ಬಾಂಗ್ಲಾ ಜೊತೆ ಭಾರತ ನಿಕಟ-ಸ್ನೇಹ ಸಂಬಂಧ ಬಯಸುತ್ತದೆ

Date:

ಭಾರತವು ಬಾಂಗ್ಲಾ ಜೊತೆಗೆ ಸ್ನೇಹ ಸಂಬಂಧ ಬಯಸುತ್ತದೆ. ಬಾಂಗ್ಲಾದೇಶದಲ್ಲಿ ಮುಕ್ತ, ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಚುನಾವಣೆ ನಡೆಸಲು ಭಾರತವು ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಬಾಂಗ್ಲಾದೇಶವು ಕಳೆದ ಒಂದು ವರ್ಷದಿಂದ ಉದ್ವಿಗ್ನತೆಯಲ್ಲಿದೆ. ಪದೇ-ಪದೇ ಹಿಂಸಾಚಾರ ನಡೆಯುತ್ತಿದೆ. ಭಾರತದಲ್ಲಿ ರಕ್ಷಣೆ ಪಡೆದಿರುವ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾದೇಶ ಒತ್ತಾಯಿಸಿದೆ. ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷವನ್ನು ನಿಷೇಧಿಸಲಾಗಿದೆ. 17 ವರ್ಷಗಳ ನಂತರ ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್ ಢಾಕಾಗೆ ಮರಳಿದ್ದಾರೆ. ಇದೆಲ್ಲವೂ ಬಾಂಗ್ಲಾ ರಾಜಕೀಯದಲ್ಲಿ ಭಾರೀ ತಲ್ಲಣ ಉಂಟುಮಾಡಿದೆ. ಇದೆಲ್ಲದರ ನಡುವೆ ಬಾಂಗ್ಲಾ ಜೊತೆಗಿನ ಸಂಬಂಧದ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ‌ ಅವರು, “ಬಾಂಗ್ಲಾದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಸಂದರ್ಭದಲ್ಲಿ, ನಾವು ಬಾಂಗ್ಲಾದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಲು ಬಯಸುತ್ತೇವೆ. ಬಾಂಗ್ಲಾದೇಶದಲ್ಲಿ ಮುಕ್ತ, ನ್ಯಾಯಯುತ ಮತ್ತು ಎಲ್ಲರೂ ಸಕ್ರಿಯವಾಗಿ ತೊಡಗಿಸಿಕೊಳ್ಳುವಿಕೆಯ ಚುನಾವಣೆಗಳನ್ನು ನಾವು ಬೆಂಬಲಿಸುತ್ತೇವೆ. ಇದೇ ಸಂಧರ್ಭದಲ್ಲಿ ಲಂಡನ್‌ನಿಂದ ಬಿಎನ್‌ಪಿ ನಾಯಕನ ಮರಳುವಿಕೆಯನ್ನು ಗಮನಿಸಬೇಕಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...