ಮಧ್ಯಪ್ರದೇಶ | ದಲಿತ ಯುವಕನಿಗೆ ಥಳಿತ, ಮೂತ್ರ ಕುಡಿಯುವಂತೆ ಬಲವಂತ

Date:

ದಲಿತ ಯುವಕನನ್ನು ಅಪಹರಿಸಿ, ಆತನ ಮೇಲೆ ಹಲ್ಲೆ ನಡೆಸಿರುವ ಸವರ್ಣೀಯ ದುರುಳರು, ಆತನಿಗೆ ಮೂತ್ರ ಕುಡಿಯುವಂತೆ ಒತ್ತಾಯಿಸಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ.

ದಲಿತ ಸಮುದಾಯದ ಸಂತ್ರಸ್ತನು ಬೊಲೆರೊ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅವರು ಈ ಹಿಂದೆ, ಭಿಂಡ್‌ನ ನಿವಾಸಿ ಸೋನು ಬರು ಎಂಬಾತನ ಬಳಿ ಕೆಲಸ ಮಾಡಿದ್ದರು. ಇತ್ತೀಚೆಗೆ ಕೆಲಸ ತೊರೆದಿದ್ದರು. ಗ್ವಾಲಿಯರ್‌ನಲ್ಲಿರುವ ತನ್ನ ಪತ್ನಿಯ ತವರು ಮನೆಯಲ್ಲಿ ನೆಲೆಸಿದ್ದರು. ಅವರನ್ನು ಮೂವರು ಸವರ್ಣೀಯರು ಗ್ವಾಲಿಯರ್‌ನಿಂದ ಅಪಹರಿಸಿ, ದೌರ್ಜನ್ಯ ಎಸಗಿದ್ದಾರೆ.

ತಮ್ಮ ಮೇಲಾದ ದೌರ್ಜನ್ಯ/ಹಲ್ಲೆ ಕುರಿತು ಪೊಲೀಸರಿಗಡ ದೂರು ನೀಡಿರುವ ಸಂತ್ರಸ್ತ, “ಮೂರು ದಿನಗಳ ಹಿಂದೆ ಸೋನು ಬರುವಾ ಅವರು ಅಲೋಕ್ ಪಾಠಕ್ ಹಾಗೂ ಛೋಟು ಓಝಾ ಎಂಬವರ ಜೊತೆ ತನ್ನ ಪತ್ನಿಯ ತವರು ಮನೆಗೆ ಬಂದಿದ್ದರು. ತಮ್ಮ ಜೊತೆಯಲ್ಲೇ ಕೆಲಸ ಮಾಡುವಂತೆ ಒತ್ತಾಯಿಸಿದರು. ಆದರೆ, ನಾನು ನಿರಾಕರಿಸಿದೆ. ಬಳಿಕ ಅವರು ನನ್ನನ್ನು ಬೊಲೆರೊದಲ್ಲಿ ಬಲವಂತವಾಗಿ ಕೂಡಿ ಹಾಕಿ ಕರೆದೊಯ್ದರು” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಿಂಡ್‌ಗೆ ನನ್ನನ್ನು ಎಳೆದೊಯ್ದು, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದ್ದಾರೆ. ಬಲವಂತವಾಗಿ ಮದ್ಯ ಕುಡಿಸಿದ್ದಾರೆ. ಬಳಿಕ, ಮೂತ್ರವನ್ನು ಕುಡಿಯುವಂತೆ ಬಲವಂತಪಡಿಸಿದ್ದಾರೆ. ಅಲ್ಲದೆ ಅಕುಟುಪುರಾ ಗ್ರಾಮಕ್ಕೆ ನನ್ನನ್ನು ಕರೆದೊಯ್ದು ನನ್ನನ್ನು ಕಬ್ಬಿಣದ ಸರಪಳಿಯಿಂದ ಕಟ್ಟಿಹಾಕಿ, ರಾತ್ರಿಯಿಡೀ ಹಲ್ಲೆ ನಡೆಸಿದ್ದಾರೆ” ಎಂದು ಸಂತ್ರಸ್ತ ಆರೋಪಿಸಿದ್ದಾರೆ

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...