇ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ʼಹಿಂದುವಾಗಿ ಹುಟ್ಟಿದ್ದೇನೆ-ಆದರೆ ಹಿಂದುವಾಗಿ ಸಾಯಲಾರೆʼ ಎಂದು ಸಾಮೂಹಿಕ ಪ್ರತಿಜ್ಞೆ ಬೋಧಿಸಿದರು.

ಹಿರಿಯ ಹೋರಾಟಗಾರ ಸಿ.ದಾನಪ್ಪ ನಿಲೋಗಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೆ.ಶರಣಪ್ಪ ಬಲ್ಲಟಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

ಕಾರ್ಯಕ್ರಮದಲ್ಲಿ ಹಿರಿಯ ಹೋರಾಟಗಾರರಾದ ಸಿ.ದಾನಪ್ಪ ನಿಲೋಗಲ್, ರವೀಂದ್ರ ನಾಥ ಪಟ್ಟಿ, ದೊಡ್ಡಪ್ಪ ಮುರಾರಿ, ಏಮ್ಸ್ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಬಸವರಾಜ ಕಳಸ, ಖಾಜಾ ಅಸ್ಲಂ, ಶರಣಪ್ಪ ದಿನ್ನಿ, ಹೇಮರಾಜ್ ಅಸ್ಕಿಹಾಳ, ಆರ್.ತಿಮ್ಮಾರೆಡ್ಡಿ, ಎಂ.ಈರಣ್ಣ, ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾಧ್ಯಕ್ಷ ನರಸಿಂಹಲು, ಲಕ್ಷ್ಮಣ ಜಾನೇಕಲ್, ಕೆ.ಇ.ಕುಮಾರ್, ಶಿವರಾಯ ಅಕ್ಕರಕಿ, ಸಿ.ಕೆ.ಆಶೋಕ್ ಕುಮಾರ್ ಜೈನ್, ಭೀಮಣ್ಣ ಮಂಚಾಲೆ, ವಿಶ್ವನಾಥ ಪಟ್ಟಿ, ಶೇಖರ್ ರಾಂಪೂರಿ, ರವಿದಾದಸ್, ಯಮುನಪ್ಪ ಜಾಗೀರ ಪನ್ನೂರು, ತಮ್ಮಣ್ಣ ವಕೀಲರು, ವರಲಕ್ಷ್ಮೀ, ಶಾಂತಾದೇವಿ, ಪ್ರಭು ಯಮನಾಳ, ಕ ಶಾಂತಪ್ಪ ಪಿತಗಲ್ ಸೇರಿದಂತೆ ದಲಿತ ಸಂಘಟನೆ ಮುಖಂಡರು, ಪ್ರಗತಿಪರ ಚಿಂತಕರು, ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...