ಬೀದರ್‌ | ಯೋಗ ಅಂತರಿಕ ಮತ್ತು ಬಾಹ್ಯ ವ್ಯಕ್ತಿತ್ವ ರೂಪಿಸುವ ಸಾಧನ: ಪ್ರೊ. ಗುರುನಾಥ ಮೂಲಗೆ

Date:

  • ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವ್ಯಕ್ತಿತ್ವ ಹಾಗೂ ಯೋಗಾ ವಿಶೇಷ ಶಿಬಿರ
  • ಯಶಸ್ವಿ ಜೀವನಕ್ಕೆ ಜೀವನ ಕೌಶಲ್ಯಗಳು ಅವಶ್ಯಕವಾಗಿವೆ.

ಯೋಗವು ಇಂದಿನ ಯುಗದಲ್ಲಿ ವ್ಯಕ್ತಿಯ ಅಂತರಿಕ ಮತ್ತು ಬಾಹ್ಯ ವ್ಯಕ್ತಿತ್ವವನ್ನು ರೂಪಿಸಿ ರೋಗಮುಕ್ತನಾಗಿ ಮಾಡುವ ಸಾಧನವಾಗಿದೆ. ರೋಗಗಳ ಪರಿಹಾರಕ್ಕೆ ಎಲ್ಲಿ ವಿಜ್ಞಾನವು ನಿಲ್ಲುತ್ತದೆಯೋ ಅಲ್ಲಿಂದ ಯೋಗವು ರೋಗ ಪರಿಹಾರಕವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಗುರುನಾಥ ಮೂಲಗೆ ಅಭಿಪ್ರಾಯಪಟ್ಟರು.

ಬೀದರ್‌ ನಗರದ ಹೈ.ಕ.ಶಿ. ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ವ್ಯಕ್ತಿತ್ವ ಮತ್ತು ಯೋಗಾ ಕುರಿತು ಮೂರು ದಿನಗಳ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ತಮ್ಮ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಂಡು ಉತ್ತಮ ಅಂಕ ಗಳಿಸಲು ಸಹಕಾರಿಯಾಗುತ್ತದೆ. ಅಲ್ಲದೇ ಯೋಗವು ವ್ಯಕ್ತಿಯನಲ್ಲ ಆತನ ವ್ಯಕ್ತಿತ್ವವನ್ನು ರೂಪಿಸು, ಚಿತ್ರವನಲ್ಲ ಚರಿತ್ರೆಯನ್ನು ರೂಪಿಸು, ಎನ್ನುವ ಮನೋಭಾವನೆಯನ್ನು ಮೂಡಿಸುತ್ತದೆ” ಎಂದರು.

“ಇಂದಿನ ಯುವಜನರು ಅನೇಕ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಜೊತೆಗೆ ಮಾನಸಿಕವಾಗಿ ಅಶ್ವಸ್ಥರಾಗುತ್ತಿದ್ದು, ಅವರಿಗೆಲ್ಲಾ ಯೋಗವು ಇವೆಲ್ಲವುಗಳಿಂದ ಮುಕ್ತಿ ನೀಡುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಾಸದ ಜೊತೆಗೆ ರಾಷ್ಟ್ರಾಭಿಮಾನ, ವೈಜ್ಞಾನಿಕ ಚಿಂತನೆ, ಸುಸ್ಥಿರ ಆರ್ಥಿಕ ಅಭಿವೃದ್ಧಿ ಹಾಗೂ ಸಮಾಜದಲ್ಲಿ ಜವಾಬ್ದಾರಿಯ ಬದುಕನ್ನು ಕಟ್ಟಿಕೊಳ್ಳಬೇಕು” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಸಿ. ಕನಕಟ್ಟೆ ಅಧ್ಯಕ್ಷತೆ ವಹಿಸಿ ಮಾತನಾಡಿ, “ಇಂದಿನ ಯುವಪೀಳಿಗೆ ಅನೇಕ ತೊಂದರೆಗಳಿಗೆ ಈಡಾಗುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಯುವಕ-ಯುವತಿಯರಿಗೆ ಸರಿಯಾದ ಮಾರ್ಗದರ್ಶನ ಇರದಿರುವುದು. ಯಶಸ್ವಿ ಜೀವನಕ್ಕೆ ಜೀವನ ಕೌಶಲ್ಯಗಳು ಅವಶ್ಯಕವಾಗಿವೆ. ಯೋಗದಿಂದ ತಮ್ಮ ಆಂತರಿಕ ಮನಸ್ಸನ್ನು ಸ್ಥಿರವಾಗಿಟ್ಟುಕೊಂಡು ಉತ್ತಮ ಆಲೋಚನೆಗಳಿಂದ ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪ್ರಕೃತಿ ವಿಕೋಪ ಪರಿಹಾರಕ್ಕೆ 21.34 ಕೋಟಿ ಅನುದಾನ ಲಭ್ಯ: ಸಚಿವ ಕೃಷ್ಣ ಭೈರೇಗೌಡ

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಶಿಲ್ಪಾ ಹಿಪ್ಪರಗಿ, ವೀಣಾ ಜಲಾದಿ, ಡಾ. ಸಿದ್ಧರಾಮ ನೆಂಗಾ ಹಾಗೂ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಸಂತೋಷಕುಮಾರ ಸಜ್ಜನ ನಿರೂಪಿಸಿದರು, ರಾಜಕುಮಾರ ಸಿಂಧೆ ಸ್ವಾಗತಿಸಿದರು, ಪಾಂಡುರಂಗ ಕುಂಬಾರ ವಂದಿಸಿದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...