ಬಿಹಾರ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಾಗ, ಬಿಹಾರದಲ್ಲಿ ಜೆಎಸ್ಪಿ ನಾಯಕ ದುಲಾರ್ ಚಂದ್ ಹತ್ಯೆಯಾಗಿದೆ. ಅವರ ಹತ್ಯೆ ಪ್ರಕರಣದಲ್ಲಿ ಎನ್ಡಿಎ ಅಭ್ಯರ್ಥಿ ಅನಂತ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ದುಲಾರ್ ಚಂದ್ ಯಾದವ್ ಅವರು ಗುರುವಾರ ಮೊಕಾಮಾದಲ್ಲಿ ತಮ್ಮ ಸೋದರಳಿಯ ಪ್ರಿಯದರ್ಶಿ ಪಿಯೂಷ್ ಪರ ಪ್ರಚಾರ ನಡೆಸುತ್ತಿದ್ದರು. ಆ ವೇಳೆ, ಎನ್ಡಿಎ ಅಭ್ಯರ್ಥಿ ಅನಂತ್ ಸಿಂಗ್ ಬೆಂಬಲಿಗರು ಯಾದವ್ ಮೇಲೆ ಗುಂಡು ಹಾರಿಸಿ, ಕಾರಿನಿಂದ ಗುದ್ದಿ ಹತ್ಯೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.



