ಜೊಯಿಡಾ | ರಾಮನಗರ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ದಾಳಿ: 90 ಲಕ್ಷ ಮೌಲ್ಯದ ENA(ಸ್ಪಿರಿಟ್) ಜಪ್ತಿ, ಇಬ್ಬರ ಬಂಧನ

Date:

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರ ಚೆಕ್‌ಪೋಸ್ಟ್ ಬಳಿ ಅಬಕಾರಿ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಗೋವಾಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 90 ಲಕ್ಷ ರೂಪಾಯಿ ಮೌಲ್ಯದ ಮದ್ಯಸಾರ (Extra Neutral Alcohol) ಹಾಗೂ ಎರಡು ಟ್ಯಾಂಕರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಘಟನೆಯ ವಿವರ: ಧಾರವಾಡ-ಗೋವಾ ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್ ಬಳಿ ಫೆಬ್ರವರಿ 21ರಂದು ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸಿದರು. ಈ ವೇಳೆ ದಾವಣಗೆರೆಯಿಂದ ಗೋವಾಕ್ಕೆ ಸಾಗುತ್ತಿದ್ದ ಎರಡು ಟ್ಯಾಂಕರ್‌ಗಳನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಬಯಲಿಗೆ ಬಂದಿದೆ.

ಮೊದಲ ಟ್ಯಾಂಕರ್ (MP-09 HH-1908) ನಲ್ಲಿ 30,000 ಲೀಟರ್ ‘Denatured rectified spirit’ ಎಂದು ನಕಲಿ ದಾಖಲೆ ಸೃಷ್ಟಿಸಲಾಗಿತ್ತು. ಎರಡನೇ ಟ್ಯಾಂಕರ್ (KA-48 A-2218) ನಲ್ಲಿ 20,000 ಲೀಟರ್ ‘Ethanol’ ಸಾಗಿಸಲಾಗುತ್ತಿದೆ ಎಂದು ನಕಲಿ ದಾಖಲೆಗಳನ್ನು ತೋರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಸಂಶಯಗೊಂಡ ಅಧಿಕಾರಿಗಳು ಪ್ರೈಮರಿ ಡಿಸ್ಟಿಲರಿಯ ಕೆಮಿಸ್ಟ್‌ರನ್ನು ಸ್ಥಳಕ್ಕೆ ಕರೆಸಿ ಆಲ್ಕೋ ಮೀಟರ್ ಮೂಲಕ ಪರೀಕ್ಷಿಸಿದಾಗ, ಅದು ಮದ್ಯ ತಯಾರಿಕೆಗೆ ಬಳಸುವ ‘Extra Neutral Alcohol’ (ENA) ಎಂಬುದು ದೃಢಪಟ್ಟಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೋರ್ ಮೂಲದ ಮಗ್ನರ್ ಸಿಂಗ್ ಹಾಗೂ ಗದಗ ಜಿಲ್ಲೆಯ ರೋಣ ತಾಲೂಕಿನ ಧರ್ಮಪ್ಪ ಕಳಕಪ್ಪ ಕಟ್ಟಿಮನಿ ಎಂಬ ಇಬ್ಬರು ಚಾಲಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಲೋಕಾಯುಕ್ತ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ; ಶಾಸಕರ ಬಹಿರಂಗ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಗರಂ

ಜಪ್ತುಪಡಿಸಲಾದ 50,000 ಲೀಟರ್ ಮದ್ಯಸಾರದ ಅಂದಾಜು ಬೆಲೆ 40 ಲಕ್ಷ ರೂಪಾಯಿ ಹಾಗೂ ಎರಡು ಟ್ಯಾಂಕರ್‌ಗಳ ಬೆಲೆ 50 ಲಕ್ಷ ರೂಪಾಯಿ ಸೇರಿ ಒಟ್ಟು 90 ಲಕ್ಷ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಬಕಾರಿ ಇಲಾಖೆಯ ಮಂಗಳೂರು ವಿಭಾಗದ ಜಂಟಿ ಆಯುಕ್ತರಾದ ಎ.ಎಲ್. ನಾಗೇಶ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಅಮಾನುಲ್ಲಾ ಖಾನ್ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ಯಲ್ಲಾಪುರ ಅಬಕಾರಿ ಉಪ ಅಧೀಕ್ಷಕರು ಹಾಗೂ ದಾಂಡೇಲಿ ವಲಯದ ಅಬಕಾರಿ ನಿರೀಕ್ಷಕರು ಈ ಕುರಿತು ಪ್ರತ್ಯೇಕ ಮೊಕದ್ದಮೆಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...