ಚಿಕ್ಕಬಳ್ಳಾಪುರ | ಯುವಜನತೆ ಕಾನೂನುಬಾಹಿರ ಕೃತ್ಯಗಳಿಂದ ದೂರವಿರಿ; ವೆಂಕಟರಮಣಪ್ಪ ಕರೆ

Date:

ಯುವಜನತೆ ಸಮಾಜಬಾಹಿರ, ಕಾನೂನು ಬಾಹಿರ ಕೃತ್ಯಗಳಿಂದ ದೂರವಿರಬೇಕು. ಈ ಮೂಲಕ ಭವ್ಯಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಕರ್ನಾಟಕ ರಾಜ್ಯ ಹಳ್ಳಿ ಮಕ್ಕಳ ಸಂಘದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಪ್ಪ ಕರೆ ನೀಡಿದರು.

ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಹಳ್ಳಿ ಮಕ್ಕಳ ಸಂಘ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಅಪರಾಧ ತಡೆ ಮತ್ತು ಜನಜಾಗೃತಿ ಅಭಿಯಾನದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಭಾರತೀಯರ ಧರ್ಮ ಗ್ರಂಥವಾದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನವಾದ ಅವಕಾಶಗಳನ್ನು ನೀಡಿದೆ. ಸಂವಿಧಾನಾತ್ಮಕ ಸವಲತ್ತು ಪಡೆಯುವ ಪ್ರತಿಯೊಬ್ಬರು ಈ ನೆಲದ ಕಾನೂನಿಗೆ ಬದ್ಧರಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಿದಾಗ ಮಾತ್ರವೇ ಸಂವಿಧಾನದ ಆಶಯಗಳು ಈಡೇರುತ್ತವೆ. ಪ್ರಜಾಪ್ರಭುತ್ವದ ಬೇರುಗಳು ಗಟ್ಟಿಯಾಗಿ ಆರೋಗ್ಯವಂತ ಸಮಾಜ ನಿರ್ಮಾಣವಾಗಲಿದೆ. ಈ ದಿಸೆಯಲ್ಲಿ ಹಳ್ಳಿ ಮಕ್ಕಳ ಸಂಘ ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಪರಾಧ ತಡೆ ಹಾಗೂ ಜನಜಾಗೃತಿ ಅಭಿಯಾನ ಹಮ್ಮಿಕೊಂಡಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಹಳ್ಳಿ ಮಕ್ಕಳ ಸಂಘ

ವೃತ್ತ ನಿರೀಕ್ಷಕ ಮಂಜುನಾಥ್ ಮಾತನಾಡಿ, 18 ವರ್ಷ ಪೂರೈಸದ ಹದಿಹರೆಯದ ಮಕ್ಕಳು ವಾಹನ ಪರವಾನಗಿಯಿಲ್ಲದೆ ವಾಹನ ಚಾಲನೆ ಮಾಡಬಾರದು. ಚಾಲನಾ ಪರವಾನಗಿ ಪಡೆದೇ ದ್ವಿಚಕ್ರ, ತ್ರಿಚಕ್ರ, ಕಾರು ಇತ್ಯಾದಿ ವಾಹನ ಚಾಲನೆ ಮಾಡುವುದನ್ನು ರೂಢಿಸಿಕೊಳ್ಳಬೇಕು. ವಾಹನ ಚಾಲನೆಯಲ್ಲಿದ್ದಾಗ ಮೊಬೈಲ್ ಬಳಸಬಾರದು. ದ್ವಿಚಕ್ರ ವಾಹನದಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ಕಾರಾದರೆ ಸೀಟ್ ಬೆಲ್ಟ್ ಧರಿಸಬೇಕು. ಮಧ್ಯಪಾನ ಮಾಡಿ ವಾಹನ ಚಲಾಯಿಸಲೇಬಾರದು ಎಂದು ಸಲಹೆ ನೀಡಿದರು.

ಪೋಷಕರು ಅಪ್ರಾಪ್ತರಿಗೆ ವಾಹನ ನೀಡಿ ಕಾನೂನು ಉಲ್ಲಂಘಿಸಬಾರದು. ಶಾಲಾ ವಿದ್ಯಾರ್ಥಿಗಳು ರಸ್ತೆ ದಾಟುವಾಗ ಎಚ್ಚರವಹಿಸಬೇಕು. ಬೈಕ್ ಸವಾರ ಮತ್ತು ಹಿಂಬದಿ ಕುಳಿತವರು ಇಬ್ಬರೂ ಕೂಡ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದರಿಂದ ಅಪಘಾತಗಳನ್ನು ತಡೆಗಟ್ಟಬಹುದು ಎಂದು ಹೇಳಿದರು.

ಹಳ್ಳಿ ಮಕ್ಕಳ ಸಂಘ1

ಇದನ್ನೂ ಓದಿ : ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಸುರಕ್ಷತೆ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ವಾಪಸಂದ್ರ ಸರಕಾರಿ ಶಾಲೆಯ 250 ಮಕ್ಕಳಿಗೆ ನೋಟ್ ಪುಸ್ತಕ, ಪೆನ್ನು, ಸಿಹಿ ವಿತರಿಸಿದರು.

ವೇದಿಕೆಯಲ್ಲಿ ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಅಮರ್ ಮೋಗ್ಲಿ, ಸಂಚಾರಿ ಠಾಣೆ ಸಬ್ ಇನ್ಸ್ಪೆಕ್ಟರ್ ಮಂಜುಳ, ತಿಪ್ಪೇನಹಳ್ಳಿ ನಾರಾಯಣ್, ಹಳ್ಳಿಮಕ್ಕಳ ಸಂಘದ ವೀರಸಂಗಯ್ಯ ಇದ್ದರು.

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...