ದಟ್ಟ ಮಂಜು ಆವರಿಸಿದ್ದರಿಂದ ಸರಣಿ ಅಪಘಾತ ಸಂಭವಿಸಿದ್ದು, 7 ಬಸ್ಗಳು ಮತ್ತು ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಗಳವಾರ ಮುಂಜಾನೆ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 4 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಅಪಘಾತದ ನಂತರ ಬಸ್ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ, ಮೃತರ ದೇಹಗಳು ಸುಟ್ಟು ಕರಕಲಾಗಿವೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಬಾಲ್ಡಿಯೊ ಪೊಲೀಸ್ ಠಾಣೆ ವ್ಯಾಪ್ತಿಯ ಮೈಲಿಗಲ್ಲು 127ರ ಬಳಿ ಬೆಳಿಗ್ಗೆ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಭಾರೀ ಮಂಜು ಮತ್ತು ಕಡಿಮೆ ಗೋಚರತೆಯಿಂದಾಗಿ ಹಲವಾರು ವಾಹನಗಳು ಡಿಕ್ಕಿಹೊಡೆದುಕೊಂಡಿದ್ದು, ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.




